nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ಪರ್ ಭದ್ರಾಯೋಜನೆ, ಎತ್ತಿನಹೊಳೆ ಯೋಜನೆಯಿಂದ ರೈತರ ಬದುಕು ಹಸನು: ಸಿಎಂ ಬೊಮ್ಮಾಯಿ
    Uncategorized June 5, 2022

    ಅಪ್ಪರ್ ಭದ್ರಾಯೋಜನೆ, ಎತ್ತಿನಹೊಳೆ ಯೋಜನೆಯಿಂದ ರೈತರ ಬದುಕು ಹಸನು: ಸಿಎಂ ಬೊಮ್ಮಾಯಿ

    By adminJune 5, 2022No Comments2 Mins Read
    cm bommai

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ದಾವಣಗೆರೆ ವಿಶ್ವವಿದ್ಯಾನಿಲಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಧರ್ಮಪುರ ಕೆರೆ ಮತ್ತು ಇತರೆ ಏಳು ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಕೆರೆಗಳಿಗೆ ತುಂಬಿಸುವ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ‌ ಭಾಗವಹಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರಾಜ್ಯದ ರೈತರ ಅಭ್ಯುದಯಕ್ಕೋಸ್ಕರ ಅಪ್ಪರ್ ಭದ್ರಾ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಯಂತಹ ಎರಡು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಇದರಿಂದಾಗಿ ಮಧ್ಯ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಈ ಪ್ರದೇಶವನ್ನು ನೀರಾವರಿಗೊಳಪಡಿಸಿ, ಈ ಭಾಗದ ರೈತರ ಬದುಕು ಹಸನುಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು.


    Provided by
    Provided by

    ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾಗದ ರೈತರು ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವಂತೆ ಸುಮಾರು 563 ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದು, ಆಗ ನೀರಾವರಿ ಸಚಿವರಾಗಿದ್ದ ನಾನು ಧರಣಿ ಸ್ಥಳಕ್ಕೆ ಆಗಮಿಸಿ, ವಾಣಿವಿಲಾಸ ಸಾಗರಕ್ಕೆ 5 ಟಿ.ಎಂ.ಸಿ ನೀರು ಹರಿಸುವ ಭರವಸೆ ನೀಡಿದ್ದಲ್ಲದೆ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರ ಒಪ್ಪಿಗೆ ಪಡೆದು, ಈ ಭದ್ರಾ ಯೋಜನೆಗೆ ಬಜೆಟ್ ನಲ್ಲಿ ಮೊದಲ ಬಾರಿಗೆ ಅನುದಾನ ಮೀಸಲಿಡಲಾಯಿತು ಎಂದರು.

    ಈಗ ವಾಣಿವಿಲಾಸ ಸಾಗರದಿಂದ ವೇದಾವತಿ ನದಿ ಪಾತ್ರದ ಮೂಲಕ ಧರ್ಮಪುರ ಕೆರೆಗೆ ನೀರು  ಹರಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಇದರಿಂದ ಈ ಭಾಗದ ಜನರ ಸುಮಾರು ನೂರು ವರ್ಷಗಳ ಬೇಡಿಕೆ ಈಡೇರಿಸುವುದರ ಜೊತೆಗೆ ಈ ಹೋಬಳಿಯ ವಿವಿಧ ಕೆರೆಗಳಿಗೆ ನೀರುಣಿಸುವ ಸುಮಾರು 90 ಕೋಟಿ ವೆಚ್ಚದ ಕಾಮಗಾರಿಗೆ ನಮ್ಮ ಬಿಜೆಪಿ ಸರ್ಕಾರ ಅನುಮೋದನೆ ನೀಡಲಾಗಿದ್ದು, ಈ ಬೇಡಿಕೆ ಈಡೇರಿಸುವಲ್ಲಿ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರ ಪರಿಶ್ರಮ ಅಪಾರವಾದದ್ದು ಎಂದರು.

    ತಾಲೂಕಿನ ಶಾಸಕಿ ಕೆ.ಪೂರ್ಣಿಮಾ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್, ರಾಜ್ಯ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ಕರ್ನಾಟಕ ರಾಜ್ಯ ಮುಖ್ಯಸಚೇತಕರಾದ ವೈ.ಎ.ನಾರಾಯಣಸ್ವಾಮಿ, ಚಿತ್ರದುರ್ಗ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಸಿರಾ ಶಾಸಕ ರಾಜೇಶ್ ಗೌಡ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದಗೌಡ, ಕೆ.ಎಸ್.ನವೀನ್, ಮಾಜಿ ಶಾಸಕ ಆರ್.ರಾಮಯ್ಯ, ಪ್ರವರ್ಗ-1 ರ  ರಾಜ್ಯ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿಗಳಾದ ಕವಿತಾ ಮಣ್ಣಿಕೇರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪರಶುರಾಮ್, ವಿಶ್ವೇಶ್ವರಯ್ಯ ಜಲನಿಗಮದ ಮುಖ್ಯ ಇಂಜಿನಿಯರ್ ರವೀಂದ್ರ, ಅಧೀಕ್ಷಕ ಇಂಜಿನಿಯರ್ ಎಫ್.ಹೆಚ್.ಲಮಾಣಿ, ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಸ್.ರಘುನಾಥ್, ಬಸವಾನಂದ್, ಎಂ.ಜಿ.ಗೋವಿಂದಯ್ಯ, ಡಾ.ವಿರುಪಾಕ್ಷಪ್ಪ, ಜಯರಾಜ್, ಹಾರ್ಡ್ ವೇರ್ ಶಿವಣ್ಣ, ಶ್ರವಣಗೆರೆ ಶಿವಣ್ಣ, ನೀರಾವರಿ ಹೋರಾಟ ಸಮಿತಿ ಮುಖಂಡರುಗಳಾದ ಹೆಚ್.ಆರ್.ತಿಮ್ಮಯ್ಯ, ಪ್ರಕಾಶ್ ಬಬ್ಬೂರು, ಮದ್ದಿಹಳ್ಳಿ ದೊಡ್ಡಯ್ಯ, ಗಿರಿರಾಜ್ ಸಕ್ಕರ, ತಾಲ್ಲೂಕು ಬಿ.ಜೆ.ಪಿ. ಅಧ್ಯಕ್ಷ ವಿಶ್ವನಾಥ್,  ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು , ನಗರಸಭೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಯ ಅಧಿಕಾರಿಗಳು ಮಾಹಿ ಜ್ಯುವೆಲರ್ಸ್ ಮಾಲಿಕರಾದ ಕೌಶಿಕ್ ನಾಯ್ಡು ಸೇರಿದಂತೆ ಪಕ್ಷದ ಕಾರ್ಯಕರ್ತರು ಮುಖಂಡರುಗಳು    ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.