nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ ನಾನೇ ನಿಮ್ಮ ಮನೆ ಮಗ, ಶಾಸಕ, ಸಚಿವ, ಡಿಸಿಎಂ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ July 2, 2024

    ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ ನಾನೇ ನಿಮ್ಮ ಮನೆ ಮಗ, ಶಾಸಕ, ಸಚಿವ, ಡಿಸಿಎಂ: ಡಿ.ಕೆ.ಶಿವಕುಮಾರ್

    By adminJuly 2, 2024No Comments2 Mins Read
    dk shivakumar

    ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

    ವಿರುಪಾಕ್ಷಿಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

    ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.

    “ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ” ಎಂದು ಹೇಳಿದರು.

    ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. 80 ಸಾವಿರ ಮತಗಳನ್ನು ನೀಡಿದ ನಿಮಗೆ ಕೋಟಿ ನಮಸ್ಕಾರಗಳು” ಎಂದು ತಿಳಿಸಿದರು.

    ಜನರ ಮನವಿಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಅವರು, ಕಾರ್ಯಕ್ರಮದಲ್ಲಿ ತೆಗೆದುಕೊಂಡ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆಯೇ ಎಂದಾಗ “ಜನರ ಕಷ್ಟಗಳಿಗೆ ಮಾಧ್ಯಮಗಳ ಕಣ್ಣುಗಳೇ ಸಾಕ್ಷಿ. ಈಗಾಗಲೇ 5 ಸಭೆಗಳನ್ನು ನಡೆಸಲಾಗಿದೆ. ಇನ್ನೂ 4 ಸಭೆಗಳನ್ನು ನಡೆಸಲಾಗುವುದು. ಜನರು ತಮ್ಮ ಸಮಸ್ಯೆಗಳು ಬಗೆಹರಿಯುತ್ತಿರುವ ಕಾರಣಕ್ಕೆ ಮನವಿ ಸಲ್ಲಿಕೆ ಮಾಡುತ್ತಾ ಇರುವುದು” ಎಂದು ಹೇಳಿದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    ತುಮಕೂರು :ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪಾವಸಂದ್ರ ಗ್ರಾಮದ ಕಲ್ಲುಕ್ವಾರಿಯಲ್ಲಿ ಮುಂಗಡ ಹಣದ ನೆಪದಲ್ಲಿ ಕಳೆದ 25 ವರ್ಷಗಳಿಂದ…

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.