ತುಮಕೂರು: ಬಿಸಿಯೂಟ ತಯಾರಿಕಾ ಸಿಬ್ಬಂದಿಯ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಿಕರ ಫೆಡರೇಷನ್(ಎಐಟಿಯುಸಿ) ವತಿಯಿಂದ ಒತ್ತಾಯಿಸಲಾಯಿತು.
2022ರ ಬಜೆಟ್ ನಲ್ಲಿ ಬಿಸಿಯೂಟ ತಯಾರಿಕರ ವೇತನ ಹೆಚ್ಚಿಸುವಂತೆ ಒತ್ತಾಯಿಸಲಾಗಿತ್ತು. ಆದರೆ, ಬಜೆಟ್ ನಿಂದ ನಿರಾಸೆಯಾಗಿದೆ ಎಂದ ಎಐಟಿಯುಸಿ ಮುಖಂಡರು, ಸರ್ಕಾರದ ನಿರ್ಧಾರದಿಂದ ಶಾಲೆಗಳಲ್ಲಿ ಅಡುಗೆ ಸಹಾಯಕರಾಗಿ ದುಡಿಯುತ್ತಿರುವ ಬಿಸಿಯೂಟ ತಯಾರಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯ ಅಡುಗೆಯವರಿಗೆ ತಿಂಗಳಿಗೆ ಕೇವಲ 2,700 ರೂಪಾಯಿ, ಸಹಾಯಕ ಅಡುಗೆಯವರಿಗೆ ತಿಂಗಳಿಗೆ ಕೇವಲ 2,600 ರೂಪಾಯಿಗಳನ್ನು ನೀಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಿಸಲು ಸಾಧ್ಯವಿಲ್ಲ ಎಂದರು.
ನಮ್ಮ ಮನವಿಯನ್ನು ಪುನರ್ ಪರಿಶೀಲನೆ ಮಾಡಿ 2022ರ ಬಜೆಟ್ ನಲ್ಲಿಯೇ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB