ಪಾವಗಡ: ಬಟ್ಟೆ ಒಗೆಯಲು ಹೋಗಿದ್ದ ವೇಳೆ ಮಹಿಳೆಯೊಬ್ಬರು ನೀರುಪಾಲಾದ ಘಟನೆ ಪಾವಗಡ ತಾಲೂಕಿನ ಬ್ಯಾಡನೂರು ನೀರಿನ ಹಳ್ಳದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬಟ್ಟೆಗಳನ್ನು ತೊಳೆಯುವ ವೇಳೆ ನೀರಿನಲ್ಲಿ ಗ್ರಾಮದ ಗೋವಿಂದಪ್ಪ ಎನ್ನುವವರ ಪತ್ನಿ 35 ವರ್ಷದ ದೇವಿರಮ್ಮ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ದೇವಿರಮ್ಮ ಅವರಿಗಾಗಿ ಇದೀಗ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ನಡೆಸುತ್ತಿದ್ದು, ಈವರೆಗೆ ಅವರ ಪತ್ತೆ ಸಾಧ್ಯವಾಗಿಲ್ಲ.
ಪಾವಗಡ ತಾಲೂಕಿನ ಬ್ಯಾಡನೂರು ಗ್ರಾಮದಲ್ಲಿ ಇರುವಂತಹ ಶಂಕರಲಿಂಗನಕೆರೆ ಇತ್ತೀಚಿಗೆ ಕೋಡಿ ಬಿದ್ದಿತ್ತು. ಈ ಹಳ್ಳದ ನೀರು ಹರಿಯುವ ಸ್ಥಳದಲ್ಲಿ ದೇವಿರಮ್ಮ ಎನ್ನುವರು ಬಟ್ಟೆ ಸ್ವಚ್ಛಗೊಳಿಸಲು ಇಂದು ಬೆಳಗ್ಗೆ ತೆರಳಿದಾಗ ಈ ಘಟನೆ ಸಂಭವಿಸಿದೆ.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ತಾಲೂಕು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz