ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಹತ್ತಿರದ ದೊಡ್ಡೇಗೌಡನ ಪಾಳ್ಯದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಕರಡಿಯೊಂದು, ಸೋಮವಾರ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ತಾಲ್ಲೂಕಿನ ಸಿ.ಎನ್. ದುರ್ಗಾ ಹೋಬಳಿ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದ ರೈತರ ಜಮೀನಿನಲ್ಲಿ ಕರಡಿ ಕಾಣಿಸಿಕೊಂಡು, ಬೆಳೆಗಳನ್ನು ನಾಶ ಮಾಡುತ್ತಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು ಮತ್ತು ರೈತರು ಕರಡಿ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕರಡಿ ಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದರು. ಜಮೀನಿನಲ್ಲಿ ಸೂಕ್ತ ಸ್ಥಳದಲ್ಲಿ ಬೋನನ್ನು ಇಟ್ಟು ಅದರೊಳಗೆ ಹಲಸಿನ ಹಣ್ಣು ಮತ್ತು ಜೇನುತುಪ್ಪವನ್ನು ಇಡಲಾಗಿತ್ತು.
ತಡರಾತ್ರಿ ಆಹಾರ ಹರಿಸಿ ಬಂದ ಕರಡಿಯು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ಕರಡಿಯನ್ನು ಕಂಡು ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಂತರ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ , ತಾಲ್ಲೂಕಿನ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದಲ್ಲಿ ರೈತರ ಜಮೀನಿಗೆ ಕರಡಿಯು ಏಕಾಏಕಿ ದಾಳಿ ನಡೆಸಿ ಬೆಳೆಯನ್ನು ನಾಶ ಮಾಡುತ್ತಿತ್ತು, ನಂತರ ಗ್ರಾಮಸ್ಥರು ಇಲಾಖೆಗೆ ತಿಳಿಸಿದ ಕೂಡಲೇ ಅಪರೇಷನ್ ಕಾರ್ಯಾಚರಣೆ ಆರಂಭಿಸಿ ಸೂಕ್ತ ಸ್ಥಳದಲ್ಲಿ ಬೋನನ್ನು ಇಡಲಾಗಿತ್ತು, ಆಹಾರ ಹರಿಸಿ ಬಂದ ಕರಡಿ ಸೋಮವಾರ ಬೋನಿಗೆ ಬಿದ್ದಿದೆ, ಯಾವುದೇ ಆತಂಕ ಪಡದಂತೆ ರೈತರಿಗೆ ತಿಳಿಸಿ ಇಂತಹ ಸನ್ನಿವೇಶಗಳು ಮತ್ತೆ ಆರಂಭವಾದರೆ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ರೈತರು, ಗ್ರಾಮಸ್ಥರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA