nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    January 13, 2026
    Facebook Twitter Instagram
    ಟ್ರೆಂಡಿಂಗ್
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    • ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ
    • ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ: ವಿದ್ಯುತ್ ಸಂಪರ್ಕಕ್ಕೆ 3ಲಕ್ಷ ಲಂಚದ ಬೇಡಿಕೆ: ಎಲೆಕ್ಟ್ರಿಕಲ್ ಗುತ್ತಿಗೆದಾರ ಅಂಬರೀಶ ಬಂಧನ
    ಜಿಲ್ಲಾ ಸುದ್ದಿ August 24, 2023

    ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ: ವಿದ್ಯುತ್ ಸಂಪರ್ಕಕ್ಕೆ 3ಲಕ್ಷ ಲಂಚದ ಬೇಡಿಕೆ: ಎಲೆಕ್ಟ್ರಿಕಲ್ ಗುತ್ತಿಗೆದಾರ ಅಂಬರೀಶ ಬಂಧನ

    By adminAugust 24, 2023No Comments2 Mins Read
    korategere

    ಕೊರಟಗೆರೆ: ಶಿರಾದ ಗುತ್ತಿಗೆದಾರ ಮತ್ತು ತೋವಿನಕೆರೆಯ ರೈತನಿಂದ ಹನುಮೇನಹಳ್ಳಿಯ ಎಲೆಕ್ಟ್ರಿಕಲ್ ಗುತ್ತಿಗೆದಾರನ ಮೂಲಕ 3 ಲಕ್ಷಕ್ಕೆ ಬೇಡಿಕೆಯಿಟ್ಟು 50 ಸಾವಿರ ಲಂಚ ಪಡೆಯುವಾಗ ಕೊರಟಗೆರೆ ಬೆಸ್ಕಾಂ ಎಇಇ ತುಮಕೂರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸಂಜೆ ನಡೆದಿದೆ.

    ಕೊರಟಗೆರೆ ಪಟ್ಟಣದ ಬೆಸ್ಕಾಂ ಇಲಾಖೆಯ ಮೇಲೆ ತುಮಕೂರು ಲೋಕಾಯುಕ್ತ ಇಲಾಖೆಯ ಎಸ್ಪಿ ವಲೀಬಾಷ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಎಇಇ ಬಿ.ಜಿ.ಅರಸರಾಜು ಮತ್ತು ಕೊರಟಗೆರೆ ತಾಲೂಕು ಹನುಮೇಹಳ್ಳಿ ಗ್ರಾಮದ ಎಲೆಕ್ಟ್ರಿಕಲ್ ಗುತ್ತಿಗೆದಾರ ಅಂಬರೀಶ ಎಂಬಾತನ ಬಂಧಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


    Provided by
    Provided by

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮದ ಸತ್ಯನಾರಾಯಣಚಾರ್ ಎಂಬಾತನ ಜಮೀನಿಗೆ ವಿದ್ಯುತ್ ಸಂಪರ್ಕ ಮತ್ತು ಟ್ರಾನ್ಸ್’ಫಾರಂ ಅಳವಡಿಕೆಗೆ ಶಿರಾ ಮೂಲದ ಗುತ್ತಿಗೆದಾರ ಹರೀಶ್ ಎಂಬಾತನಿಗೆ 3 ಲಕ್ಷ ಬೇಡಿಕೆ ಇಟ್ಟು 50 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

    ವಿದ್ಯುತ್ ಸಂಪರ್ಕಕ್ಕೆ ಗುತ್ತಿಗೆದಾರ ಅಲೆದಾಟ:
    ಕುರಂಕೋಟೆಯ ರೈತ ಸತ್ಯನಾರಾಯಣಚಾರ್ ಮತ್ತು ಶಿರಾ ಮೂಲದ ಗುತ್ತಿಗೆದಾರ ಹರೀಶ್ ಎಂಬಾತ ವಿದ್ಯುತ್ ಸಂಪರ್ಕಕ್ಕಾಗಿ ಕಳೆದ 2ತಿಂಗಳಿಂದ ಬೆಸ್ಕಾಂ ಕಚೇರಿಗೆ ಅಲೆದಾಟ ನಡೆಸಿದ್ದಾರೆ. ಸರಕಾರಿ ಶುಲ್ಕ ಪಾವತಿಯ ಬಳಿಕವು ವಿದ್ಯುತ್ ಸಂಪರ್ಕ ಮತ್ತು ಟ್ರಾನ್ಸ್ಪಾರಂ ಅಳವಡಿಕೆಗೆ ಅಲೆದಾಡಿಸಿದ ಪರಿಣಾಮ ಗುತ್ತಿಗೆದಾರ ಹರೀಶ್ ಮತ್ತು ರೈತ ಸತ್ಯನಾರಾಯಣಚಾರ್ ಇಬ್ಬರು ಆ.21ರ ಸೋಮವಾರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ ಹಿನ್ನಲೆ ಆ.23ರ ಬುಧವಾರ ದಾಳಿ ನಡೆಸಿದ್ದಾರೆ.

    ತುಮಕೂರು ಲೋಕಾಯುಕ್ತ ಇಲಾಖೆಯ ಎಸ್ಪಿ ವಲೀಭಾಷ, ಡಿವೈಎಸ್ಪಿ ಹರೀಶ್, ಮಂಜುನಾಥ, ಇನ್ಸ್ ಪೆಕ್ಟರ್ ಶಿವರುದ್ರಪ್ಪಮೇಟಿ, ಸತ್ಯನಾರಾಯಣ ಸೇರಿದಂತೆ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ಶಿರಾ ಗುತ್ತಿಗೆದಾರ ಹರೀಶ್ ಮತ್ತು ತೋವಿನಕೆರೆ ರೈತ ದೂರಿನ ಅನ್ವಯ ಕೊರಟಗೆರೆ ಬೆಸ್ಕಾಂ ಎಇಇ ಅರಸರಾಜು ಮೇಲೆ ತುಮಕೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಭೆಯಲ್ಲಿ ಎಇಇಗೆ ರೈತರಿಂದ ತರಾಟೆ:
    ಕೊರಟಗೆರೆ ಪಟ್ಟಣದ ಕಂದಾಯ ಇಲಾಖೆ ಕಚೇರಿಯಲ್ಲಿ ಆ.21ರ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಬೆಸ್ಕಾಂ ಇಲಾಖೆಯ ಎಇಇ ಅರಸರಾಜು ಮೇಲೆ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಂತರ್ಜಲ ಅಭಿವೃದ್ದಿ ನಿರ್ವಾಹಕ ಮತ್ತು ನಿಯಂತ್ರಣ ಸಮಿತಿಯ ಸಭೆಯಲ್ಲಿ 18 ಕೊಳವೆಬಾವಿ ಯೋಜನೆಗೆ ವಿದ್ಯುತ್ ಸಂಪರ್ಕ ನೀಡಲು 5ಜನ ಸದಸ್ಯರ ಪೈಕಿ 4ಜನ ಅಧಿಕಾರಿ ಸಹಿ ಹಾಕಿದ ನಂತರವು ಬೆಸ್ಕಾಂ ಇಲಾಖೆಯ ಎಇಇ ಸಹಿ ಹಾಕದೇ ನಿರ್ಲಕ್ಷ ವಹಿಸಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತವಾಗಿತ್ತು.

    ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ತುಮಕೂರು: ‘ತ್ರಿವಿಧ ದಾಸೋಹಿ’, ‘ಕರ್ನಾಟಕ ರತ್ನ’, ಸಿದ್ದಗಂಗಾ ಮಠದ ಲಿಂಗೈಕ್ಯ ಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ 7ನೇ ವರ್ಷದ…

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    January 13, 2026

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.