nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
    ಜಿಲ್ಲಾ ಸುದ್ದಿ July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    By adminJuly 11, 2026No Comments4 Mins Read
    bellary district guarantee

    ಬಳ್ಳಾರಿ:  ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಕೇಂದ್ರ ಕಚೇರಿ ಪಟ್ಟಿ ಪ್ರಕಾರ 5,972 ಮಂದಿ ಮರಣ ಹೊಂದಿದ ಫಲಾನುಭವಿಗಳಾಗಿದ್ದು, ಅವರಲ್ಲಿ 3,748 ಜನರಿಗೆ ಯಾವುದೇ ಹಣ ಜಮೆಯಾಗಿಲ್ಲ. ಉಳಿದ 2,224 ಮೃತರ ಖಾತೆಗೆ ಜಮೆಯಾಗಿರುವ ಒಟ್ಟು 2,28,96,000 ರೂ. ಹಣವನ್ನು ಸರ್ಕಾರದ ನಿಯಮಾವಳಿಗಳಂತೆ ನಾಮಿನಿಗಳ ಒಪ್ಪಿಗೆ ಪಡೆದು ಮರುಪಾವತಿ ಮಾಡಿಕೊಳ್ಳಲು ಬ್ಯಾಂಕುಗಳೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದು ಜಿಲ್ಲಾ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಹೇಳಿದರು.

    ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಕೋಟೆ ಪ್ರದೇಶದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಯೋಜನೆ ಆರಂಭವಾದ ಆಗಸ್ಟ್–2023 ರಿಂದ ಮಾರ್ಚ್–2026 ರವರೆಗೆ ಪ್ರತಿ ಫಲಾನುಭವಿಗೆ ಮಾಸಿಕ 2,000 ರೂ. ನಂತೆ ಜಿಲ್ಲೆಯಲ್ಲಿ ಒಟ್ಟು 1667,58,40,000 ರೂ. ಅನುದಾನ ಪಾವತಿಸಲಾಗಿದೆ. ಸಾರ್ವಜನಿಕ ಹಣ ದುರುಪಯೋಗವಾಗದಂತೆ ತಡೆಯಲು ಮತ್ತು ಅರ್ಹರಿಗೆ ಯೋಜನೆ ತಲುಪಿಸಲು ಮೃತಪಟ್ಟ ಫಲಾನುಭವಿಗಳ ನಿಖರ ಸಂಖ್ಯೆಯನ್ನು ಪತ್ತೆಹಚ್ಚಬೇಕು. ಕೇವಲ ಸಾಫ್ಟ್ವೇರ್ ವರದಿಗಳನ್ನು ಅವಲಂಬಿಸದೆ, ಸ್ಥಳೀಯವಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಮರು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ತಾಕೀತು ಮಾಡಿದರು.

    ಗೃಹಲಕ್ಷಿö್ಮ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಹೊಸ ಪ್ರಕ್ರಿಯೆಗಳು ಸಾರ್ವಜನಿಕವಾಗಿ ಇಂಟರ್ನೆಟ್ ಕೇಂದ್ರಗಳಲ್ಲಿ ಆರಂಭವಾಗಿಲ್ಲ. ಹೀಗಾಗಿ ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗದೆ, ಸೈಬರ್ ಸೆಂಟರ್ ಅಥವಾ ಗ್ರಾಮ್ ಒನ್ ಕೇಂದ್ರಗಳಿಗೆ ಅಲೆಯಬಾರದು. ಮಾರ್ಗಸೂಚಿ ಬಂದ ನಂತರ ಅಂಗನವಾಡಿ ಕಾರ್ಯಕರ್ತೆಯರೇ ನಿಮ್ಮ ಮನೆಗೆ ಬರಲಿದ್ದಾರೆ. ಈ ಕುರಿತು ಗ್ರಾಪಂ ಮಟ್ಟದಲ್ಲಿ ತಿಳುವಳಿಕೆ ನೀಡಬೇಕು ಎಂದು ಹೇಳಿದರು.

    ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ‘ಗೃಹಲಕ್ಷ್ಮೀ’ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಮೃತ ಫಲಾನುಭವಿಗಳನ್ನು ಗುರುತಿಸಲು ಹಾಗೂ ಬ್ಯಾಂಕ್ ಖಾತೆಗಳ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇನ್ನು ಮುಂದೆ ಸಾರ್ವಜನಿಕರು ಇ-ಕೆವೈಸಿಗಾಗಿ ಗ್ರಾಮ್ ಒನ್ ಅಥವಾ ಪಂಚಾಯತ್ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ, ಬದಲಿಗೆ ಅಂಗನವಾಡಿ ಕಾರ್ಯಕರ್ತೆಯರೇ ಫಲಾನುಭವಿಗಳ ಮನೆ ಬಾಗಿಲಿಗೆ ಬಂದು ಸಮೀಕ್ಷೆ ನಡೆಸಲಿದ್ದಾರೆ. ಯೋಜನೆಯ ಅರ್ಹ ಫಲಾನುಭವಿಗಳ ಮರುಪರಿಶೀಲನೆಗಾಗಿ ಸರ್ಕಾರವು ವಿಶೇಷ ‘ಸಮೀಕ್ಷಾ ಆಪ್’ ಸಿದ್ಧಪಡಿಸುತ್ತಿದ್ದು, ಈ ಆಪ್ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ, ರೇಷನ್ ಕಾರ್ಡ್ ಹಾಗೂ ಗೃಹಲಕ್ಷಿö್ಮ ಯೋಜನೆಯ ಸಂಖ್ಯೆಯನ್ನು ದಾಖಲಿಸಲಿದ್ದಾರೆ. ಈ ವೇಳೆ ಫಲಾನುಭವಿ ಜೀವಂತವಾಗಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎಂಬುದನ್ನು ಸ್ಥಳದಲ್ಲೇ ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ವಿವರಿಸಿದರು.

    ವಿದ್ಯಾರ್ಥಿ ಬಸ್ ಪಾಸ್ ವಿತರಣೆ, ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ:

    ಬಳ್ಳಾರಿ ಜಿಲ್ಲೆಯಲ್ಲಿ ‘ಶಕ್ತಿ ಯೋಜನೆ’ಯಡಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆಯು ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಬಸ್ ಪಾಸ್ ವಿತರಣೆಯಲ್ಲಿ ಜಿಲ್ಲೆಯು ಕೊನೆಯ ಸ್ಥಾನದಲ್ಲಿದೆ. ಬಳ್ಳಾರಿಯಲ್ಲಿ ಕೇವಲ 4,455 ಪಾಸ್‌ಗಳು ಮಾತ್ರ ವಿತರಣೆಯಾಗಿದ್ದು, ಇದು ಅತ್ಯಂತ ಕಡಿಮೆ ಪ್ರಮಾಣವಾಗಿದೆ. ಪ್ರಗತಿಯನ್ನು ಶೀಘ್ರವಾಗಿ ಸುಧಾರಿಸುವಂತೆ ಕೆಕೆಆರ್‌ಟಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಉಚಿತ ಬಸ್ ಪಾಸ್ ವಿತರಣೆ ಸಂಖ್ಯೆ 5,000 ದಾಟಿದಾಗ ಸ್ಥಳೀಯ ಶಾಸಕರನ್ನು ಹಾಗೂ ಗ್ಯಾರಂಟಿ ಸಮಿತಿ ಅಧ್ಯಕ್ಷರು, ಸದಸ್ಯರನ್ನು ಆಹ್ವಾನಿಸಿ ಕನಿಷ್ಠ 100 ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿ ಪಾಸ್ ವಿತರಿಸುವ ಮೂಲಕ ಯೋಜನೆಗೆ ಹೆಚ್ಚಿನ ಪ್ರಚಾರ ನೀಡಬೇಕು. ಸರ್ಕಾರದ ಜನಪದ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಬೇಕಾದರೆ ವ್ಯಾಪಕ ಪ್ರಚಾರ ಅತ್ಯಗತ್ಯ ಎಂದು ತಿಳಿಸಿದರು.

    ಗೃಹಜ್ಯೋತಿ ಇ–ಕೆವೈಸಿ ಪ್ರಗತಿ ಪರಿಶೀಲನೆ –ನಕಲಿ ದಾಖಲೆಗಳ ಪತ್ತೆ:

    ಜಿಲ್ಲೆಯಲ್ಲಿ ‘ಗೃಹಜ್ಯೋತಿ’ ಯೋಜನೆಯಡಿ ನಕಲಿ ದಾಖಲೆಗಳನ್ನು ತಡೆಗಟ್ಟಲು ಮತ್ತು ಅರ್ಹ ಫಲಾನುಭವಿಗಳನ್ನು ಗುರುತಿಸಲು ಹಮ್ಮಿಕೊಳ್ಳಲಾಗಿರುವ ಎರಡನೇ ಹಂತದ ಇ-ಕೆವೈಸಿ ಪ್ರಕ್ರಿಯೆ ಪ್ರಗತಿ ಸಾಧಿಸಬೇಕು. ಇ-ಕೆವೈಸಿ ಪ್ರಕ್ರಿಯೆಗೆ ವೋಟರ್ ಐಡಿ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ಕೇಳಲಾಗಿದ್ದ ಜಾತಿ ಪ್ರಮಾಣಪತ್ರದ ಅಗತ್ಯವನ್ನು ಈಗ ಕೈಬಿಡಲಾಗಿದೆ. ಒಟ್ಟು 3 ಲಕ್ಷ ಗ್ರಾಹಕರ ಪೈಕಿ ಇದುವರೆಗೆ ಕೇವಲ 29,000 ಗ್ರಾಹಕರ ಇ-ಕೆವೈಸಿ ಮಾತ್ರ ಪೂರ್ಣಗೊಂಡಿದೆ. ಅಂದರೆ ಕೇವಲ ಶೇ. 10 ರಷ್ಟು ಪ್ರಗತಿಯಾಗಿದ್ದು, ಇನ್ನು ಶೇ. 90 ರಷ್ಟು ಕೆಲಸ ಬಾಕಿ ಇದೆ. ನಿಗದಿತ ಸಮಯದೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

    ಒಂದು ಆರ್.ಆರ್. ಸಂಖ್ಯೆಗೆ ಒಂದು ಆಧಾರ್ ಕಾರ್ಡ್ ಮಾತ್ರ ಲಿಂಕ್ ಮಾಡಲು ಅವಕಾಶವಿದ್ದು, ಯಾರು ಮನೆಯ ನಿಜವಾದ ಮಾಲೀಕ ಅಥವಾ ಅರ್ಹ ಬಾಡಿಗೆದಾರರೋ ಅವರಿಗೆ ಮಾತ್ರ ಯೋಜನೆ ಅನ್ವಯವಾಗುತ್ತದೆ. ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರಿಗೆ ಯಾವುದೇ ಗೃಹಜ್ಯೋತಿ ಸಬ್ಸಿಡಿ ಕಡಿತವಾಗುವುದಿಲ್ಲ. ಸದ್ಯಕ್ಕೆ ಇರುವ 3 ಲಕ್ಷ ಫಲಾನುಭವಿಗಳಿಗೂ ಸಬ್ಸಿಡಿ ಮುಂದುವರಿಯಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ಸಭೆಗೆ ಸ್ಪಷ್ಟತೆ ನೀಡಿದರು.

    ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಮಾತನಾಡಿ, ಯುವನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಅಭ್ಯರ್ಥಿಗಳು ಉನ್ನತ ಶಿಕ್ಷಣಕ್ಕೆ ಸೇರ್ಪಡೆಯಾಗಿದ್ದರೆ, ಅವರಿಗೆ ಯುವನಿಧಿ ಭತ್ಯೆ ಕಡಿತಗೊಳಿಸುವ ವ್ಯವಸ್ಥೆ ಇದೆ. ಆದರೆ, ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಉನ್ನತ ಶಿಕ್ಷಣ ಪಡೆಯದ ವಿದ್ಯಾರ್ಥಿಗಳೂ ಸಹ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುತ್ತಿರುವುದು ಬೆಳಕಿಗೆ ಬಂದಿದೆ. ಯಾವುದೇ ವಿದ್ಯಾರ್ಥಿ ಉನ್ನತ ಶಿಕ್ಷಣ ಪಡೆಯುತ್ತಿಲ್ಲದಿದ್ದರೂ, ಪೋರ್ಟಲ್‌ನಲ್ಲಿ ತಪ್ಪು ಮಾಹಿತಿ ಪ್ರದರ್ಶನವಾಗುತ್ತಿದ್ದರೆ, ಅಂತಹ ಪ್ರಕರಣಗಳನ್ನು ಮರುಪರಿಶೀಲಿಸಿ ನೈಜ ಪಟ್ಟಿ ಸಿದ್ಧಪಡಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಅವರಿಗೆ ಸೂಚಿಸಿದರು.

    ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ಶೇ.90 ರಷ್ಟು ಜನ ಪಡಿತರ ಚೀಟಿಗಳನ್ನು ಹೊಂದಿದೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ವಾರ್ಷಿಕ ಆದಾಯ 1,20,000 ರೂ. ಗಳಿಗಿಂತ ಹೆಚ್ಚಿರುವವರು, ಸ್ವಂತದ ನಾಲ್ಕು ಚಕ್ರದ ವಾಹನ ಹೊಂದಿರುವವರು, ಆದಾಯ ತೆರಿಗೆ ಪಾವತಿದಾರರು ಹಾಗೂ ಗ್ರಾಮೀಣ ಭಾಗದಲ್ಲಿ 7.5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹರಾಗಿರುತ್ತಾರೆ. ಇಂತಹ ನಿಯಮ ಉಲ್ಲಂಘಿಸಿ ಕಾರ್ಡ್ ಪಡೆದಿರುವವರನ್ನು ಪತ್ತೆ ಹಚ್ಚಬೇಕು ಎಂದರು.

    ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಇಲಾಖೆಯ ಉಪನಿರ್ದೇಶಕ ಕೆ.ಆರ್.ದೇವರಾಜ್ ಅವರು, ಜಿಲ್ಲೆಯಲ್ಲಿ ಸುಮಾರು 6,000ಕ್ಕೂ ಹೆಚ್ಚು ಅನುಮಾನಾಸ್ಪದ ಕಾರ್ಡ್ಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಡ್ರೆöÊವ್ ಮೂಲಕ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.

    ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಬಳ್ಳಾರಿ ಭಾಗದ ಜನರ ಮುಖ್ಯ ಆಹಾರ ಜೋಳವಾಗಿರುವುದರಿಂದ, ಅಕ್ಕಿಯ ಪ್ರಮಾಣವನ್ನು ಕೊಂಚ ಕಡಿತಗೊಳಿಸಿ ಪರ್ಯಾಯ ಧಾನ್ಯ ನೀಡಬೇಕು ಎಂದರು. ಇದಕ್ಕೆ ಆಹಾರ ಇಲಾಖೆಯ ಉಪನಿರ್ದೇಶಕರು ಪ್ರತಿಕ್ರಿಯಿಸಿ, ಮುಂಬರುವ ಜುಲೈ ತಿಂಗಳಿನಿಂದ ಪ್ರತಿ ಕಾರ್ಡ್ಗೆ 3 ಕೆಜಿ ಜೋಳ ಹಾಗೂ 2 ಕೆಜಿ ರಾಗಿ ನೀಡುವ ಕುರಿತು ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

    ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ನಾಗಭೂಷಣ ಗೌಡ, ಸಂಡೂರು ತಾಲ್ಲೂಕು ಅಧ್ಯಕ್ಷ ನೂರುದ್ದೀನ್.ಎಸ್., ಕಂಪ್ಲಿ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸರಾವ್, ಕುರುಗೋಡು ತಾಲ್ಲೂಕು ಅಧ್ಯಕ್ಷ ಜಿ.ಬಸವನಗೌಡ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್…

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.