ನವದೆಹಲಿ: ಬೆಲ್ಲದ ಮೇಲೆ ಶೇ.5 ಜಿಎಸ್ಟಿ ವಿಧಿಸಿರುವುದನ್ನು ವಾಪಸ್ ಪಡೆಯಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಗುರುವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸುಮಲತಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಮನವಿ ಸಲ್ಲಿಸಿದರು.
ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿನ ಕಬ್ಬು ಬೆಳೆಗಾರರಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿನ ಬೆಳೆಗಾರರಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ದರ (ಎಫ್ ಆರ್ ಪಿ) ಕಡಿಮೆಯೇ ಇದೆ ಎಂದಿದ್ದಾರೆ.
ಉತ್ತರದ ರಾಜ್ಯಗಳನ್ನು ಹೋಲಿಕೆ ಮಾಡಿದಾಗ ಕರ್ನಾಟಕದಲ್ಲಿ ಇರುವ ಬೆಲ್ಲ ತಯಾರಿಕಾ ಘಟಕಗಳ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ವಿವರಿಸಿದರು.
ಮಂಡ್ಯ ಜಿಲ್ಲೆ ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಕೂಡ ಕಬ್ಬು ಬೆಳೆಗಾರರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ವಿತ್ತ ಸಚಿವರಿಗೆ ವಿವರಿಸಿದರು.