nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Facebook Twitter Instagram
    ಟ್ರೆಂಡಿಂಗ್
    • ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    • ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ
    • ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ
    • ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ
    • ಸಾಲ ಮರುಪಾವತಿ ಮಾಡದ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿಹಾಕಿ ಟಾರ್ಚರ್!
    • ಕುಟುಂಬ ಗಲಾಟೆ ನಿಲ್ಲಿಸಲು ಬಂದ ಪೇದೆಯಿಂದ ಮಹಿಳೆ ಮೇಲೆ ಅತ್ಯಾಚಾರ!
    • ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    • ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ತನಿಖೆಗೆ ಉಭಯ ಸಚಿವರಿಂದ ಒತ್ತಾಯ
    ಜಿಲ್ಲಾ ಸುದ್ದಿ June 27, 2025

    ಬೀದರ್: ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ತನಿಖೆಗೆ ಉಭಯ ಸಚಿವರಿಂದ ಒತ್ತಾಯ

    By adminJune 27, 2025No Comments2 Mins Read
    bidar

    ಬೀದರ್ : ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್‌ ಗಳ ಸುಮಾರು 430 ಕೋಟಿ ರೂ. ಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರಾದ ಈಶ್ವರ್ ಖಂಡ್ರೆ ಮತ್ತು ರಹೀಮ್ ಖಾನ್ ಅವರು ಒತ್ತಾಯಿಸಿದ್ದಾರೆ.

    ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಹಳ್ಳಿಖೇಡ್‌ ನ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವ ಮತ್ತು ಕಾರ್ಖಾನೆಯು ವಿವಿಧ ಸಹಕಾರಿ ಬ್ಯಾಂಕ್ ನಿಂದ ಪಡೆದಿರುವ ಸಾಲದ ಮರುಪಾವತಿ ಕುರಿತ ಸಭೆಯಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ ಅವರು, ಈ ಹಿಂದೆಯೂ ಬಿ ಎಸ್‌ ಎಸ್ ಕೆ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶ ಆಗಿದೆ. ಆದರೆ ತಾರ್ಕಿಕ ಅಂತ್ಯ ಕಂಡಿಲ್ಲ. ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ದಂಡನೆ ಆಗಬೇಕು ಎಂದು ಆಗ್ರಹಿಸಿದರು


    Provided by
    Provided by

    ಕಾರ್ಖಾನೆಯು ಡಿಸಿಸಿ ಬ್ಯಾಂಕ್ ನಿಂದ 115 ಕೋಟಿ ರೂ. ಸಾಲ ಪಡೆದಿದೆ. ಬಡ್ಡಿ ಸೇರಿ 233 ಕೋಟಿ ರೂ. ಬಾಕಿ ಪಾವತಿಸಬೇಕಿದೆ. ಕಾರ್ಖಾನೆ ಮತ್ತು ಡಿಸಿಸಿ ಬ್ಯಾಂಕ್ ಎರಡೂ ರೈತರದ್ದೇ ಆಗಿದೆ. ಬೆಟ್ಟದಷ್ಟು ಸಾಲದ ಹೊರೆ ಇದ್ದು ಸಕ್ಕರೆ ಕಾರ್ಖಾನೆಯೂ ಮುಚ್ಚಿದೆ. ಬ್ಯಾಂಕ್ ಕೂಡ ಚೇತರಿಸಿಕೊಳ್ಳದಂತಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಯ ಪುನಶ್ಚೇತನ ಕುರಿತಂತೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಬೇಕು ಎಂದು ಅವರು ಸಲಹೆ ನೀಡಿದರು.

    ಸಚಿವ ರಹೀಮ್ ಖಾನ್ ಅವರು ಮಾತನಾಡಿ, ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ಮಾಡಿದವರ ವಿರುದ್ಧ ಕ್ರಮ ಆಗದಿದ್ದರೆ ಮತ್ತೆ ಅವರೇ ಚುನಾಯಿಸಿ ಬಂದು ಕಾರ್ಖಾನೆಯನ್ನು ನಾಶ ಮಾಡುತ್ತಾರೆ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಕಾರ್ಖಾನೆಯ ಸ್ವಾಧೀನದಲ್ಲಿರುವ 173 ಎಕರೆ ಜಮೀನಿನ ಪೈಕಿ, ಕಾರ್ಖಾನೆಗೆ ಬೇಕಾದಷ್ಟು ಜಾಗ ಇಟ್ಟುಕೊಂಡು ಭಾಗಶಃ ಮಾರಾಟ ಮಾಡಿ, ಬ್ಯಾಂಕ್ ಸಾಲ ತೀರಿಸಿ, ಯಂತ್ರೋಪಕರಣಗಳಿಗೆ ಹೊಸ ಸಾಲ ಪಡೆದು ಕಾರ್ಖಾನೆ ಆರಂಭಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಲು ಸಹಕಾರ ಸಚಿವ ರಾಜಣ್ಣ ಅವರು ಸಲಹೆ ನೀಡಿದರು.

    ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕಾಗಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಮತ್ತು ಕಾರ್ಖಾನೆಯ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ್, ಚಂದ್ರಶೇಖರ್ ಪಾಟೀಲ್,ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ್, ಚಂದ್ರಶೇಖರ್ ಪಾಟೀಲ್, ಎಂ.ಜಿ.ಮುಳೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಖಂಡ್ರೆ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ…

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025

    ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ

    July 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.