ಕೊರಟಗೆರೆ: ತಾಲ್ಲೂಕಿನ ಕಲ್ಲುಗುಟ್ಟರಹಳ್ಳಿ ಗ್ರಾಮದ ಭೀಮೇಗೌಡನ ಮಗ ರಾಮಕೃಷ್ಣಪ್ಪ 65 ವರ್ಷದ ವ್ಯಕ್ತಿ ಪಟ್ಟಣಕ್ಕೆ ಹೋಗಲು ಜಂಪೇನಹಳ್ಳಿ ಕ್ರಾಸ್ ಬಳಿ ಬಸ್ ಗಾಗಿ ಕಾಯುತ್ತಿದ್ದಾಗ ತೋವಿನಕೆರೆ ಮಾರ್ಗದಿಂದ ಅತಿ ವೇಗವಾಗಿ ಬಂದ ದ್ವಿಚಕ್ರ ವಾಹನ ಸವಾರನೋರ್ವ ತನ್ನ ದ್ವಿಚಕ್ರ ವಾಹನವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗದೆ ಏಕಾಏಕಿ ವಿಶ್ರಾಂತಿ ಗೃಹದ ಬಳಿ ನಿಂತಿದ್ದ ರಾಮಕೃಷ್ಣಪ್ಪ ಅವರಿಗೆ ಗುದ್ದಿದ್ದಾನೆ.
ದ್ವಿಚಕ್ರ ವಾಹನ ಗುದ್ದಿದ ರಭಸಕ್ಕೆ ರಾಮಕೃಷ್ಣಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಕ್ಷಣ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೃತ ರಾಮಕೃಷ್ಣಪ್ಪನ ಜೊತೆಯಲ್ಲಿದ್ದ ಸಂಬಂಧಿ ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ. ಕೊರಟಗೆರೆ ಪೋಲಿಸ್ ಠಾಣಾ ನೂತನ ಅಧಿಕಾರಿ ಸಿಪಿಐ ಸುರೇಶ್ ಹಾಗೂ ಪಿಎಸ್ ಐ ನಾಗರಾಜು ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ಇನ್ನೂ ಈ ಅನಾಹುತಕ್ಕೆ ಕಾರಣವಾದ ದ್ವಿಚಕ್ರವಾಹನ ಸವಾರ ಸ್ಥಳದಿಂದ ಪರಾರಿಯಾಗಿದ್ದು, ಆತನ ವಿರುದ್ಧ ಹಿಟ್ & ರನ್ ಕೇಸ್ ದಾಖಲಿಸಲಾಗಿದ್ದು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz