nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

    November 11, 2025

    ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ

    November 11, 2025

    BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ

    November 10, 2025
    Facebook Twitter Instagram
    ಟ್ರೆಂಡಿಂಗ್
    • ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    • ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
    • BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
    • ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ
    • ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
    • ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
    • ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
    • ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಬಿಎಂಪಿ: ರಾಜಕಾಲುವೆ ಅಗಲೀಕರಣಕ್ಕಾಗಿ 60 ಮರ ಕತ್ತರಿಸಲು ನಿರ್ಧಾರ
    ರಾಜ್ಯ ಸುದ್ದಿ September 19, 2022

    ಬಿಬಿಎಂಪಿ: ರಾಜಕಾಲುವೆ ಅಗಲೀಕರಣಕ್ಕಾಗಿ 60 ಮರ ಕತ್ತರಿಸಲು ನಿರ್ಧಾರ

    By adminSeptember 19, 2022No Comments2 Mins Read
    bbmp

    ಬೆಂಗಳೂರು ಸೆಪ್ಟಂಬರ್ 19: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ನಗರದ ಬಡಾವಣೆಗಳಲ್ಲಿ ಮಳೆಯಿಂದ ಉಂಟಾಗುತ್ತಿದ್ದ ಪ್ರವಾಹ ಸಮಸ್ಯೆಯ ಕಡಿವಾಣಕ್ಕೆ ಮರಗಳಿಗೆ ಕೊಡಲಿ ಹಾಕಲು ನಿರ್ಧರಿಸಿದೆ.
    ಈ ಹಿಂದೆ ನಾಲ್ಕು ವರ್ಷದಿಂದಲೂ ನಗರದ ನ್ಯೂ ಬಿಇಎಲ್ ರಸ್ತೆಯ ಟೋನಿಡಾಲರ್ಸ್ ಕಾಲೋನಿಯಲ್ಲಿ ಮಳೆಗಾದಲ್ಲಿ ಜಲಾವೃತ ಸಮಸ್ಯೆ ಉಂಟಾಗುತ್ತಿದೆ. ಈ ಸಂಬಂಧ ಈ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಇಲ್ಲಿನ ರಾಜಕಾಲುವೆ (ಚರಂಡಿಯನ್ನು) ಅಗಲಗೊಳಿಸಲು ತೀರ್ಮಾನಿಸಿದೆ. ಅದಕ್ಕಾಗಿ ಸುಮಾರು 60 ಮರಗಳನ್ನು ಧರೆಗುರುಳಿಸಲು ನಿರ್ಧರಿಸಿದೆ. ಹೀಗಾಗಿ ಇಲ್ಲಿನ ನಿವಾಸಿಗಳು ಬಿಬಿಎಂಪಿ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಈ ಕಾಲೋನಿಯಲ್ಲಿ ಕೊಳಚೆ ಸಹಿತ ದುರ್ನಾತ, ಗಬ್ಬು ವಾಸನೆ ಬೀರುವ ನೀರು ನಿರಂತರವಾಗಿ ಹರಿಯುತ್ತಲೇ ಇರುತ್ತದೆ. ಹೀಗಾಗಲೂ ಈ ಭಾಗದಲ್ಲಿ ಕೊಳಚೆ ನೀರು ಸಮರ್ಪಕವಾಗಿ ಹರಿಯದಿರುವುದು ಎಂದು ಸ್ಥಳಿಯರು ದೂರಿದ್ದರು. ಈ ಬಗ್ಗೆ ಗಮನ ಹರಿಸಿರುವ ಬಿಬಿಎಂಪಿ ಅಧಿಕಾರಿಗಳು ಪಕ್ಕದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕಚೇರಿಯ ಸಮೀಪದ ಮಳೆನೀರು ಚರಂಡಿಯನ್ನು ವಿಸ್ತರಿಸಲು ಪಾಲಿಕೆ ಮುಂದಾಗಿದೆ. ಇಲ್ಲಿನ ಸಮಸ್ಯೆ ಬಗೆಹರಿಸಬೇಕಾದರೆ ಚರಂಡಿ ಮೇಲೆಲ್ಲ ಆವರಿಸಿರುವ ದಟ್ಟವಾದ ಅನೇಕ ಮರಗಳ ಪೈಕಿ ಕನಿಷ್ಠ 60ಮರಗಳನ್ನು ತೆರವು ಮಾಡಬೇಕಿದೆ ಎಂದು ಮಳೆನೀರು ಒಳಚರಂಡಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.


    Provided by
    Provided by

    ಈ ಭಾಗದಲ್ಲಿ ಒಳಚರಂಡಿ ಒತ್ತುವರಿ ಮಾಡಿಕೊಂಡಿರುವ ಮನೆಗಳಿಂದ ನಿತ್ಯ ತ್ಯಾಜ್ಯವನ್ನು ಇಲ್ಲಿಯೇ ಸುರಿಯಲಾಗುತ್ತಿದೆ. ಚರಂಡಿಯನ್ನು ಅಗಲಗೊಳಿಸುವುದೇ ಪರಿಹಾರದ ಭಾಗವೆಂದಾಗಲಿ ಅಥವಾ ಮರ ನಾಶ ಮಾಡುವುದೇ ಮುಖ್ಯ ಎಂದು ನಾವು ಭಾವಿಸಿಲ್ಲ. ಈ ಕಾರಣಕ್ಕೆ ಬಿಬಿಎಂಪಿ ಒತ್ತುವರಿ ತೆರವು ಮಾಡಿ ಒಳಚರಂಡಿ ಅಗಲೀಕರಣಗೊಳಿಸಲು ಚಿಂತನೆ ನಡೆಸಿದೆ.

    ಕೆಲವು ನಿವಾಸಿಗಳು ಮಳೆನೀರು ಚರಂಡಿಯನ್ನು ವೈಯಕ್ತಿಕ ಡಂಪಿಂಗ್‌ಯಾರ್ಡ್‌ ಆಗಿ ಬಳಸುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಇಲ್ಲಿನ ಬಹುಕಾಲದ ನಿವಾಸಿಯೊಬ್ಬರು ಸಮಸ್ಯೆ ಕುರಿತು ತಿಳಿಸಿದ್ದಾರೆ. ಚರಂಡಿ ಅಗಲೀಕರಣದ ಗುತ್ತಿಗೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಅಗಲೀಕರಣ ಯೋಜನೆಗೆ ಸುಮಾರು 16 ಕೋಟಿ ರೂ. ತಗುಲಬಹುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

    ಡಾಲರ್ಸ್ ಕಾಲೋನಿಯಲ್ಲಿನ ರಾಜಕಾಲುವೆ ತಡೆಗೋಡೆ ಕುಸಿದಿದೆ. ಈ ತಡೆಗೋಡೆ ಮರು ನಿರ್ಮಿಸಿ ಚರಂಡಿ ಅಗಲೀಕರಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿಯು ಯೋಜನೆಗಾಗಿ ಅಲ್ಲಿನ ಮರಗಳನ್ನು ಕಡಿಯಲು ಬಿಡುವುದಿಲ್ಲ ಎಂದು ಆರ್‌ಎಂವಿ ಎರಡು ಮತ್ತು ಮೂರನೇ ಬ್ಲಾಕ್ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು ತಿಳಿಸಿದ್ದಾರೆ.

    ಅತಿಕ್ರಮಣ ಪ್ರದೇಶಗಳಲ್ಲಿ ಮನೆ ನಿರ್ಮಾಣ, ಆ ಮನೆಗಳಿಂದ ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಕೊಳಾಯಿಗಳಿಂದ ಸಮಸ್ಯೆ ಉಂಟಾಗಿದೆ. ಮನೆಗಳ ಕೊಳಚೆ ನೀರು ರಾಜಕಾಲುವೆಗೆ ಸೇರುತ್ತಿದೆ. ಭಾರಿ ಪ್ರಮಾಣದಲ್ಲಿ ಮಳೆ ಆದಾಗ ಕೊಳಚೆ ನೀರು ಸಹಿತ ಮಳೆ ನೀರು ಉಕ್ಕಿ ಹರಿದು ಸಮಸ್ಯೆ ಉಲ್ಬಣಿಸುತ್ತಿದೆ. ಆದಾಗಿಯೂ ಸಹ ಇಲ್ಲಿನ ನಿವಾಸಿಗಳು ಬೆಳೆದು ನಿಂತರ ಮರಗಳನ್ನು ಕಡಿಯಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
    ಇಲ್ಲಿನ ಮರಗಳನ್ನು ಕಡಿಯದೇ ಬೇರೆಡೆ ಸ್ಥಳಾಂತರಿಸಲು ಬಿಬಿಎಂಪಿಯು ಅರಣ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಬಿಬಿಎಂಪಿಯ ಒಳಚರಂಡಿ ವಿಭಾಗದ ಅಧಿಕಾರಿ ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

    November 11, 2025

    ತುಮಕೂರು: ತುಮಕೂರಿನ ಶ್ರೀ ರಂಗರಂಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತನ್ನ 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವವನ್ನು “ಚಿಲಿಪಿಲಿ!?” ಶೀರ್ಷಿಕೆಯಲ್ಲಿ…

    ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ

    November 11, 2025

    BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ

    November 10, 2025

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.