ಹೊಸದುರ್ಗ: ಭಾರತೀಯ ದಲಿತ ಸಂಘರ್ಷ ಸಮಿತಿ(ಸಮಾಜಸೇವಾ ರತ್ನ ಡಾ.ಪ್ರಕಾಶ್ ಬಿರಾವರ್ ಸ್ಥಾಪಿತ) ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಪ್ರಕಾಶ್ ಬಿರಾವಾರ ಅವರ ಆದೇಶದ ಮೇರೆಗೆ ರಾಜ್ಯ ಕಾರ್ಯಾಧ್ಯಕ್ಷರಾದ ಕೆ ತಿಮ್ಮರಾಜು, ರಾಜ್ಯ ಹಿರಿಯ ಉಪಾಧ್ಯಕ್ಷರಾದ ಚೋಳಗುಡ್ಡ ಚಂದ್ರಣ್ಣ, ಮತ್ತೊಬ್ಬ ರಾಜ್ಯ ಉಪಾಧ್ಯಕ್ಷರಾದ ಚಂದ್ರಣ್ಣ ಘಾಟ್ ಹಾಗೂ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಹರೀಶ್ ನೇತೃತ್ವದಲ್ಲಿ ಹೊಸದುರ್ಗ ದಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಪೂಜಾರ್ ಕರಿಯಪ್ಪ ಅವರನ್ನು ಚಿತ್ರದುರ್ಗ ಜಿಲ್ಲಾ ಹಿರಿಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಹೊಸದುರ್ಗ ತಾಲ್ಲೂಕು ಅಧ್ಯಕ್ಷರನ್ನಾಗಿ ಪರಮೇಶ್ ಬಿ. ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕಿನ ಕಾರ್ಯಾಧ್ಯಕ್ಷರನ್ನಾಗಿ ರ೦ಗಸ್ವಾಮಿ ಎಸ್. ಅವರನ್ನು ಆಯ್ಕೆ ಮಾಡಲಾಯಿತು.
ತಾಲ್ಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ನಿರಂಜನ್ ಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕು ಉಪಾಧ್ಯಕ್ಷರನ್ನಾಗಿ ಕರಡಿ ಬಸವರಾಜು ಅವರನ್ನು ಆಯ್ಕೆ ಮಾಡಲಾಯಿತು .
ನಂತರ ಕರ್ನಾಟಕದ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ.ಯನ್ನು ಹೊಸದುರ್ಗ ತಾಲ್ಲೂಕು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸಭೆಯಲ್ಲಿ ಕಾಳಪ್ಪ ಹನಮಂತಪ್ಪ .ವರದರಾಜು ದೇವರಾಜ್ .ಶ್ರೀನಿವಾಸ್ ದೇವರಕೊಟ್ಟ ನಿರಂಜನ್ ಇನ್ನೂ ಮುಂತಾದ ಭಾರತೀಯ ದಲಿತ ಸಂಘರ್ಷ ಸಮಿತಿ.ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು .
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB