ತುಮಕೂರು: ಕಳೆದ 17 ದಿನಗಳಿಂದ ಭೂಮಿ ಹಾಗೂ ವಸತಿ ರಹಿತರು ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ನಡೆಸುತ್ತಿದ್ದು, ಇಂದು ಧರಣಿ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಭೇಟಿ ನೀಡಿದರು.
ಧರಣಿ ನಿರತರ ಸಮಸ್ಯೆ ಆಲಿಸಿದ ಆರ್. ರಾಜೇಂದ್ರ, ಧರಣಿ ನಿರತರ ಬೇಡಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಬಳಿಯಲ್ಲಿ ಮಾತನಾಡಿ ತುರ್ತಾಗಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಭೂಮಿ, ವಸತಿ ರಹಿತರ ಧರಣಿಗೆ ತಾನು ಪಕ್ಷಾತೀತನಾಗಿ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದರು. ಇದೇ ವೇಳೆ ಧರಣಿ ನಿರತರು ತಮ್ಮ ಬೇಡಿಕೆಗಳ ಮನವಿಯನ್ನು ಆರ್. ರಾಜೇಂದ್ರ ಅವರಿಗೆ ನೀಡಿದರು.
ವರದಿ: ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5