ಹುಬ್ಬಳ್ಳಿ: ನಿರಾಧಾರವಾದ ವಿಚಾರಗಳ ಬಗ್ಗೆಯೇ ಬಿಜೆಪಿಯವರು ಹೋರಾಟ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.
ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು , ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿತ್ತು ಎಂದು ಹೇಳಿದರು.
ಹುಬ್ಬಳ್ಳಿ ಗಲಭೆ ಪ್ರಕರಣದ ಸುಳ್ಳು ಪ್ರಕರಣವೆಂದು ನಿರ್ಧರಿಸಿ ಪ್ರಕರಣವನ್ನು ವಾಪಸ್ಸು ಪಡೆಯಲಾಗಿದೆ. ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296