ಹಿರಿಯೂರು: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿವೆ, ಕೊರೊನಾ ಸಂಕಷ್ಟದಿಂದ ಇದೀಗ ತಾನೇ ಸುಧಾರಿಸಿಕೊಳ್ಳುತ್ತಿರುವ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿಹೋಗಿದ್ದಾರೆ ಎಂದು ಡಾ.ಸುಜಾತಾ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಡಿ.ಸುಧಾಕರ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಕೇಂದ್ರ – ರಾಜ್ಯ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ವಿನೂತನ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ನಂತಹ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗುತ್ತಲೇ ಇದ್ದು, ಇದರಿಂದ ಸಾಮಾನ್ಯ ಜನರು ಪರದಾಡುವಂತಾಗಿದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರವೇ ಜನರಿಗೆ ಸಂಕಷ್ಟವನ್ನು ನೀಡುತ್ತಿರುವುದು ನಿಜಕ್ಕೂ ಖಂಡನೀಯ ಎಂದರು.
ಕಾಂಗ್ರೆಸ್ ಕಚೇರಿಯ ವೇಳೆ ಗ್ಯಾಸ್ ಸಿಲಿಂಡರ್ ಮತ್ತು ಬೈಕಿಗೆ ಹಾರ ಹಾಕುವ ಜೊತೆಗೆ ತಟ್ಟೆಯನ್ನು ಸೌಟಿನಿಂದ ಬಾರಿಸಿ, ಧಿಕ್ಕಾರ ಕೂಗುವ ಮೂಲಕ ಬೆಲೆ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ , ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ.ಎಸ್. ಮಂಜುನಾಥ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್, ಅಮೃತೇಶ್ವರ ಸ್ವಾಮಿ , ಜಿಲ್ಲಾ ಪಂಚಾಯತಿ ಸದಸ್ಯರಾದ ನಾಗೇಂದ್ರ ನಾಯ್ಕ , ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ ಮುರುಳಿಧರನ್ ಹಿರಿಯೂರು , ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ , ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ರಜೀಯಾ ಸುಲ್ತಾನ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರು ಹಾಗೂ ಪತ್ರಿಕಾ ಸಂಘದ ಅಧ್ಯಕ್ಷರು ಹಾಗೂ ಎಸ್ ಸಿ ಘಟಕದ ಅಧ್ಯಕ್ಷರಾದ ಜಿ.ಎಲ್.ಮೂರ್ತಿ , ಗಿಡ್ಡೋಬನಹಳ್ಳಿ ಅಶೋಕ್ , ಹನುಮಂತ, ಧನುಶ್ , ಗಿರೀಶ್, ಜ್ಞಾನೇಶ್ , ಕಾರ್ಮಿಕ ವಿಭಾಗದ ಶಿವಕುಮಾರ್ ವಿ. ಇತರರು ಉಪಸ್ಥಿತರಿದ್ದರು .
ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5