nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    ಜಿಲ್ಲಾ ಸುದ್ದಿ November 18, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    By adminNovember 18, 2025No Comments2 Mins Read
    beladakuppe sri mahadeswaraswamy

    ಸರಗೂರು:  ತಾಲೂಕಿನ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಕಡೆಕಾರ್ತಿಕ ಮಾಸದ ಜಾತ್ರಾ ಮಹೋತ್ಸವ ಅಂಗವಾಗಿ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು.

    ಹುಲಿ ದಾಳಿಯಿಂದ ಭಯಭೀತರಾಗಿದ್ದ ಸರಗೂರು ತಾಲೂಕು ಸೇರಿದಂತೆ ಇತರೆ ತಾಲೂಕಿನ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಮಾನವ–ಕಾಡುಪ್ರಾಣಿಗಳಿಗೆ ಕಿಂಚಿಂತ್ತೂ ತೊಂದರೆಯಾಗದಂತೆ ಅರಣ್ಯ ಇಲಾಖೆ, ಮುಜರಾಯಿ ಇಲಾಖೆಯು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದು, ವಿಶೇಷವಾಗಿತ್ತು.


    Provided by
    Provided by

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಹುಲಿ ಹಾವಳಿಯೂ ಜೋರಾಗಿದ್ದರಿಂದ ಅರಣ್ಯ ಇಲಾಖೆ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಿಕೊಂಡು ಪೊಲೀಸರ ಸಮ್ಮುಖದಲ್ಲಿ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹದೇಶ್ವರಸ್ವಾಮಿಯ ಕೊಂಡೋತ್ಸವ ಆಚರಿಸಿದರು. ಇದರ ಅಂಗವಾಗಿ ದೇವಸ್ಥಾನವನ್ನ ವಿವಿಧ ಬಣ್ಣಗಳಿಂದ ಬಳಿದು, ಸಿಂಗರಿಸಿದ್ದರು. ದೇವಸ್ಥಾನವನ್ನು ಮಧುವಣಗಿತ್ತಿಯಂತೆ ಅಲಂಕೃತಗೊಳಿಸಿದ್ದರು. ಇದಲ್ಲದೆ ಕಾಡಿನೊಳಗಿನ ರಸ್ತೆಯಲ್ಲಿ ಧೂಳು ಎಳದಂತೆ ನೀರು ಹಾಕಲಾಗಿತ್ತು.

    ಶ್ರೀಕ್ಷೇತ್ರ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೂ ಭಾನುವಾರ ನಡೆದವು. ಸೋಮವಾರ ದೇವರಿಗೆ ದೇವಸ್ಥಾನದ ಸಮೀಪದಲ್ಲಿರುವ ಕೆರೆಯಿಂದ ವಿವಿಧ ಪೂಜೆಗಳನ್ನು ಸಲ್ಲಿಸಿ, ಹಾಲು ಹರವಿ ಸೇವೆ ತೆಗೆದುಕೊಂಡು ದೇವರನ್ನು ದೇವಾಲಯದವರೆಗೂ ಉದ್ಭವಸ್ಥಾನಕ್ಕೆ ಕರೆದೊಯ್ಯಲಾಯಿತು. ವೀರಗಾಸೆ ಕುಣಿತ, ಸರಳ ವಾದ್ಯಗೋಷ್ಠಿ ಮೊಳಗಲಿವೆ. ನಂತರ ಮಧ್ಯಾಹ್ನ 12ಕ್ಕೆ ಕೊಂಡೋತ್ಸವ ಜರುಗಿತು. ಇದರೊಂದಿಗೆ ಎಣ್ಣೆಮಜ್ಜನ ಮತ್ತು ಪ್ರಸಾದ ವಿನಿಯೋಗ ನಡೆಯಿತು.

    ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ:

    ಜಾತ್ರಾ ಮಹೋತ್ಸವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸ್ ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಉಪ ನಿರೀಕ್ಷಕ ಕಿರಣ್ ನೇತೃತ್ವದಲ್ಲಿ ಭದ್ರತೆಗಾಗಿ 300 ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಿಕೊಳ್ಳಲಾಗಿತ್ತು. ಭಕ್ತರ ಪ್ರಯಾಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧೆಡೆಯಿಂದ 150ಕ್ಕೂ ಹೆಚ್ಚು ಸಾರಿಗೆ ಬಸ್ ಸೌಲಭ್ಯ ಒದಗಿಸಲಾಗಿತ್ತು. ನ.18ಕ್ಕೆ ರುದ್ರಾಕ್ಷಿ ಮಂಟಪ, ಹುಲಿವಾಹನ, ನಂದಿಧ್ವಜದೊಂದಿಗೆ ರಥೋತ್ಸವ ಇರಲಿದೆ.

    ಬಸ್ ತಂಗುದಾಣ:

    ಅರಣ್ಯದೊಳಗೆ ದೇವಸ್ಥಾನವಿರುವ ಕಾರಣ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚೈನ್‌ ಗೇಟ್ ಬಳಿ 8 ಎಕರೆಗೂ ಮೀರಿದ ಜಮೀನಿನನ್ನು ಸಮತಟ್ಟು ಮಾಡಲಿದ್ದು, ಸ್ಕೂಟರ್, ಬೈಕ್, ತ್ರಿ ಚಕ್ರ ವಾಹನ, ಕಾರು ಸೇರಿದಂತೆ ಖಾಸಗಿ ವಾಹನಗಳಿಗೆ ತಂಗುದಾಣ ನಿರ್ಮಿಸಲಾಗಿತ್ತು. ಅನಾರೋಗ್ಯಕ್ಕೆ ತುತ್ತಾದವರಿಗೆ ತಾತ್ಕಾಲಿವಾಗಿ ಆರೋಗ್ಯ ಸೇವಾ ಕೇಂದ್ರ ತೆರೆದಿದ್ದರು. ಶುದ್ಧ ಕುಡಿಯುವ ನೀರು ಒದಗಿಸಿಕೊಡಲಾಗುತ್ತಿತ್ತು.

    ಬ್ಯಾರಿಕೇಡ್:

    ಜಾತ್ರಾ ಮಾಳದಲ್ಲಿ ಜಾತ್ರೆಯನ್ನು ಕಣ್ತುಂಬಿಕೊಂಡು ಬಳಿಕ ಯುವಕರು, ಯುವತಿಯರು ಕಾಡಿನೊಳಗೆ ಹೋಗಬಹುದು ಎಂಬ ಉದ್ದೇಶದಿಂದ ದೇವಸ್ಥಾನದ ಸುತ್ತಲೂ ಪೊಲೀಸ್ ಬ್ಯಾರಿಕೇಡ್‌ ಗಳನ್ನು ಅಳವಡಿಸಲಾಗಿತ್ತು. ಚನ್ನಗುಂಡಿ ಗ್ರಾಮಸ್ಥರು ಭಕ್ತರಿಗೆ ಅನ್ನ ಸಂತರ್ಪಣೆ ಆಯೋಜಿಸಿದ್ದರು. ಬ್ಯಾರಿಕೇಡ್ ದಾಟಿ ಹೋದವರಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಎಚ್ಚರಿಕೆ ನೀಡುತ್ತಿದ್ದು ಕಂಡು ಬಂತು.

    ಶಾಸಕ ಅನಿಲ್ ಚಿಕ್ಕಮಾದು, ನಂಜನಗೂಡು ಶಾಸಕ ದರ್ಶನ್‌ ಧ್ರುವನರಾಯಣ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮಹೇಶ್ ದೆಗ್ಗಲಹುಂಡಿ, ಸಿಎಫ್ ಪ್ರಭಾಕರನ್, ಎಸಿಎಫ್ ಡಿ.ಪರಮೇಶ್, ಮುಖಂಡರು ಪಿ. ರವಿ, ಭಾಗ್ಯಲಕ್ಷ್ಮಿ, ಪ್ರಕಾಶ್ , ಶಿವರಾಜು, ಸೌಮ್ಯ ಮಂಜುನಾಥ, ಭಾಗ್ಯ ಕೆಂಪಸಿದ್ದ, ಮಂಜುನಾಥ, ಉಮೇಶ್, ಆರ್‌ಎಫ್‌ ಒಗಳಾದ ಅಮೃತೇಶ್, ಕೃಷ್ಣ, ಶಿವಕುಮಾರ್, ನಾರಾಯಣ್, ದೇವಸ್ಥಾನ ಪಾರುಪತ್ತೇದಾರ ರಾಕೇಶ್‌ ಗೌಡ, ಚಿಕ್ಕದೇವಮ್ಮನ ಬೆಟ್ಟದ ಪಾರುಪತ್ತೇದಾರ ಮಹದೇವಸ್ವಾಮಿ, ಅರ್ಚಕ ಮಹದೇವಸ್ವಾಮಿ, ಚಿಕ್ಕದೇವಮ್ಮನ ಬೆಟ್ಟದ ಅರ್ಚಕರು ಸೇರಿದಂತೆ ಅರಣ್ಯಾಧಿಕಾರಿಗಳು, ಭಕ್ತರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.