nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಮಾತಾ ಸೇವಾ ಟ್ರಸ್ಟ್ ವತಿಯಿಂದ ಪರಿಸರ ದಿನಾಚರಣೆ
    ಪಾವಗಡ June 5, 2022

    ಭಾರತ ಮಾತಾ ಸೇವಾ ಟ್ರಸ್ಟ್ ವತಿಯಿಂದ ಪರಿಸರ ದಿನಾಚರಣೆ

    By adminJune 5, 2022No Comments2 Mins Read
    parisara

    ಪಾವಗಡ: ಪರಿಸರ ದಿನಾಚರಣೆಯ ಪ್ರಯುಕ್ತ “ಭಾರತ ಮಾತಾ ಸೇವಾ ಟ್ರಸ್ಟ್” ವತಿಯಿಂದ ಪಾವಗಡ ತಾಲೂಕಿನ ಸಾಸಲಕುಂಟೆ, ಆರ್ಲಹಳ್ಳಿ, ಮಲ್ಲಮ್ಮನಹಳ್ಳಿ, ಬುದಿಬೆಟ್ಟ, ಕೋಟಗುಡ್ಡ, ದೆವಲಕೆರೆ, ಮತ್ತು ಪಾವಗಡ ನಗರದಲ್ಲಿ 100 ನೂರಕ್ಕೂ ಹೆಚ್ಚು  ಜಂಬುನೇರಳೆ, ಸಿಬೆಗಿಡ,  ,ದೊಡ್ಡ ಹಲಸಿನ ಹಣ್ಣಿನ ಗಿಡ, ಬೆಲದಕಾಯಿ ಗಿಡ, ಕಾಡುಬಾದಮಿಗಿಡ, ಹೆಬ್ಬೆವು, ಹುಣಸೆ ಗಿಡ, ಗಸಗಸೆಗಿಡ, ಬೇವಿನಗಿಡ, ತೆಗದಗಿಡ, ಸಿತಾಫಲ, ಸಿಲ್ವರ್ ಇನ್ನೂ ಇತರೆ  ವಿವಿಧ ರೀತಿಯ ಗಿಡಗಳನ್ನು ಮನೆಯ ಹತ್ತಿರ, ತೋಟದಲ್ಲಿ, ಹೊಲದಲ್ಲಿ ನೆಡುವುದರ ಮೂಲಕ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

    ಕಾರ್ಯಕ್ರಮಕ್ಕೆ ಟ್ರಸ್ಟಿನ ಅಧ್ಯಕ್ಷರಾದ ನಾಗೇಂದ್ರ ಪ್ರತಾಪ್ ಚಾಲನೆ ನೀಡಿ ಮಾತನಾಡಿ, ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಇದು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ದಿನವಾಗಿದೆ ಎಂದರು.


    Provided by
    Provided by
    Provided by

    ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಇದು ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಭೂಮಿಯು ವಿವಿಧ ಜೀವಿಗಳ ನೆಲೆಯಾಗಿದೆ ಮತ್ತು ನಾವೆಲ್ಲರೂ ಆಹಾರ, ಗಾಳಿ, ನೀರು ಮತ್ತು ಇತರ ಅಗತ್ಯಗಳಿಗಾಗಿ ಪರಿಸರದ ಮೇಲೆ ಅವಲಂಬಿತರಾಗಿದ್ದೇವೆ ಎಂದು ತಿಳಿಸಿದರು.

    ಪರಿಸರದ ಮಹತ್ವವನ್ನು ಅರ್ಥಮಾಡಿಕೊಳ್ಳದೆ ಮಾನವರು ಅದನ್ನು ನಾಶಪಡಿಸುತ್ತಿದ್ದಾರೆ. ಈಗ ಮಾನವ ಚಟುವಟಿಕೆಗಳಿಂದಾಗಿ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ನಮ್ಮ ಅಭಿವೃದ್ಧಿಗಾಗಿ ನಾವು ಅತ್ಯಮೂಲ್ಯ ಪರಿಸರವನ್ನು ತ್ಯಾಗ ಮಾಡುತ್ತಿದ್ದೇವೆ. ನಮಗೆ ಅರಿವಿಲ್ಲದೇ ಪರಿಸರವನ್ನು ಹಾಳು ಮಾಡುವ ಮೂಲಕ ಅನೇಕ ರೋಗಗಳು ಮತ್ತು ಪ್ರಕೃತಿ ವಿಕೋಪಗಳನ್ನು ಕರೆಯುತ್ತಿದ್ದೇವೆ ಎಂದರು.

    ಪರಿಸರವನ್ನು ರಕ್ಷಿಸಲು ನಾವು ಗಮನಹರಿಸಬೇಕಾದ ಮುಖ್ಯ ವಿಷಯಗಳು. ಪರಿಸರವನ್ನು ಹೆಚ್ಚು ಆರೋಗ್ಯಕರವಾಗಿಸಲು ನಾವು ಮರಗಳನ್ನು ನೆಡುವುದರ ಮೇಲೆ ಕೇಂದ್ರೀಕರಿಸಬೇಕು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಬೇಕು ಈ ವಿಶ್ವ ಪರಿಸರ ದಿನದ 2022 ರ ಸಂದರ್ಭದಲ್ಲಿ  ನಾವೆಲ್ಲರೂ ಒಟ್ಟಾಗಿ ಭರವಸೆ ನೀಡೋಣ ಪರಿಸರ ಸಂರಕ್ಷಣೆ ಮಾಡುವೆವೆಂದು ಹೇಳಿದರು.

    ಈ ಸಂಧರ್ಭದಲ್ಲಿ ಟ್ರಸ್ಟಿನ ಗೌರವ ಅಧ್ಯಕ್ಷರಾದ ನಾರಾಯಣಮ್ಮದೊಡ್ಡೀರಪ್ಪ, ಅಧ್ಯಕ್ಷರಾದ ನಾಗೇಂದ್ರ ಪ್ರತಾಪ್, ಖಜಾಂಚಿ ಗೋಪಾಲಕೃಷ್ಣ, ಟ್ರಸ್ಟಿಗಳಾದ ದಿನೇಶ್ ಎಸ್, ಸುನೀಲ್ ಪಾಳೇಗಾರ, ಸುರೇಶ್ ಯಾದವ್, ಮಧುಗಿರಿ ನವಿನ್, ಕ್ಯಾತಗಾನಚೆರ್ಲು ಶ್ರೀನಿವಾಸುಲು, ತಿರುಮಣಿ ಅಕ್ಕಲಪ್ಪ, ನಲಿಗಾನಹಳ್ಳಿ ಹನುಮಂತರಾಯಪ್ಪ ಮತ್ತು  ಪರಮೇಶ್, ಲಿಂಗದಹಳ್ಳಿ ಬಾಲರಾಜು, ವಿಶ್ವನಾಥ್, ಪಾವಗಡ ನಗರದ ಶ್ರಿರಾಮ್, ಶ್ರೀ ಕಾಂತ್ ಹೊಸಕೋಟೆ,  ಸಾಸಲಕುಂಟೆ ಗ್ರಾಮದ ಉಪನ್ಯಾಸಕರಾದ ನರಸಿಂಹಮೂರ್ತಿ, ರಾಣಾಪ್ರತಾಪ್, ಮಂಜುಪ್ರತಾಪ್, ಮದನ್ ರೆಡ್ಡಿ,  ಮಲ್ಲಮ್ಮನಹಳ್ಳಿ ರಾಜಪ್ಪ, ದೇವಲಕೆರೆ ಸುದೀಪ್ , ಬುದಿಬೆಟ್ಟ ಪ್ರವೀಣ್ ಯಾದವ್, ಆರ್ಲಹಳ್ಳಿ ಗ್ರಾಮದ ದಾಸಪ್ಪ ಜಿ,  ಇತರರು ಹಾಜರಿದ್ದರು

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಚಿವ ಜಮೀರ್ ಅಹ್ಮದ್ ಅವರನ್ನು ಭೇಟಿಯಾದ ವೆಂಕಟರಮಣಪ್ಪ, ಹೆಚ್.ವಿ.ವೆಂಕಟೇಶ್

    September 8, 2025

    ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸಹನಾ ಶಾಲೆ ಸಾಧನೆ

    September 4, 2025

    ಧರ್ಮಸ್ಥಳ ಪರ ಪಾವಗಡದಲ್ಲಿ ನೂರಾರು ಭಕ್ತರಿಂದ ಪ್ರತಿಭಟನೆ

    September 2, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.