ಕೊರಟಗೆರೆ : ತಾಲ್ಲೂಕಿನಲ್ಲಿ ಈಗಾಗಲೇ ಅನೇಕ ಭಾಗಗಳಲ್ಲಿ ಭೀಮ್ ಸಂಸ್ಥೆಯ ಅಡಿಯಲ್ಲಿ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ . ಇದೀಗ ಭೀಮ್ ಸಂಸ್ಥೆ ಮತ್ತೊಂದು ಹೆಜ್ಜೆ ಇಟ್ಟಿದ್ದು, ಕರ್ನಾಟಕದ ಗಡಿಭಾಗದ ಬ್ಯಾಲ್ಯ ಗ್ರಾಮ ಮತ್ತು ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನೂತನವಾಗಿ ಉದ್ಘಾಟನೆಗೊಂಡು ಪ್ರಾರಂಭವಾಗಿರುವ ಭೀಮ್ ರೂರಲ್ ಡೆವಲಪ್ ಮೆಂಟ್ ಆರ್ಗನೈಸೇಷನ್ ಈ ಸಂಸ್ಥೆ ಅಡಿಯಲ್ಲಿ ಕಂಪ್ಯೂಟರ್ ಬೇಸಿಕ್ , ಡಾಟಾ ಎಂಟ್ರಿ, ಟ್ಯಾಲಿ ವಿಥ್ ಜಿಎಸ್ ಟಿ ,ಫೋಟೋಶಾಪ್ ಮತ್ತು ಎಡಿಟಿಂಗ್ ಡಿಟಿಪಿ ಟೈಲರಿ, ಎಂಬ್ರಾಯಿಡಿಂಗ್ ಇನ್ನು ಮುಂತಾದ ಅನೇಕ ತರಬೇತಿಗಳನ್ನು ಗ್ರಾಮೀಣ ಭಾಗದ ಬಡ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತವಾಗಿ ನೀಡಲು ವ್ಯವಸ್ಥೆ ಮಾಡಲಾಗಿದೆ.
ಈ ವಿಶೇಷ ಸಂದರ್ಭವನ್ನುದ್ದೇಶಿಸಿ ಮಾತನಾಡಿದ ಮೈಂಡ್ಟ್ರೀ ಫೌಂಡೇಷನ್ ಗ್ಲೋಬಲ್ ಹೆಡ್ ಪಣೀಶ್ ರಾವ್, ಅನೇಕ ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳು ಹಾಗೂ ಯುವಕರು ಶಿಕ್ಷಣವನ್ನು ಮುಗಿಸಿ ಮನೆಯಲ್ಲಿಯೇ ಇದ್ದಾರೆ ಇನ್ನೂ ಕೆಲ ಹೆಣ್ಣುಮಕ್ಕಳು ಮದುವೆಯಾದರೂ ಕೂಡ ಗಂಡನ ಮನೆಯಲ್ಲಿ ಸುಮ್ಮನೆ ಕೂರುವ ಬದಲು ಇಂತಹ ಹೆಣ್ಣು ಮಕ್ಕಳಿಗೆ ಈ ಸಂಸ್ಥೆಯಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಒಂದು ಒಳ್ಳೆಯ ಅವಕಾಶ ಸಿಕ್ಕಿದೆ. ಇದರ ಸದುಪಯೋಗ ಪಡಿಸಿಕೊಂಡು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ನೀವ್ಯಾರೂ ಇನ್ನುಮುಂದೆ ನಿರುದ್ಯೋಗಿಗಳಲ್ಲ ಉದ್ಯೋಗಿಗಳು ನಿಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಪ್ರೋತ್ಸಾಹಿಸಿದರು.
ಮೈಂಡ್ಟ್ರೀ ಫೌಂಡೇಷನ್ ಮುಖ್ಯಸ್ಥರಾದ ದೀಪಕ್ ಪ್ರಭು ಮಟ್ ಮಾತನಾಡಿ , ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಯಾವುದೇ ಹೆಣ್ಣು ಮಕ್ಕಳು ಶಿಕ್ಷಣದಿಂದ ಮತ್ತು ವೃತ್ತಿಯಿಂದ ವಂಚಿತರಾಗಬಾರದು. ಅಂತಹ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಈ ಸಂಸ್ಥೆಯು ಒಂದು ಉತ್ತಮವಾದ ವೇದಿಕೆಯನ್ನು ನಿರ್ಮಾಣ ಮಾಡಿಕೊಟ್ಟಿದೆ . ಅದನ್ನು ಉಪಯೋಗಿಸಿಕೊಂಡು ಎಲ್ಲಾ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಕಂಪ್ಯೂಟರ್ ಹಾಗೂ ಇನ್ನಿತರೆ ಶಿಕ್ಷಣವನ್ನು ಪಡೆದು ತಮ್ಮ ಸ್ವಂತ ಕೆಲಸವನ್ನು ಆರಂಭಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ತಿಳಿಸಿದರು .
ಭೀಮ್ ರೂರಲ್ ಡೆವಲಪ್ ಮೆಂಟ್ ಆರ್ಗನೈಸೇಷನ್ ಮುಖ್ಯಸ್ಥರಾದ ರವಿಕುಮಾರ್ ಮಾತನಾಡಿ, ಈಗಾಗಲೇ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವಕ ಯುವತಿಯರು ನಮ್ಮ ಸಂಸ್ಥೆಯಿಂದ ಕಂಪ್ಯೂಟರ್ ಶಿಕ್ಷಣವನ್ನು ಪಡೆದು ಅನೇಕ ಪ್ರಸಿದ್ಧ ಬ್ಯಾಂಕ್ ಗಳಲ್ಲಿ ಹಾಗೂ ಕಂಪೆನಿಗಳಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ ಪ್ರತಿ ತಿಂಗಳು ಸಾವಿರಾರು ರೂಪಾಯಿ ಸಂಬಳವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರು.
ಟೈಲರಿಂಗ್ ತರಬೇತಿಯನ್ನು ಪಡೆದು ತಮ್ಮ ಸ್ವಂತ ಟೈಲರಿಂಗ್ ಕೇಂದ್ರಗಳನ್ನು ತೆರೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ . ಇದುವೇ ಈ ಸಂಸ್ಥೆಯ ಮುಖ್ಯ ಉದ್ದೇಶ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ಉತ್ತಮ ಭವಿಷ್ಯವೇ ನಮ್ಮ ಗುರಿ ಎಂದು ತಿಳಿಸಿದರು .
ಭೀಮ್ ಸಂಸ್ಥೆಯ ನೂತನ ಕಚೇರಿಗಳ ಉದ್ಘಾಟನೆ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು, ಗಣ್ಯಾತಿಗಣ್ಯರು, ಗ್ರಾಮಸ್ಥರು, ಸಂಸ್ಥೆಯಲ್ಲಿ ತರಬೇತಿ ಪಡೆಯಲು ಬಂದಿರುವ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರು ಹಾಜರಿದ್ದರು .
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy