ಈಗಾಗಲೇ ಬೇಸಿಗೆಯ ತಾಪಕ್ಕೆ ಬಳಲಿ ಬೆಂಡಾಗಿರುವ ವಾಹನ ಸವಾರರಿಗೆ ಬಿಬಿಎಂಪಿ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣದ ಹೆಸರಿನಲ್ಲಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಹಲವು ರಸ್ತೆಗಳನ್ನು ಬಂದ್ ಮಾಡಲು ಮುಂದಾಗಿದೆ.
ಏ.4ರಿಂದ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ಬ್ರೇಕ್ ಬೀಳಲಿದೆ. ಮೌರ್ಯ ವೃತ್ತದಿಂದ ಕೆ.ಆರ್ ಸರ್ಕಲ್ ವರೆಗೆ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯಲಿದ್ದು, ಈ ರಸ್ತೆ ಬಂದ್ ಆಗಲಿದೆ. ಪ್ರತಿದಿನ ಈ ರಸ್ತೆ ಮೂಲಕ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಟ್ರಾಫಿಕ್ನಿಂದ ಕೂಡಿರುತ್ತದೆ. ಈಗಾಗಲೇ ರಸ್ತೆಯ ಅಕ್ಕಪಕ್ಕದಲ್ಲಿ ಕಾಮಗಾರಿ ನಡೆಯುತ್ತಿದೆ. ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆದರೆ ಇಡೀ ಬೆಂಗಳೂರಿಗೆ ಟ್ರಾಫಿಕ್ ಸಮಸ್ಯೆ ಕಾಡುತ್ತದೆ. ಶೇಷಾದ್ರಿ ರಸ್ತೆಗೆ ಪರ್ಯಾಯವಾಗಿ ಮತ್ತೊಂದು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಈಗಾಗಲೇ ಸಂಚಾರಿ ಪೊಲೀಸ್ ಆಯುಕ್ತರ ಜೊತೆ ಮಾತುಕತೆ ಕೂಡ ನಡೆದಿದೆ.
70ರಿಂದ 80 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಬಿಬಿಎಂಪಿ ಅಕಾರಿಗಳು ಹೇಳಿದ್ದು, ಅಲ್ಲಿಯವರೆಗೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ. 15 ಕೋಟಿ ರೂ. ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ 3 ತಿಂಗಳೊಳಗೆ ಮುಗಿಯಲಿದ್ದು, ಸಂಚಾರಕ್ಕೆ ಅಡಚಣೆಯಾಗದಂತೆ ಮುಗಿಸಿಕೊಡಲಾಗುವುದು ಎಂದು ಯೋಜನಾ ವಿಭಾಗದ ಮುಖ್ಯ ಇಂಜಿನಿಯರ್ ಲೋಕೇಶ್ ತಿಳಿಸಿದ್ದಾರೆ.
ವರದಿ: ಅಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5