ಬೀದರ್: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ
ಕೊಲೆಯಾದ ಶಿವಕುಮಾರ್ ದಿನಾಲೂ ಮದ್ಯ ಸೇವಿಸಿ ಬಂದು ಮನೆಯಲ್ಲಿ ಕುಟುಂಬಸ್ಥರಿಗೆ ಗಲಾಟೆ ಮಾಡುತ್ತಿದ್ದ ಭಾನುವಾರ (ಮೇ11) ರಂದು ರಾತ್ರಿ ಕುಡಿದ ಅಮಲಿನಲ್ಲಿ ಮನೆಗೆ ಬಂದು ಪುನಃ ಕಿರಿಕಿರಿ ತೆಗೆದಿದ್ದ ಇದರಿಂದ ಕೋಪಗೊಂಡ ಮಗ ರೇವಣಸಿದ್ದ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಪರಿಣಾಮವಾಗಿ ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ವಿಷಯ ತಿಳಿದು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹುಮನಾಬಾದ್ ಡಿವೈಎಸ್ಪಿ ಜೆ ಎಸ್. ನ್ಯಾಮೇಗೌಡ, ಬಸವಕಲ್ಯಾಣ ಸಿಪಿಐ ಅಲಿಸಾಬ್,ಹುಲಸೂರ ಪಿಎಸ್ ಐ ಶಿವಪ್ಪ ಮೇಟಿ ಹಾಗೂ ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲಿಸಿದರು.ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW