nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026
    Facebook Twitter Instagram
    ಟ್ರೆಂಡಿಂಗ್
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    • ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ
    • ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಮಾತಾ ಸೇವಾ ಟ್ರಸ್ಟ್ ವತಿಯಿಂದ ಪರಿಸರ ದಿನಾಚರಣೆ
    ಪಾವಗಡ June 5, 2022

    ಭಾರತ ಮಾತಾ ಸೇವಾ ಟ್ರಸ್ಟ್ ವತಿಯಿಂದ ಪರಿಸರ ದಿನಾಚರಣೆ

    By adminJune 5, 2022No Comments2 Mins Read
    parisara

    ಪಾವಗಡ: ಪರಿಸರ ದಿನಾಚರಣೆಯ ಪ್ರಯುಕ್ತ “ಭಾರತ ಮಾತಾ ಸೇವಾ ಟ್ರಸ್ಟ್” ವತಿಯಿಂದ ಪಾವಗಡ ತಾಲೂಕಿನ ಸಾಸಲಕುಂಟೆ, ಆರ್ಲಹಳ್ಳಿ, ಮಲ್ಲಮ್ಮನಹಳ್ಳಿ, ಬುದಿಬೆಟ್ಟ, ಕೋಟಗುಡ್ಡ, ದೆವಲಕೆರೆ, ಮತ್ತು ಪಾವಗಡ ನಗರದಲ್ಲಿ 100 ನೂರಕ್ಕೂ ಹೆಚ್ಚು  ಜಂಬುನೇರಳೆ, ಸಿಬೆಗಿಡ,  ,ದೊಡ್ಡ ಹಲಸಿನ ಹಣ್ಣಿನ ಗಿಡ, ಬೆಲದಕಾಯಿ ಗಿಡ, ಕಾಡುಬಾದಮಿಗಿಡ, ಹೆಬ್ಬೆವು, ಹುಣಸೆ ಗಿಡ, ಗಸಗಸೆಗಿಡ, ಬೇವಿನಗಿಡ, ತೆಗದಗಿಡ, ಸಿತಾಫಲ, ಸಿಲ್ವರ್ ಇನ್ನೂ ಇತರೆ  ವಿವಿಧ ರೀತಿಯ ಗಿಡಗಳನ್ನು ಮನೆಯ ಹತ್ತಿರ, ತೋಟದಲ್ಲಿ, ಹೊಲದಲ್ಲಿ ನೆಡುವುದರ ಮೂಲಕ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

    ಕಾರ್ಯಕ್ರಮಕ್ಕೆ ಟ್ರಸ್ಟಿನ ಅಧ್ಯಕ್ಷರಾದ ನಾಗೇಂದ್ರ ಪ್ರತಾಪ್ ಚಾಲನೆ ನೀಡಿ ಮಾತನಾಡಿ, ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಇದು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ದಿನವಾಗಿದೆ ಎಂದರು.


    Provided by
    Provided by

    ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಇದು ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಭೂಮಿಯು ವಿವಿಧ ಜೀವಿಗಳ ನೆಲೆಯಾಗಿದೆ ಮತ್ತು ನಾವೆಲ್ಲರೂ ಆಹಾರ, ಗಾಳಿ, ನೀರು ಮತ್ತು ಇತರ ಅಗತ್ಯಗಳಿಗಾಗಿ ಪರಿಸರದ ಮೇಲೆ ಅವಲಂಬಿತರಾಗಿದ್ದೇವೆ ಎಂದು ತಿಳಿಸಿದರು.

    ಪರಿಸರದ ಮಹತ್ವವನ್ನು ಅರ್ಥಮಾಡಿಕೊಳ್ಳದೆ ಮಾನವರು ಅದನ್ನು ನಾಶಪಡಿಸುತ್ತಿದ್ದಾರೆ. ಈಗ ಮಾನವ ಚಟುವಟಿಕೆಗಳಿಂದಾಗಿ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ನಮ್ಮ ಅಭಿವೃದ್ಧಿಗಾಗಿ ನಾವು ಅತ್ಯಮೂಲ್ಯ ಪರಿಸರವನ್ನು ತ್ಯಾಗ ಮಾಡುತ್ತಿದ್ದೇವೆ. ನಮಗೆ ಅರಿವಿಲ್ಲದೇ ಪರಿಸರವನ್ನು ಹಾಳು ಮಾಡುವ ಮೂಲಕ ಅನೇಕ ರೋಗಗಳು ಮತ್ತು ಪ್ರಕೃತಿ ವಿಕೋಪಗಳನ್ನು ಕರೆಯುತ್ತಿದ್ದೇವೆ ಎಂದರು.

    ಪರಿಸರವನ್ನು ರಕ್ಷಿಸಲು ನಾವು ಗಮನಹರಿಸಬೇಕಾದ ಮುಖ್ಯ ವಿಷಯಗಳು. ಪರಿಸರವನ್ನು ಹೆಚ್ಚು ಆರೋಗ್ಯಕರವಾಗಿಸಲು ನಾವು ಮರಗಳನ್ನು ನೆಡುವುದರ ಮೇಲೆ ಕೇಂದ್ರೀಕರಿಸಬೇಕು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಬೇಕು ಈ ವಿಶ್ವ ಪರಿಸರ ದಿನದ 2022 ರ ಸಂದರ್ಭದಲ್ಲಿ  ನಾವೆಲ್ಲರೂ ಒಟ್ಟಾಗಿ ಭರವಸೆ ನೀಡೋಣ ಪರಿಸರ ಸಂರಕ್ಷಣೆ ಮಾಡುವೆವೆಂದು ಹೇಳಿದರು.

    ಈ ಸಂಧರ್ಭದಲ್ಲಿ ಟ್ರಸ್ಟಿನ ಗೌರವ ಅಧ್ಯಕ್ಷರಾದ ನಾರಾಯಣಮ್ಮದೊಡ್ಡೀರಪ್ಪ, ಅಧ್ಯಕ್ಷರಾದ ನಾಗೇಂದ್ರ ಪ್ರತಾಪ್, ಖಜಾಂಚಿ ಗೋಪಾಲಕೃಷ್ಣ, ಟ್ರಸ್ಟಿಗಳಾದ ದಿನೇಶ್ ಎಸ್, ಸುನೀಲ್ ಪಾಳೇಗಾರ, ಸುರೇಶ್ ಯಾದವ್, ಮಧುಗಿರಿ ನವಿನ್, ಕ್ಯಾತಗಾನಚೆರ್ಲು ಶ್ರೀನಿವಾಸುಲು, ತಿರುಮಣಿ ಅಕ್ಕಲಪ್ಪ, ನಲಿಗಾನಹಳ್ಳಿ ಹನುಮಂತರಾಯಪ್ಪ ಮತ್ತು  ಪರಮೇಶ್, ಲಿಂಗದಹಳ್ಳಿ ಬಾಲರಾಜು, ವಿಶ್ವನಾಥ್, ಪಾವಗಡ ನಗರದ ಶ್ರಿರಾಮ್, ಶ್ರೀ ಕಾಂತ್ ಹೊಸಕೋಟೆ,  ಸಾಸಲಕುಂಟೆ ಗ್ರಾಮದ ಉಪನ್ಯಾಸಕರಾದ ನರಸಿಂಹಮೂರ್ತಿ, ರಾಣಾಪ್ರತಾಪ್, ಮಂಜುಪ್ರತಾಪ್, ಮದನ್ ರೆಡ್ಡಿ,  ಮಲ್ಲಮ್ಮನಹಳ್ಳಿ ರಾಜಪ್ಪ, ದೇವಲಕೆರೆ ಸುದೀಪ್ , ಬುದಿಬೆಟ್ಟ ಪ್ರವೀಣ್ ಯಾದವ್, ಆರ್ಲಹಳ್ಳಿ ಗ್ರಾಮದ ದಾಸಪ್ಪ ಜಿ,  ಇತರರು ಹಾಜರಿದ್ದರು

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಕೊರಟಗೆರೆ: ಚಿಕ್ಕನಹಳ್ಳಿ ಒಂದು ಕುಗ್ರಾಮ, ಮಹಾಶಕ್ತಿ ಮತ್ತು ಆದಿಶಕ್ತಿ ದೇವತೆಗಳ ನೆಲೆಯಿಂದ ಗ್ರಾಮಕ್ಕೆ ವಿಶೇಷ ಕಳೆ ಬಂದಿದೆ. ತಾಯಿ ಮಹಿಮೆಗೆ…

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.