nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ

    May 14, 2026

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    • ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು
    • ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಭೇಟಿ ನೀಡಿದ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ ಗಿರಿನಾಥ್
    ರಾಜ್ಯ ಸುದ್ದಿ June 14, 2024

    ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಭೇಟಿ ನೀಡಿದ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ ಗಿರಿನಾಥ್

    By adminJune 14, 2024No Comments2 Mins Read
    bengaluru

    ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ವತಿಯಿಂದ ಬಿಡದಿಯಲ್ಲಿ ಸ್ಥಾಪಿಸುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಶೀಘ್ರ ಪರೀಕ್ಷಾರ್ಥವಾಗಿ ವಿದ್ಯುತ್ ಉತ್ಪಾದಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆಯನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ತ್ಯಾಜ್ಯವನ್ನು ಸರಿಯಾಗಿ ನೀಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.


    Provided by
    Provided by

    ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಂತರ ವಿದ್ಯುತ್ ಉತ್ಪಾದನೆಗಾಗಿ ಪರೀಕ್ಷಾರ್ಥವಾಗಿ ತ್ಯಾಜ್ಯದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

    11.5 ಮೆಗಾವಾಟ್ ವಿದ್ಯುತ್ ಉತ್ಪಾದನೆ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು 10 ಎಕರೆಯಲ್ಲಿ ಸ್ಥಾಪಿಸಲಾಗಿದ್ದು, ಒಟ್ಟು 260 ಕೋಟಿ ರೂ. ವೆಚ್ಚದಲ್ಲಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಿಸಲಾಗಿದೆ. ಪ್ರತಿನಿತ್ಯ 11.5 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದೆ.

    ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆ: ಪಾಲಿಕೆಯ ಸಂಸ್ಕರಣಾ ಘಟಕಗಳು, ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಲ್ಲಿ ಸಂಗ್ರಹವಾಗುವ ಆರ್‌ಡಿಎಫ್ ಅನ್ನು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ರವಾನಿಸಲಾಗುತ್ತದೆ.

    ಇಂಟಿಗ್ರೇಟೆಂಡ್ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಗಾಗಿ ಸ್ಥಳ ಪರಿಶೀಲನೆ: ಬೊಮ್ಮನಹಳ್ಳಿ ವಲಯ ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಸರ್ವೇ ಸಂಖ್ಯೆ 39ರಲ್ಲಿ ಲೋಕೋಪಯೋಗಿ ಇಲಾಖೆ ಒಡೆತನದ ಸುಮಾರು 170 ಎಕರೆ ಜಾಗವಿದ್ದು, ಆ ಜಾಗದಲ್ಲಿ ಇಂಟಿಗ್ರೇಟೆಂಡ್ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಗಾಗಿ ಸ್ಥಳ ಬಳಸಿಕೊಳ್ಳುವ ಸಲುವಾಗಿ ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು.

    ಲೋಕೋಪಯೋಗಿ ಇಲಾಖೆಯ ಜಾಗದಲ್ಲಿ ಸಮತಟ್ಟಾದ ಜಾಗ ಹಾಗೂ ಕ್ಯಾರಿ ಜಾಗ ಎಷ್ಟಿದೆ ಎಂಬುದನ್ನು ಪರಿಶೀಲಿಸಬೇಕು. ಜೊತೆಗೆ ಈ ಜಾಗವನ್ನು ಪಾಲಿಕೆಗೆ ಹಸ್ತಾಂತರ ಮಾಡಿಕೊಳ್ಳುವ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಕೂಡಲೆ ಪತ್ರ ಬರೆದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಈ ವೇಳೆ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಲೋಕೇಶ್, ಕಾರ್ಯಪಾಲಕ ಅಭಿಯಂತರರಾದ ಮಧುಸುಧನ್, ಕೆಪಿಟಿಸಿಎಲ್ ಮುಖ್ಯ ಅಭಿಯಂತರರಾದ ಎಸ್.ಆರ್ ಕಬಾಡೆ, ಬಿಬಿಎಂಪಿ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ

    May 14, 2026

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಸಾರ್ವಜನಿಕರು, ಅದರಲ್ಲೂ ಯುವ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಆನ್ ಲೈನ್ ಶಾಪಿಂಗ್ ನಲ್ಲಿ…

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.