ಗುಬ್ಬಿ: ಅಂಚೆ ಕಚೇರಿಯ ವಾಹನ, ಓಮಿನಿ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಹೇರೂರು ಗ್ರಾಮದ ಸಮೀಪ ಸಿಐಟಿ ಕಾಲೇಜು ಬಳಿ ನಡೆದಿದೆ.
ಗಾಯಾಳುಗಳು ತಿಪಟೂರು ತಾಲೂಕಿನ ನೋವಿನಕೆರೆ ಹೋಬಳಿಯ ಧರ್ಮ ಗೌಡನಪಾಳ್ಯ ಗ್ರಾಮದಲ್ಲಿ ಎಂದು ತಿಳಿದು ಬಂದಿದೆ. ತುಮಕೂರಿನಿಂದ ನೊಣವಿನಕೆರೆ ಕಡೆಗೆ ಧಾವಿಸುತ್ತಿದ್ದ ಓಮಿನಿ, ತಿಪಟೂರಿನಿಂದ ತುಮಕೂರಿನ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸ್ಥಗಿತಗೊಂಡಿದ್ದು, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು.
ವರದಿ: ಮಂಜುನಾಥ್ , ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5