nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ತನಿಖೆಗೆ ಉಭಯ ಸಚಿವರಿಂದ ಒತ್ತಾಯ
    ಜಿಲ್ಲಾ ಸುದ್ದಿ June 27, 2025

    ಬೀದರ್: ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ತನಿಖೆಗೆ ಉಭಯ ಸಚಿವರಿಂದ ಒತ್ತಾಯ

    By adminJune 27, 2025No Comments2 Mins Read
    bidar

    Provided by
    Provided by

    ಬೀದರ್ : ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್‌ ಗಳ ಸುಮಾರು 430 ಕೋಟಿ ರೂ. ಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರಾದ ಈಶ್ವರ್ ಖಂಡ್ರೆ ಮತ್ತು ರಹೀಮ್ ಖಾನ್ ಅವರು ಒತ್ತಾಯಿಸಿದ್ದಾರೆ.

    ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಹಳ್ಳಿಖೇಡ್‌ ನ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವ ಮತ್ತು ಕಾರ್ಖಾನೆಯು ವಿವಿಧ ಸಹಕಾರಿ ಬ್ಯಾಂಕ್ ನಿಂದ ಪಡೆದಿರುವ ಸಾಲದ ಮರುಪಾವತಿ ಕುರಿತ ಸಭೆಯಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ ಅವರು, ಈ ಹಿಂದೆಯೂ ಬಿ ಎಸ್‌ ಎಸ್ ಕೆ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶ ಆಗಿದೆ. ಆದರೆ ತಾರ್ಕಿಕ ಅಂತ್ಯ ಕಂಡಿಲ್ಲ. ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ದಂಡನೆ ಆಗಬೇಕು ಎಂದು ಆಗ್ರಹಿಸಿದರು

    ಕಾರ್ಖಾನೆಯು ಡಿಸಿಸಿ ಬ್ಯಾಂಕ್ ನಿಂದ 115 ಕೋಟಿ ರೂ. ಸಾಲ ಪಡೆದಿದೆ. ಬಡ್ಡಿ ಸೇರಿ 233 ಕೋಟಿ ರೂ. ಬಾಕಿ ಪಾವತಿಸಬೇಕಿದೆ. ಕಾರ್ಖಾನೆ ಮತ್ತು ಡಿಸಿಸಿ ಬ್ಯಾಂಕ್ ಎರಡೂ ರೈತರದ್ದೇ ಆಗಿದೆ. ಬೆಟ್ಟದಷ್ಟು ಸಾಲದ ಹೊರೆ ಇದ್ದು ಸಕ್ಕರೆ ಕಾರ್ಖಾನೆಯೂ ಮುಚ್ಚಿದೆ. ಬ್ಯಾಂಕ್ ಕೂಡ ಚೇತರಿಸಿಕೊಳ್ಳದಂತಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಯ ಪುನಶ್ಚೇತನ ಕುರಿತಂತೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಬೇಕು ಎಂದು ಅವರು ಸಲಹೆ ನೀಡಿದರು.

    ಸಚಿವ ರಹೀಮ್ ಖಾನ್ ಅವರು ಮಾತನಾಡಿ, ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ಮಾಡಿದವರ ವಿರುದ್ಧ ಕ್ರಮ ಆಗದಿದ್ದರೆ ಮತ್ತೆ ಅವರೇ ಚುನಾಯಿಸಿ ಬಂದು ಕಾರ್ಖಾನೆಯನ್ನು ನಾಶ ಮಾಡುತ್ತಾರೆ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


    Provided by
    Provided by

    ಕಾರ್ಖಾನೆಯ ಸ್ವಾಧೀನದಲ್ಲಿರುವ 173 ಎಕರೆ ಜಮೀನಿನ ಪೈಕಿ, ಕಾರ್ಖಾನೆಗೆ ಬೇಕಾದಷ್ಟು ಜಾಗ ಇಟ್ಟುಕೊಂಡು ಭಾಗಶಃ ಮಾರಾಟ ಮಾಡಿ, ಬ್ಯಾಂಕ್ ಸಾಲ ತೀರಿಸಿ, ಯಂತ್ರೋಪಕರಣಗಳಿಗೆ ಹೊಸ ಸಾಲ ಪಡೆದು ಕಾರ್ಖಾನೆ ಆರಂಭಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಲು ಸಹಕಾರ ಸಚಿವ ರಾಜಣ್ಣ ಅವರು ಸಲಹೆ ನೀಡಿದರು.

    ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕಾಗಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಮತ್ತು ಕಾರ್ಖಾನೆಯ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ್, ಚಂದ್ರಶೇಖರ್ ಪಾಟೀಲ್,ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ್, ಚಂದ್ರಶೇಖರ್ ಪಾಟೀಲ್, ಎಂ.ಜಿ.ಮುಳೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಖಂಡ್ರೆ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.