ಕೊರಟಗೆರೆ : ಪಟ್ಟಣದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಇಂದಿನಿಂದಲೆ ಆರಂಭಗೊಂಡಿದ್ದು ಎಲ್ಲ ಪಕ್ಷದ ಅಭ್ಯರ್ಥಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರ ಸಂಚಾರದಲ್ಲಿ ತೊಡಗಿ ಜನರ ಮನಸ್ಸು ಗೆಲ್ಲುವ ಪ್ರಯತ್ನದಲ್ಲಿ ತೊಡಗಿದ್ದಾರೆ.
ಜೆಡಿಎಸ್ ಭದ್ರಕೋಟೆಯಾಗಿರುವ ಕೊರಟಗೆರೆ ಕ್ಷೇತ್ರವನ್ನು ಈ ಬಾರಿ ಬಿಜೆಪಿ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಪಡುತ್ತಿದ್ದು, ಬಿಜೆಪಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ರವರು ತಮ್ಮ ಕ್ಷೇತ್ರದ ತುಂಬಾ ಇಂದಿನಿಂದದಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಒದಗಿಸುವ ಮೂಲಕ ಜನಮನ್ನಣೆ ಗಳಿಸುತ್ತಿದ್ದಾರೆ.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಹನುಮನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಕತ್ತಿನಾಗೇನಹಳ್ಳಿ ಹಾಗೂ ಹನುಮೇನಹಳ್ಳಿ ಎರಡು ಗ್ರಾಮದಲ್ಲಿ ಸುಮಾರು 500 ಹೆಚ್ಚು ಜನರು ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರಾಗಿ ಸೇರ್ಪಡೆಯಾಗಿದ್ದಾರೆ. ಇದು ನನಗೆ ತುಂಬಾ ಸಂತೋಷದ ವಿಷಯ, ಇದರ ಜೊತೆಗೆ ಬಹಳ ವರ್ಷಗಳಿಂದಲೂ ಬಿಜೆಪಿ ಅಭ್ಯರ್ಥಿಯು ತನ್ನ ಸ್ಥಾನವನ್ನು ಭದ್ರಗೊಳಿಸಲು ಪ್ರಯತ್ನ ಪಡುತ್ತಲೇ ಇರುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹಳ್ಳಿ ಹಳ್ಳಿಯ ಗ್ರಾಮಸ್ಥರಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಅಧಿಕಾರಕ್ಕೆ ತರಲೇಬೇಕು ಎಂದು ಜನರೇ ಸ್ವಯಂ ಪ್ರೇರಿತರಾಗಿ ನಮ್ಮ ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾರೆ. ಈ ಹಿಂದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದವರೆಲ್ಲರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೋ ಇಲ್ಲವೋ ಎನ್ನುವುದನ್ನು ಜನರೇ ನಿರ್ಧಾರ ಮಾಡಿದ್ದಾರೆ, ಆದ್ದರಿಂದ ಇತರೆ ಪಕ್ಷದ ಅಭ್ಯರ್ಥಿಗಳ ಬಗ್ಗೆ ನಾವು ಟೀಕಿಸುವುದು ಬೇಡ, ನಮ್ಮ ಬಿಜೆಪಿ ಪಕ್ಷವನ್ನು ಸದೃಢ ಪಡಿಸುವುದು ನಮ್ಮೆಲ್ಲರ ಕರ್ತವ್ಯ, ಅದರಂತೆ ಪ್ರತಿ ಗ್ರಾಮಕ್ಕೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನಮ್ಮ ಧ್ಯೇಯ ಮತ್ತು ಸಿದ್ದಾಂತ, ಇದುವೇ ಬಿಜೆಪಿ ಪಕ್ಷದ ಸಂಕಲ್ಪ ಎಂದು ತಿಳಿಸಿದರು.
ವಿದ್ಯಾರ್ಥಿ ರಮೇಶ್ ಮಾತನಾಡಿ, ಬಿಜೆಪಿ ಮುಖಂಡ ಅನಿಲ್ ಕುಮಾರ್ ರವರು ನಮ್ಮ ಹನುಮನಹಳ್ಳಿಯ ಕಾರ್ಯಕರ್ತರ ಸೇರ್ಪಡೆ ಸಭೆಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ರಸ್ತೆಯುದ್ದಕ್ಕೂ ಬೃಹದಾಕಾರವಾಗಿ ಬೆಳೆದು ನಿಂತಿದ್ದ ಬೇಲಿಗಿಡಗಳನ್ನು ಗಮನಿಸಿ ಮರುದಿನ ಬೆಳಗ್ಗೆ ಹನುಮನಹಳ್ಳಿಗೆ ಸಂಪರ್ಕಿಸುವ ರಸ್ತೆಗಳ ಅಕ್ಕಪಕ್ಕದಲ್ಲಿದ್ದ ಬೇಲಿಗಿಡಗಳನ್ನು ತೆರವುಗೊಳಿಸಿ ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಆರಾಮಾಗಿ ಪಟ್ಟಣ ಹಾಗೂ ಹಳ್ಳಿಗಳಿಗೆ ಓಡಾಡುವಂತೆ ಅನುಕೂಲ ಮಾಡಿಕೊಟ್ಟಿದ್ದಾರೆ, ಈ ಹಿಂದೆ ಇದ್ದ ರಸ್ತೆಯ ಅಕ್ಕ ಪಕ್ಕದಲ್ಲಿ ಬೃಹದಾಕಾರವಾಗಿ ಬೆಳೆದಿದ್ದ ಬೇಲಿಗಿಡಗಳಲ್ಲಿ ಕಾಡು ಪ್ರಾಣಿಗಳು ಹಾಗೂ ಹಾವು ಚೇಳುಗಳು ಸೇರಿಕೊಂಡರು ಯಾರಿಗೂ ಕಾಣಿಸುತ್ತಿರಲಿಲ್ಲ, ಭಯದಿಂದ ಓಡಾಡುವ ಪರಿಸ್ಥಿತಿ ಒದಗಿ ಬಂದಿತ್ತು, ಇದೀಗ ರಸ್ತೆ ಅಕ್ಕಪಕ್ಕದ ಬೇಲಿ ಗಿಡಗಳನ್ನು ತೆರವುಗೊಳಿಸಿ ರಸ್ತೆಯಲ್ಲಿ ಓಡಾಡಲು ತುಂಬಾ ಅನುಕೂಲ ಮಾಡಿಕೊಟ್ಟ ಅನಿಲ್ ಕುಮಾರ್ ರವರಿಗೆ ಹನುಮನಹಳ್ಳಿಯ ಗ್ರಾಮಸ್ಥರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಪವನ್ ಕುಮಾರ್, ಗುರುದತ್, ಸಿ.ಎಸ್ ಹನುಮಂತರಾಜು, ದಾಡಿ ವೆಂಕಟೇಶ್, ಲೋಕೇಶ್ ಕೊಡಗದಾಲ, ರಘು, ಯುವಮೋರ್ಚಾದ ಅರುಣ್, ಗಿರೀಶ್ ಗೌಡ, ಲೋಕೇಶ್, ನಯನ್, ಹೊಳವನಹಳ್ಳಿ ಹೋಬಳಿ ಅಧ್ಯಕ್ಷ ಲೋಕೇಶ್, ದಯಾನಂದ್, ಗ್ರಾಮ ಪಂಚಾಯ್ತಿ ಸದಸ್ಯ ಚೇತನ್ ಆರಾಧ್ಯ, ಮುಕ್ಕಣ್ಣಪ್ಪ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷವನ್ನು ಸೇರಿದ ಕಾರ್ಯಕರ್ತರು ಹಾಜರಿದ್ದರು.
ವರದಿ: ಮಂಜುಸ್ವಾಮಿ. ಎಂ. ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz