ಬೆಂಗಳೂರು: ರಸ್ತೆಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚಲು ಬಿಬಿಎಂಪಿ ಮುಂದಾಗಿದೆ. ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ನಡೆಸಿದೆ, ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ನಡೆಸಲಾಗಿದೆ.
ಪಂತರಪಾಳ್ಯ — ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಉಂಟಾಗಿದ್ದ ರಸ್ತೆಗುಂಡಿಯನ್ನು ಹೊಸ ಯಂತ್ರದ ಮೂಲಕ ಅಧಿಕಾರಿಗಳ ಸಮ್ಮುಖದಲ್ಲಿ ದುರಸ್ತಿಗೊಳಿಸಲಾಯಿತು.
ತ್ವರಿತವಾಗಿ ಗುಂಡಿ ಮುಚ್ಚುವುದಲ್ಲದೆ ಮತ್ತೆ ಗುಂಡಿ ಉಂಟಾಗದಂತೆ ಈ ಮಾದರಿಯನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಆರ್.ನಗರ ವಲಯ ಆಯುಕ್ತ ಅಜಯ್, ಜೆಟ್ ಪ್ಯಾಚರ್ ಯಂತ್ರದ ಮೂಲಕ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚಬಹುದಾಗಿದೆ. ಒಂದು ಬಾರಿಗೆ 150 ರಿಂದ 180 ಚ.ಮೀ. ಅಗಲದ ಗುಂಡಿಗಳನ್ನು ಮುಚ್ಚಬಹುದಾಗಿದೆ. ಗುಂಡಿ ಮುಚ್ಚಿದ ಕೂಡಲೆ ವಾಹನಗಳು ಅದರ ಮೇಲೆ ಸರಾಗವಾಗಿ ಸಂಚಾರ ಮಾಡಬಹುದಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q