nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯಿಂದ ಬಡವರ ಉದ್ಧಾರ ಆಗಿಲ್ಲ: ಸಚಿವ ಈಶ್ವರ ಖಂಡ್ರೆ
    ರಾಜ್ಯ ಸುದ್ದಿ May 31, 2024

    ಬಿಜೆಪಿಯಿಂದ ಬಡವರ ಉದ್ಧಾರ ಆಗಿಲ್ಲ: ಸಚಿವ ಈಶ್ವರ ಖಂಡ್ರೆ

    By adminMay 31, 2024No Comments3 Mins Read
    eeshwar khandre

    ಔರಾದ್: ಬಿಜೆಪಿಯಿಂದ ದೇಶದ ಉದ್ಧಾರ ಸಾಧ್ಯವಿಲ್ಲ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಬಡವರ ಉದ್ಧಾರ ಆಗಿಲ್ಲ, ಬದಲಿಗೆ ಅಂಬಾನಿ ಮತ್ತು ಅದಾನಿ ಎಂಬ ಇಬ್ಬರು ಉದ್ಯಮಿಗಳು ದೊಡ್ಡ ಶ್ರೀಮಂತರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

    ಇಲ್ಲಿಯ ಘೂಳೆ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

    ದುಡಿಯುವ ಕೈಗಳಿಗೆ ಕೆಲಸ ನೀಡುವುದು ಕಾಂಗ್ರೆಸ್ ಸರಕಾರದ ಮೊದಲ ಆದ್ಯತೆಯಾಗಿದೆ. ಆದರೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ನುಡಿದಂತೆ ಐದು ಗ್ಯಾರಂಟಿಗಳು ಜಾರಿಗೆ ತರುವ ಮೂಲಕ 30 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಮಾಡಿಕೊಂಡಿದೆ. ಅಲ್ಲದೇ 30—40 ಸಾವಿರಕ್ಕೂ ಹೆಚ್ಚು ಹುದ್ದೆಗಳ ಅಧಿಸೂಚನೆ ಹೊರಡಿಸಿದೆ. ನಿರುದ್ಯೋಗಿಗಳಿಗೆ ಸ್ಪಂದಿಸುವದು ಕಾಂಗ್ರೆಸ್ ಸರಕಾರದಿಂದ ಮಾತ್ರ ಸಾಧ್ಯ ಎಂದರು.

    ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ನೇಮಕಾತಿ ಮಾಡಿಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಸರಕಾರ ಕೇವಲ ಅದಾನಿ, ಅಂಬಾನಿ ಅವರ ಅಭೀವೃದ್ಧಿಗೆ ಶ್ರಮಿಸುತ್ತಿದೆ. ಕೇಂದ್ರ ಸರಕಾರ ಬಡವರ ಪರ ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ಕೇವಲ ಅದಾನಿ, ಅಂಬಾನಿ ಪರ ಕೆಲಸ ಮಾಡಿದೆ. ಎಲ್ಲವೂ ಖಾಸಗೀಕರಣ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚಂದ್ರಶೇಖರ ಪಾಟೀಲ್ ಗೆಲುವು ಸಾಧಿಸಿದರೇ ನನಗೆ ಶಕ್ತಿ ತುಂಬಿದಂತಾಗುತ್ತದೆ ಎಂದರು.

    ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವದು ಕಾಂಗ್ರೆಸ್ ಸರಕಾರ. ಈ ಭಾಗಕ್ಕೆ ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡಿದರಿಂದ 70 ವೈದ್ಯಕೀಯ ಸೀಟುಗಳಿಂದ 700ಕ್ಕೆ ಏರಿಕೆಯಾಗಿದೆ ಎಂದರು.

    ಎಂಎಲ್ ಸಿ ಭೀಮರಾವ ಪಾಟೀಲ್ ಮಾತನಾಡಿ, ಕಳೆದ ಬಾರಿ ಚಂದ್ರಶೇಖರ ಪಾಟೀಲ್ ಅವರು ಗೆಲುವು ಸಾಧಿಸಿದ ಪರಿಷತ್ ನಲ್ಲಿಯೂ ಹಾಗೂ ಹೊರಗೆ ಪದವೀಧರರ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಏಳನೇ ವೇತನ ಆಯೋಗ ಜಾರಿಗೊಳಿಸುವದು. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವದು. ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವುದು ಕಾಂಗ್ರೆಸ್ ಸರಕಾರ ಯೋಜನೆಯಾಗಿವೆ. ಆದ್ದರಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಮುಖ್ಯವಾಗಿದೆ ಎಂದರು.

    ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಮಾತನಾಡಿ, ದೇಶದಲ್ಲಿ ಬಿಜೆಪಿ ವಿರುದ್ಧ ವಾತಾವರಣ ಗಟ್ಟಿಯಾಗತೊಡಗಿದ್ದು, ಕಾಂಗ್ರೆಸ್ ಪರ ಅಲೆ ಸೃಷ್ಟಿಯಾಗಿದೆ. ಯುವಕರಿಂದಲೇ ಅಧಿಕಾರಕ್ಕೆ ಬಂದು 10 ವರ್ಷಗಳಿಂದ ದೇಶದಲ್ಲಿ ಬಿಜೆಪಿ ಆಳ್ವಿಕೆ ನಡೆಸಿದರು ಯುವಜನರನ್ನು ನಿರ್ಲಕ್ಷಿಸಿದ ಬಿಜೆಪಿಗೆ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

    ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಆನಂದ ಚವ್ಹಾಣ, ಮಾಜಿ ತಾಪಂ ಉಪಾಧ್ಯಕ್ಷ ನೇಹರು ಪಾಟೀಲ್, ಶಿವರಾಜ ದೇಶಮುಖ, ಡಾ. ಪೈಯಾಜ್ ಅಲೀ, ರಾಮಣ್ಣ ವಡಿಯಾರ್, ಜಾನ್ ವಿಸ್ಲಿ, ಹಣಮಂತರಾವ ಚವ್ಹಾಣ, ಸುಧಾಕಾರ ಕೊಳ್ಳುರ್, ಚನ್ನಪ್ಪ ಉಪ್ಪೆ, ಪ್ರಕಾಶ ಪಾಟೀಲ್, ಅಮರ ಜಾಧವ್, ನಾಗಪ್ಪ ಮಾಸ್ಟರ್, ಸಾಯಿಕುಮಾರ, ಸುನಿಲಕುಮಾರ ದೇಶಮುಖ, ಬಸವರಾಜ ದೇಶಮುಖ ಸೇರಿದಂತೆ ಅನೇಕರಿದ್ದರು.

    ನನ್ನ ಕೈ ಬಲಪಡಿಸಿ ಖಂಡ್ರೆ:

    ಡಾ. ಚಂದ್ರಶೇಖರ ಪಾಟೀಲ್ ಅವರಿಗೆ ಗೆಲ್ಲಿಸುವ ಮೂಲಕ ನನ್ನ ಕೈ ಬಲಪಡಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಪಾಟೀಲ್ ಅವರು ಬೀದರನವರೇ ಆಗಿದ್ದು, ಅವರಿಗೆ ಗೆಲ್ಲಿಸಿದರೇ ಸಿಎಂ ಬಳಿಯಿಂದ ಹೆಚ್ಚಿನ ಅನುದಾನ ತರಲು ನನಗೆ ಮತ್ತಷ್ಟು ಸಹಕಾರಿಯಾಗುತ್ತದೆ ಎಂದರು.

    ಎಂಪಿ ಚುನಾವಣೆ ಗೆಲ್ಲುವ ವಿಶ್ವಾಸ:

    ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಗೆಲುವಿಗಾಗಿ ಔರಾದ್ ತಾಲೂಕಿನ ಜನ ಶ್ರಮಿಸಿದ್ದಾರೆ. ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿಯ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಔರಾದನಿಂದ ಕನಿಷ್ಟ 15–20 ಸಾವಿರ ಲೀಡ್ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

    ಎಂಎಲ್ಸಿ ಮಾಡಲು ಒತ್ತಾಯ:

    ಕಳೆದ 10ವರ್ಷದಿಂದ ಡಾ. ಭೀಮಸೇನರಾವ ಶಿಂಧೆ ಅವರು ಕಾರ್ಯಕರ್ತರೊಂದಿಗೆ ಪಕ್ಷದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ಅಥವಾ ಅರ್ಹರಿಗೆ ಗುರುತಿಸಿ ಔರಾದ್ ತಾಲೂಕಿನ ವ್ಯಕ್ತಿಗೆ ಈ ಬಾರಿ ಎಂಎಲ್ಸಿ ಮಾಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಅವರಿಗೆ ಇಲ್ಲಿಯ ಕಾರ್ಯಕರ್ತರು ಲಿಖಿತ ಮನವಿಪತ್ರ ಸಲ್ಲಿಸಿದರು. ಔರಾದ್ ಕಾರ್ಯಕರ್ತರಿಗೆ ಶಕ್ತಿ ತುಂಬಲು ಇಲ್ಲಿಯ ವ್ಯಕ್ತಿಗೆ ಎಂಎಲ್ಸಿ ಮಾಡಬೇಕು ಇದರಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಿದಂತಾಗುತ್ತದೆ ಎಂದು ಮನವಿಪತ್ರದಲ್ಲಿ ತಿಳಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.