ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಟಿ.ಬಿ. ಸರ್ಕಲ್ ಬಳಿ ಇರುವ ನಗರದ ಪ್ರವಾಸಿ ಮಂದಿರದಲ್ಲಿ ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯ ಅಧ್ಯಕ್ಷರಾದ ಸಮಾಜ ಸೇವಾ ರತ್ನ ಡಾ.ಎಚ್.ಪ್ರಕಾಶ್ ಬಿರಾವರ್ ಸಮ್ಮುಖದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಗಾಂಧಿನಗರ ಮಹಂತೇಶ್ ಅವರನ್ನು ಹಾಗೂ ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ಸೂರಗೊಂಡನಹಳ್ಳಿ ರಮೇಶ್ ಅವರನ್ನು ಆಯ್ಕೆ ಮಾಡಲಾಯಿತು.
ಹಿರಿಯೂರು ಹಿಂದುಳಿದ ವರ್ಗಗಳ ತಾಲ್ಲೂಕು ಕಾರ್ಯಾಧ್ಯಕ್ಷರಾಗಿ ದರ್ಶನ್ ಅವರನ್ನು, ಹಿಂದುಳಿದ ವರ್ಗಗಳ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ರವಿಕುಮಾರ್ ಸೋಮೇರಹಳ್ಳಿ ರವರನ್ನು ತಾಲ್ಲೂಕು ಸಂಘಟನಾ ಕಾರ್ಯದರ್ಶಿಯಾಗಿ ಮಧು ಸೋಮೇರಹಳ್ಳಿ ರವರನ್ನು ಆಯ್ಕೆಮಾಡಲಾಯಿತು.
ಈ ಸಭೆಯಲ್ಲಿ ರಾಜ್ಯ ಕಾರ್ಯಧ್ಯಕ್ಷರಾದ ಕೆ.ತಿಮ್ಮರಾಜು, ಉಪಾಧ್ಯಕ್ಷರುಗಳಾದ ರಾಜಣ್ಣ, ಘಾಟ್ ಚಂದ್ರಪ್ಪ, ಜಗದೀಶ್, ಯುವ ಘಟಕದ ರಾಜ್ಯ ಅಧ್ಯಕ್ಷರಾದ ಎಂ.ಡಿ.ರಮೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ(ಎಳನೀರು ವೆಂಕಟೇಶ್), ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಹರೀಶ್, ಉಪಾಧ್ಯಕ್ಷರಾದ ಕರುಣ್ ಕುಮಾರ್, ಕಾರ್ಯದರ್ಶಿಗಳಾದ ಮೋಹನ್ ಕುಮಾರ್, ಕಾರ್ಯದರ್ಶಿಯಾದ ದಿವಾಕರ್ ಘಾಟ್, ದಲಿತ ಮುಖಂಡರಾದ ರಾಜಣ್ಣ, ಹಿಂದುಳಿದ ವರ್ಗದ ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಕೆ.ಮಂಜುನಾಥ್, ಶಿರಾ ತಾಲ್ಲೂಕು ಅಧ್ಯಕ್ಷರಾದ ರವಿಕುಮಾರ್, ದಲಿತ ಮುಖಂಡರಾದ ಬೆಳ್ಳಿ ಇತರರು ಭಾಗವಹಿಸಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB