ಪಾವಗಡ: ಕಾರು ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರ ಸ್ಥಿತಿ ಗಂಭೀರವಾದ ಘಟನೆ ಪಾವಗಡ ಪಟ್ಟಣದ ಟೋಲ್ ಗೇಟ್ ಬಳಿಯ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಇಂದು ಸಂಜೆ 5 ಗಂಟೆಗೆ ನಡೆದಿದೆ.
ಹರೀಶ್ ಮತ್ತು ಭಾಷಾ ಎಂಬವರು ಗಾಯಗೊಂಡ ಬೈಕ್ ಸವಾರರಾಗಿದ್ದು, ಬಳ್ಳಾರಿ ರಸ್ತೆಯಿಂದ ಬರುತ್ತಿರುವಂತಹ ಕಾರು ಹಾಗೂ ಎದುರಿನಿಮದ ಬರುತ್ತಿದ್ದ ಬೈಕ್ ನಡುವೆ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಮತ್ತು ಹಿಂದೂಪುರಕ್ಕೆ ಕರೆದೊಯ್ಯಲಾಗಿದೆ.
ಅಪಘಾತವಾದ ಸಮಯದಲ್ಲಿ ಸ್ಥಳೀಯ ಆಟೋ ಚಾಲಕರು ಹಾಗೂ ಆರ್.ಕೆ.ಆಂಬುಲೆನ್ಸ್ ನವರ ಸಹಾಯದಿಂದ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಅವರನ್ನು ಸೇರಿಸಲಾಯಿತು
ಘಟನಾ ಸ್ಥಳಕ್ಕೆ ಪಾವಗಡ ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz