nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡಲು ರೈತಸಂಘದಿಂದ  ಧರಣಿ ಸತ್ಯಾಗ್ರಹ
    ಜಿಲ್ಲಾ ಸುದ್ದಿ March 20, 2022

    ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡಲು ರೈತಸಂಘದಿಂದ  ಧರಣಿ ಸತ್ಯಾಗ್ರಹ

    By adminMarch 20, 2022No Comments2 Mins Read
    bhadra meldande yojane

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸ ಸಾಗರಕ್ಕೆ 10 ಟಿ ಎಂ ಸಿ ನೀರು ಮೀಸಲಿಟ್ಟು, ಧರ್ಮಪುರ ಮತ್ತು ಜೆಜಿ ಹಳ್ಳಿ ಹೋಬಳಿಗಳ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಎಂದು ತಾಲ್ಲೂಕು ರೈತಸಂಘದ  ಅಧ್ಯಕ್ಷರಾದ  ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.

    ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗೆ ಸೇರಿಸಲು ಹಾಗೂ ಹಿರಿಯೂರು ನಗರದ ಸಕ್ಕರೆ ಕಾರ್ಖಾನೆಯನ್ನು ಪುನಃ  ಪ್ರಾರಂಭಿಸಲು ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಭದ್ರಾ ಮೇಲ್ದಂಡೆ ಯೋಜನೆ ಈ ಹಿಂದಿನ ಬಿಜೆಪಿ ಸರ್ಕಾರ ತಾತ್ಕಾಲಿಕವಾಗಿ 5 ಟಿಎಂಸಿ ನೀರನ್ನು ಮಂಜೂರು ಮಾಡಲಾಗಿತ್ತು. ಆದರೆ ತದ ನಂತರ ಬಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇದನ್ನು 2ಟಿಎಂಸಿ ನೀರಿಗೆ ಸೀಮಿತಗೊಳಿಸಲಾಯಿತು. ಈಗಾಗಲೇ ಸರ್ಕಾರ ಕುಡಿಯುವ ಸಲುವಾಗಿ ಹಿರಿಯೂರು ನಗರಕ್ಕೆ ಹಾಗೂ ತಾಲೂಕಿನ 168 ಗ್ರಾಮಗಳಿಗೆ, ಚಳ್ಳಕೆರೆನಗರಕ್ಕೆ ಹಾಗು ಹಳ್ಳಿಗಳಿಗೆ ಡಿ.ಆರ್.ಡಿ.ಓ ಹಾಗೂ ಚಿತ್ರದುರ್ಗ ನಗರಕ್ಕೆ ಹೊಳಲ್ಕೆರೆ ಗ್ರಾಮ ಮತ್ತು ತಾಲ್ಲೂಕಿನ 198 ಗ್ರಾಮಗಳಿಗೆ ಕುಡಿಯುವ ನೀರು ಹರಿಸಬೇಕಿದೆ.  ಅಲ್ಲದೆ ತಾಲ್ಲೂಕಿನ ವಾಣಿವಿಲಾಸ ಸಾಗರದ ಅಚ್ಚುಕಟ್ಟು ಪ್ರದೇಶಕ್ಕೆ, ಕಾರ್ಖಾನೆಗಳಿಗೆ ಮತ್ತು ವ್ಯವಸಾಯದ ಉದ್ದೇಶಕ್ಕೆ ಎಲ್ಲಾ ಸೇರಿ ನೀರಾವರಿ ಇಲಾಖೆ ಮಾಹಿತಿ ಪ್ರಕಾರ 8.506 ಟಿ.ಎಂಸಿ ನೀರು ಮೀಸಲಿಟ್ಟಿರುವುದು ಆನೆಯ ಹೊಟ್ಟೆಗೆ ಹಪ್ಪಳವಿಟ್ಟಂತಾಗಿದೆ ಎಂಬುದಾಗಿ ಅವರು ಹೇಳಿದರು.


    Provided by

    ಈ ಬಾರಿ ವಾಣಿವಿಲಾಸ ಸಾಗರಕ್ಕೆ ಹೆಚ್ಚಿನ ಮಳೆಯಿಂದ ಹೆಚ್ಚಿನ ನೀರು ಸಂಗ್ರಹವಾಗಿದ್ದು, ತುಮಕೂರು ಹಾಗೂ ಚಿತ್ರದುರ್ಗ ಭಾಗದ ಭದ್ರಾ ನಾಲೆಯ ಕಾಲುವೆಗಳಿಗೆ ನೀರು ಹರಿಸಲು ಪ್ರಾರಂಭವಾದರೆ, ಸಾಗರದ ನೀರಿನ ಪ್ರಮಾಣ ಡೆಡ್ ಸ್ಟೋರೇಜ್ ತಲುಪುವುದು ಗ್ಯಾರೆಂಟಿಯಾಗಿದೆ. ಇದರಿಂದ ತಾಲ್ಲೂಕಿನ ಅಂತರ್ಜಲ ಬತ್ತಿ ಹೋಗಿ 2 ವರ್ಷಗಳ ಹಿಂದಿನಂತೆ ಲಕ್ಷಾಂತರ ಅಡಕೆ-ತೆಂಗಿನ ಮರಗಳು ಸೇರಿದಂತೆ ಬಾಳೆ ದಾಳಿಂಬೆಯಂತಹ ತೋಟದ ಬೆಳೆಗಳು ಒಣಗಿಹೋಗುವ ಪರಿಸ್ಥಿತಿ ಮತ್ತೆ ಮರುಕಳಿಸಿ ರೈತರು ಆತ್ಮಹತ್ಯೆಯ ದಾರಿ ಹಿಡಿಯಬೇಕಾಗಿರುತ್ತದೆ. ಆದ್ದರಿಂದ ವಾಣಿವಿಲಾಸ ಸಾಗರಕ್ಕೆ ಸರ್ಕಾರ ಪ್ರತಿವರ್ಷ ಸುಮಾರು 10 ಟಿಎಂಸಿ ನೀರನ್ನು ಮೀಸಲಿಡಬೇಕು ಧರ್ಮಪುರ ಹಾಗೂ ಜೆಜಿಹಳ್ಳಿ ಹೋಬಳಿಗಳಿಗೆ ಹಾಗೂ ಕಲ್ಲುವಳ್ಳಿ ಭಾಗಕ್ಕೆ 2 ನಾಲೆಗಳ ಮುಖಾಂತರ ರೈತರ ಜಮೀನುಗಳಿಗೆ ನೀರು ಹರಿಸಿ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಎಂದರು.

    ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಐಮಂಗಲ ಹೋಬಳಿ ಸೇರಿದಂತೆ ತಾಲೂಕಿನ ಎಲ್ಲಾ ಭಾಗಕ್ಕೆ ನೀರಾವರಿ ಸೌಲಭ್ಯ ಒದಗಿಸಬೇಕು, ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಗೆ ಸೇರಿಸಬೇಕು. ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಕೆ.ಟಿ.ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ, ಮಂಜುನಾಥ್, ದೇವೇಂದ್ರಪ್ಪ ತಿಮ್ಮಣ್ಣ, ಶ್ರೀರಂಗಮ್ಮ, ಗಂಗಮ್ಮ, ತಿಮ್ಮಣ್ಣ, ವೈ.ಶಿವಣ್ಣ, ರಮೇಶ್, ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕುಡಿಯುವ ನೀರಿಗಾಗಿ ಗ್ರಾ.ಪಂ. ಕಚೇರಿಗೆ ಮುತ್ತಿಗೆ

    May 8, 2025

    ಉದಯ ಸೂರ್ಯ ಸಿನಿಮಾ ಪೋಸ್ಟರ್ ಬಿಡುಗಡೆ

    May 7, 2025

    ಕಾಂತಾರ ಚಾಪ್ಟರ್ 1: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು

    May 7, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನದ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ‘ಕಾಂತಾರ ಚಾಪ್ಟರ್…

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.