nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ನಿಧಿ ಸಿಕ್ಕರೂ ಆಸೆ ಪಡದ ಬಾಲಕ: ಲಕ್ಕುಂಡಿಯ ಪ್ರಜ್ವಲ್ ರಿತ್ತಿ ಪ್ರಾಮಾಣಿಕತೆಗೆ ಇಡೀ ರಾಜ್ಯವೇ ಫಿದಾ!

    January 24, 2026

    ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!

    January 24, 2026

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ನಿಧಿ ಸಿಕ್ಕರೂ ಆಸೆ ಪಡದ ಬಾಲಕ: ಲಕ್ಕುಂಡಿಯ ಪ್ರಜ್ವಲ್ ರಿತ್ತಿ ಪ್ರಾಮಾಣಿಕತೆಗೆ ಇಡೀ ರಾಜ್ಯವೇ ಫಿದಾ!
    • ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!
    • ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು: ಸುಪ್ರೀಂ ಕೋರ್ಟ್ ತೀರ್ಪು ಜಾರಿಗೆ ಒತ್ತಾಯ! 
    ಜಿಲ್ಲಾ ಸುದ್ದಿ August 21, 2022

    ಹಿರಿಯೂರು: ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು: ಸುಪ್ರೀಂ ಕೋರ್ಟ್ ತೀರ್ಪು ಜಾರಿಗೆ ಒತ್ತಾಯ! 

    By adminAugust 21, 2022No Comments2 Mins Read
    hiriyuru

    ಹಿರಿಯೂರು: ವೃತ್ತಿ ಖಾಯಂ ಮಾಡುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಿರಿಯೂರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

    ಅಂಗನವಾಡಿ ಫೆಡರೇಶನ್ ಎಐಟಿಯುಸಿಯ ತಾಲ್ಲೂಕು ಅಧ್ಯಕ್ಷರಾದ ಬಿ ಪಿ ನಿರ್ಮಲಾ ಹಾಗೂ ಗೌರವ ಅಧ್ಯಕ್ಷರಾದ ಎಸ್ ಪಿ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ  ಸೇವಾಭತ್ಯೆ , ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.


    Provided by
    Provided by

    ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಲಾಡ್ಜ್ ಬಳಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ  ಗಾಂಧಿ ಸರ್ಕಲ್  ನಿಂದ ಸಾಗಿ ಹಿರಿಯೂರು ತಾಲ್ಲೂಕು ಕಛೇರಿ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆಯ ಉದ್ದಕ್ಕೂ ಸರ್ಕಾರವ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

    ಪ್ರತಿಭಟನೆಯ ಬಳಿಕ  ನಮ್ಮ ತುಮಕೂರು ಜೊತೆಗೆ ಮುಖಂಡರಾದ ಕ್ರಿಷ್ಟಿ ಜೌನಿತ ಶಿಭ, ತಾಲ್ಲೂಕು ಅಧ್ಯಕ್ಷರಾದ ಬಿ ಪಿ ನಿರ್ಮಲ,ಎಸ್ ಸಿ ಕುಮಾರ್  ಮಾತನಾಡಿ,  46 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸದ ಭದ್ರತೆ, ಕನಿಷ್ಠ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಪಿಂಚಣಿ, ಭವಿಷ್ಯ ನಿಧಿ, ಗ್ರಾಚ್ಯುಯಿಟಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಬೇಡಿಕೆ ಈಡೇರಿಸಲು ಕೋರಿ ನೂರಾರು ಪ್ರತಿಭಟನೆ, ಮುಷ್ಕರ ನಡೆಸಿದರೂ  ಪ್ರಯೋಜನಕಾರಿಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರನ್ನು, ಸಹಾಯಕಿಯರನ್ನು  ವಿವಿಧ ಕಾರ್ಯಕ್ರಮಗಳಲ್ಲಿ ಮನಬಂದಂತೆ ಬಳಸಿಕೊಳ್ಳುತ್ತಿದೆ. ಆದರೆ, ಅವರಿಗೆ ಕನಿಷ್ಠ ವೇತನ ಕೂಡ ನೀಡುತ್ತಿಲ್ಲ. ಮೂಲಕ ಸರ್ಕಾರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮಾತ್ರವಲ್ಲದೇ ಮಹಿಳಾ ವಿರೋಧಿ ನೀತಿ ತಾಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು. ಎಲ್ ಕೆ ಜಿ ಮತ್ತು ಯು ಕೆ ಜಿ ಮಕ್ಕಳಿಗೆ ಅಂಗನವಾಡಿಯಲ್ಲೇ ತರಗತಿಗಳನ್ನು ತೆರೆಯಬೇಕು. ಅಂಗನವಾಡಿಯಿಂದ ಬೇರೆ ಶಾಲೆಗೆ ಹೋಗುವಾಗ ವರ್ಗಾವಣೆ ಪತ್ರದ ವ್ಯವಸ್ಥೆ ಕಲ್ಪಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿ ಎಂದು ಪರಿಗಣಿಸಬೇಕು. ಮಕ್ಕಳಿಗೆ  ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ನೀಡಬೇಕು. ನಮ್ಮನ್ನು ಸಹ ಶಿಕ್ಷಕಿಯಾಗಿ ಪರಿಗಣಿಸಿ ಸೇವೆ ಖಾಯಂಗೊಳಿಸಿ ಜೀವನಕ್ಕೆ ಭದ್ರತೆ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಬಿ.ಪಿ.ನಿರ್ಮಲ , ಎಸ್.ಸಿ.ಕುಮಾರ್ , ಜಯಮ್ಮ ಹೆಚ್. , ಇ.ಕೆಂಚಮ್ಮ, ಚಿಂತಾಮಣಿ, ಕೆ.ಕೆಂಚಮ್ಮ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!

    January 24, 2026

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನದ ನಿಧಿ ಸಿಕ್ಕರೂ ಆಸೆ ಪಡದ ಬಾಲಕ: ಲಕ್ಕುಂಡಿಯ ಪ್ರಜ್ವಲ್ ರಿತ್ತಿ ಪ್ರಾಮಾಣಿಕತೆಗೆ ಇಡೀ ರಾಜ್ಯವೇ ಫಿದಾ!

    January 24, 2026

    ಗದಗ: ಕಷ್ಟದ ಬದುಕಿನಲ್ಲೂ ಪ್ರಾಮಾಣಿಕತೆಯನ್ನು ಮರೆಯದ 14 ವರ್ಷದ ಬಾಲಕನೊಬ್ಬ ತನಗೆ ಸಿಕ್ಕ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ನಿಧಿಯನ್ನು…

    ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!

    January 24, 2026

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.