nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಜಾರಿಗೊಳಿಸಿದ ಯೋಜನೆ ಕಡಿತಗೊಳಿಸಿ ಬಿಜೆಪಿಯಿಂದ ಜನ ವಿರೋಧಿ ಆಡಳಿತ: ಸಿದ್ದರಾಮಯ್ಯ
    ಜಿಲ್ಲಾ ಸುದ್ದಿ April 9, 2022

    ಕಾಂಗ್ರೆಸ್ ಜಾರಿಗೊಳಿಸಿದ ಯೋಜನೆ ಕಡಿತಗೊಳಿಸಿ ಬಿಜೆಪಿಯಿಂದ ಜನ ವಿರೋಧಿ ಆಡಳಿತ: ಸಿದ್ದರಾಮಯ್ಯ

    By adminApril 9, 2022No Comments3 Mins Read
    siddaramaiha

    ಸರಗೂರು: ತಾಲೂಕಿನ ಮೊಳೆಯೂರು ಗ್ರಾಮದಲ್ಲಿ ಕುರುಬ ಸಮಾಜದಿಂದ ಶುಕ್ರವಾರ ನಡೆದ ಶ್ರೀ ಬಿಲ್ ಕುಮಾರಸ್ವಾಮಿ, ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನಕ ಭವನವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಿದರು.

    ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಆಡಳಿತರೂಢ ಬಿಜೆಪಿ ಸರಕಾರ ಮೊಟುಕುಗೊಳಿಸಿದ್ದು, ಜನ ವಿರೋಧಿ ಆಡಳಿತ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ನಾನು ಮುಖ್ಯಮಂತ್ರಿಯಾಗಿದ್ದಾಗ 165 ಭರವಸೆಗಳನ್ನು ಈಡೇರಿಸಿದ್ದೇನೆ. ಶ್ರೀ ಸಾಮಾನ್ಯನ ಅನುಕೂಲಕ್ಕಾಗಿ ಕಾಂಗ್ರೆಸ್ ಜಾರಿಗೊಳಿಸಿದ ಇಂದಿರಾ ಕ್ಯಾಂಟಿನ್, ಪಶು ಭಾಗ್ಯ, ಶೋ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ನಿಷೇಧಿಸಿ, ಇನ್ನು ಕೆಲವು ಯೋಜನೆಗಳನ್ನು ಕಡಿತಗೊಳಿಸುವ ಮೂಲಕ ಬಿಜೆಪಿ ಜನ ವಿರೋಧಿ ಆಡಳಿತ ನೀಡುತ್ತಿದೆ. ಎಸ್‍ ಸಿ, ಎಸ್ಟಿ ಅನುದಾನ ಕಡಿತಗೊಳಿಸಿ, ಮೋಸ ಮಾಡುತ್ತಿದ್ದಾರೆ.  ರೈತರಿಗೆ ಕನಿಷ್ಠ ಬೆಂಬಲ ನೀಡುವಲ್ಲಿ ವಿಫಲವಾಗಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಮನೆ ಹಾಳು ಮಾಡಿದ್ದಾರೆ ಎಂದು ಅವರು ಟೀಕಿಸಿದರು.

    ತಾಲೂಕು ಅಭಿವೃದ್ಧಿಗೆ  ಕಡೆಗಣೆನೆ:

    ಮುಖ್ಯಮಂತ್ರಿಯಾಗಿದ್ದಾಗ ಕೊನೆಯ ಅವಧಿಯಲ್ಲಿ 53 ಹೊಸ ತಾಲೂಕು ಘೋಷಣೆ ಮಾಡಿದೆ. ಅವುಗಳಿಗೆ ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯಾಗಲೀ, ಬಿಜೆಪಿಯ ಯಡಿಯೂರಪ್ಪ ಹಾಗೂ ಬಸವರಾಜು ಬೊಮ್ಮಾಯಿಯಾಗಲೀ ತಮ್ಮ ಆಡಳಿತದ ಅವಧಿಯಲ್ಲಿ ಹೊಸ ತಾಲೂಕುಗಳಿಗೆ  ಮೂಲ ಸೌಲಭ್ಯ ಒದಗಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದು, ಅಭಿವೃದ್ಧಿ ಮಾಡುವಲ್ಲಿ ಕಣಗಣಿಸುತ್ತಿದ್ದಾರೆ ಎಂದರು.

    2023ಕ್ಕೆ ಕಾಂಗ್ರೆಸ್ ಅಧಿಕಾರ ಕ್ಕೆ ಬರಲಿದೆ. ಆಗ ನೂತನ ತಾಲೂಕುಗಳಿಗೆ ಮೂಲ ಸೌಲಭ್ಯ ಒದಗಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

     ಬಿಜೆಪಿ ಕೆಟ್ಟ ಸರಕಾರ:

    ರಾಜ್ಯದ ಇತಿಹಾಸದಲ್ಲೇ ಬಿಜೆಪಿಯಂಥ ಕೆಟ್ಟ ಸರಕಾರವನ್ನು ಕಂಡಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಅಭಿವೃದ್ಧಿಗಾಗಿ 165 ಭರವಸೆಗಳನ್ನು ಈಡೇರಿಸಿದ್ದೆ. ಆದರೆ, ಬಿಜೆಪಿ ಸರಕಾರ ಅಭಿವೃದ್ಧಿಗೆ ಹೊತ್ತು ನೀಡುತ್ತಿಲ್ಲ ಎಂದರು.

    ಬದಲಿಗೆ ಕೋಮು ಗಲಭೆ ಸೃಷ್ಟಿಸುತ್ತಿದೆ. ಸಂಪ್ರದಾಯದ ಹೆಸರಿನಲ್ಲಿ ಜಾತಿ ಹೊಡೆಯ ಕೆಲಸವಾಗಬಾರದು. ಬಿಜೆಪಿ ಎಲ್ಲವನ್ನೂ ಮೀರಿದೆ. ಹೀಗಾಗಿ ಪೀಕ್ ಪ್ಯಾಕೇಟ್ ಮಾಡುವ ಬಿಜೆಪಿಗೆ ಮತದಾನ ಮಾಡಬಾರದು ಎಂದು ಸಲಹೆ ನೀಡಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಮಾತನಾಡಿ, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಜನರ ಕಲ್ಯಾಣಕ್ಕಾಗಿ 20 ಅಂಶಗಳನ್ನು ತಂದರು. ಅವರನ್ನು ಬಿಟ್ಟರೆ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರೈಸಿದ ಸಿದ್ದರಾಮ್ಮಯ್ಯ ಅವರು ಒಂದು ಕಪ್ಪು ಚುಕ್ಕಿಯೂ ಇಲ್ಲದೆ ಜನಪರವಾಗಿ ಬಿಗಿಯಾದ ಆಡಳಿತ ನಡೆಸಿ, ಹಲವು ಯೋಜನೆಗಳ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

    ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ತಿದ್ದಿದ ಸಮಾಜ ಸುಧಾರಕ ಕನಕದಾಸರ ಹೆಸರಿನಲ್ಲಿ ಭವನ ನಿರ್ಮಿಸಿರುವುದು ಸಂತಸದ ವಿಚಾರ. ಆದರೆ, ಬಿಜೆಪಿ ಸರಕಾರ ರಾಜ್ಯದಲ್ಲಿ ಜಾತಿ-ಜಾತಿಗಳ ನಡುವಿನ ಸಂಘರ್ಷ ಕೋಮು ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ. ಸರಗೂರು ತಾಲೂಕು ಕೇಂದ್ರವನ್ನಾಗಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು.

    ಇದೇ ಸಂದರ್ಭ ನಿವೇಶನ ದಾನಿಗಳಾದ ಎಂ.ಎನ್.ಅನಂತಕೃಷ್ಣಮೂರ್ತಿ, ಎಂ.ಎಸ್.ಕೃಷ್ಣಪ್ಪ, ತಿಮ್ಮೇಗೌಡ, ಪುಟ್ಟಸ್ವಾಮೇಗೌಡ ಅವರನ್ನು ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು.

    ಖ್ಯಾತ ಜಾನಪದ ಗಾಯಕ ಅಮ್ಮ ರಾಮಚಂದ್ರ ಮತ್ತು ಮರಿಸ್ವಾಮಿ ಹಂಸ ಅವರ ತಂಡದಿಂದ ಜಾನಪದ ಗಾಯನ, ಪನ್ನಗ ವಿಜಯಕುಮಾರ್ ಮತ್ತು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

    ಶಾಸಕ ಅನಿಲ್ ಚಿಕ್ಕಮಾದು, ಯತೀಂದ್ರ ಸಿದ್ದರಾಮಯ್ಯ, ಸಂಡೂರು ತುಕರಾಮ್,  ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿದರು. ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮೈಮುಲ್ ನಿರ್ದೇಶಕ ಕೆ.ಈರೇಗೌಡ, ಬಿ.ಮಟಕೆರೆ ಗ್ರಾಪಂ ಅಧ್ಯಕ್ಷೆ ರೂಪಬಾಯಿ, ಉಪಾಧ್ಯಕ್ಷ ದೇವದಾಸ್, ಜಿ.ಪಂ. ಮಾಜಿ ಅಧ್ಯಕ್ಷರಾದ ಎಂ.ಪಿ.ನಾಗರಾಜು, ಕೆ.ಮರೀಗೌಡ, ಪಿ.ರವಿ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪಕೋಟೆ, ತಾಲೂಕು ಅಧ್ಯಕ್ಷ ಎಂ.ಬಿ.ಆನಂದ್, ಎಂ.ಎನ್.ಅನಂತಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡರಾದ ಎಂ.ಎನ್.ಅಣ್ಣಯ್ಯಸ್ವಾಮಿ, ಜಿ.ಕೃಷ್ಣ, ಎಂ.ಕೆ.ಹರಿದಾಸ್, ಗುಣಪಾಲ್, ಕೆಎಸ್‍ ಆರ್‍ ಟಿಸಿ ಬಿ.ಜವರೇಗೌಡ, ಸತೀಶ್‍ಗೌಡ, ಶಂಭುಲಿಂಗನಾಯಕ, ಎಸ್.ಎಸ್.ಪ್ರಭುಸ್ವಾಮಿ, ಎಂ.ಸಿ.ದೊಡ್ಡನಾಯಕ, ಎಂ.ಎಸ್.ದೇವರಾಜು, ಸಂತೋಷ್, ಎಂ.ಕೆ.ಕೃಷ್ಣಪ್ಪ, ಗುಡಿಗೌಡ ಎಂ.ಎನ್.ಕುಮಾರ್, ದೇವರಾಜು, ಶೇಖರಪ್ಪ, ಎಂ.ಸಿ.ಬೀರೇಗೌಡ, ಶಿವಮೂರ್ತಿ, ಎಂ.ಆರ್.ಆನಂದ್, ಕರಿಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ…

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.