ತುರುವೇಕೆರೆ ಪಟ್ಟಣದಲ್ಲಿರುವ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೆಲ್ ಕಾಂತರಾಜು ರವರ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ರವರ 513 ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು
ನೂರಾರು ಬೆಂಬಲಿಗರೊಂದಿಗೆ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನಿಟ್ಟು ಪೂಜೆ ಸಲ್ಲಿಸಿ ಕೆಂಪೇಗೌಡರಿಗೆ ಅಧಿಕಾರವನ್ನು ಹಾಕಿ ಪುಷ್ಪಾರ್ಚನೆ ಮಾಡಲಾಯಿತು. ನಂತರ ಮಾತನಾಡಿದ ಕಾಂತರಾಜು, ನಾಡು ಕಂಡ ಅತಿ ಶ್ರೇಷ್ಠ ಹಾಗೂ ದೃಢ ದೂರದೃಷ್ಟಿಯ ಆಡಳಿತಗಾರ, ಯೋಜನಾಬದ್ಧ ಬೆಂಗಳೂರು ನಗರವನ್ನು ನಿರ್ಮಿಸಿ, ಇದರ ಗತವೈಭವ ಸಾರಿದ ಸರ್ವಜನಾಂಗದ ಅಭ್ಯುದಯಕ್ಕಾಗಿ ಶ್ರಮಿಸಿದ ಮಹಾನ್ ಚೇತನ ಎಂದು ಕೊಂಡಾಡಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರಸನ್ನ ಕುಮಾರ್, ಎಂ.ಡಿ ಮೂರ್ತಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಎಚ್.ಹನುಮಂತಯ್ಯ, ತಾವರೆಕೆರೆ ದಾನಿ ಗೌಡ್ರು, ಬುಗುಡನಹಳ್ಳಿ ಕೃಷ್ಣಮೂರ್ತಿ, ಕಾಂಗ್ರೆಸ್ ತಾಲೂಕು ಮಹಿಳಾ ಘಟಕದ ಬಾಣಸಂದ್ರ ಲಕ್ಷ್ಮೀದೇವಮ್ಮ,ಟಿ.ಹೆಚ್. ಗುರುದತ್, ಗೋಣಿ ತುಮಕೂರು ಲಕ್ಷ್ಮಿಕಾಂತ್, ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಅಧ್ಯಕ್ಷ ಹೆಚ್. ಎಸ್ .ಸುರೇಶ್, ತಾಲೂಕು ಕಾರ್ಯಧ್ಯಕ್ಷ ಗವಿರಂಗಪ್ಪ, ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ: ಸುರೇಶ್ ಬಾಬು ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB