nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಜಾರಿಗೊಳಿಸಿದ ಯೋಜನೆ ಕಡಿತಗೊಳಿಸಿ ಬಿಜೆಪಿಯಿಂದ ಜನ ವಿರೋಧಿ ಆಡಳಿತ: ಸಿದ್ದರಾಮಯ್ಯ
    ಜಿಲ್ಲಾ ಸುದ್ದಿ April 9, 2022

    ಕಾಂಗ್ರೆಸ್ ಜಾರಿಗೊಳಿಸಿದ ಯೋಜನೆ ಕಡಿತಗೊಳಿಸಿ ಬಿಜೆಪಿಯಿಂದ ಜನ ವಿರೋಧಿ ಆಡಳಿತ: ಸಿದ್ದರಾಮಯ್ಯ

    By adminApril 9, 2022No Comments3 Mins Read
    siddaramaiha

    ಸರಗೂರು: ತಾಲೂಕಿನ ಮೊಳೆಯೂರು ಗ್ರಾಮದಲ್ಲಿ ಕುರುಬ ಸಮಾಜದಿಂದ ಶುಕ್ರವಾರ ನಡೆದ ಶ್ರೀ ಬಿಲ್ ಕುಮಾರಸ್ವಾಮಿ, ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನಕ ಭವನವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಿದರು.

    ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಆಡಳಿತರೂಢ ಬಿಜೆಪಿ ಸರಕಾರ ಮೊಟುಕುಗೊಳಿಸಿದ್ದು, ಜನ ವಿರೋಧಿ ಆಡಳಿತ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.


    Provided by

    ನಾನು ಮುಖ್ಯಮಂತ್ರಿಯಾಗಿದ್ದಾಗ 165 ಭರವಸೆಗಳನ್ನು ಈಡೇರಿಸಿದ್ದೇನೆ. ಶ್ರೀ ಸಾಮಾನ್ಯನ ಅನುಕೂಲಕ್ಕಾಗಿ ಕಾಂಗ್ರೆಸ್ ಜಾರಿಗೊಳಿಸಿದ ಇಂದಿರಾ ಕ್ಯಾಂಟಿನ್, ಪಶು ಭಾಗ್ಯ, ಶೋ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ನಿಷೇಧಿಸಿ, ಇನ್ನು ಕೆಲವು ಯೋಜನೆಗಳನ್ನು ಕಡಿತಗೊಳಿಸುವ ಮೂಲಕ ಬಿಜೆಪಿ ಜನ ವಿರೋಧಿ ಆಡಳಿತ ನೀಡುತ್ತಿದೆ. ಎಸ್‍ ಸಿ, ಎಸ್ಟಿ ಅನುದಾನ ಕಡಿತಗೊಳಿಸಿ, ಮೋಸ ಮಾಡುತ್ತಿದ್ದಾರೆ.  ರೈತರಿಗೆ ಕನಿಷ್ಠ ಬೆಂಬಲ ನೀಡುವಲ್ಲಿ ವಿಫಲವಾಗಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಮನೆ ಹಾಳು ಮಾಡಿದ್ದಾರೆ ಎಂದು ಅವರು ಟೀಕಿಸಿದರು.

    ತಾಲೂಕು ಅಭಿವೃದ್ಧಿಗೆ  ಕಡೆಗಣೆನೆ:

    ಮುಖ್ಯಮಂತ್ರಿಯಾಗಿದ್ದಾಗ ಕೊನೆಯ ಅವಧಿಯಲ್ಲಿ 53 ಹೊಸ ತಾಲೂಕು ಘೋಷಣೆ ಮಾಡಿದೆ. ಅವುಗಳಿಗೆ ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯಾಗಲೀ, ಬಿಜೆಪಿಯ ಯಡಿಯೂರಪ್ಪ ಹಾಗೂ ಬಸವರಾಜು ಬೊಮ್ಮಾಯಿಯಾಗಲೀ ತಮ್ಮ ಆಡಳಿತದ ಅವಧಿಯಲ್ಲಿ ಹೊಸ ತಾಲೂಕುಗಳಿಗೆ  ಮೂಲ ಸೌಲಭ್ಯ ಒದಗಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದು, ಅಭಿವೃದ್ಧಿ ಮಾಡುವಲ್ಲಿ ಕಣಗಣಿಸುತ್ತಿದ್ದಾರೆ ಎಂದರು.

    2023ಕ್ಕೆ ಕಾಂಗ್ರೆಸ್ ಅಧಿಕಾರ ಕ್ಕೆ ಬರಲಿದೆ. ಆಗ ನೂತನ ತಾಲೂಕುಗಳಿಗೆ ಮೂಲ ಸೌಲಭ್ಯ ಒದಗಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

     ಬಿಜೆಪಿ ಕೆಟ್ಟ ಸರಕಾರ:

    ರಾಜ್ಯದ ಇತಿಹಾಸದಲ್ಲೇ ಬಿಜೆಪಿಯಂಥ ಕೆಟ್ಟ ಸರಕಾರವನ್ನು ಕಂಡಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಅಭಿವೃದ್ಧಿಗಾಗಿ 165 ಭರವಸೆಗಳನ್ನು ಈಡೇರಿಸಿದ್ದೆ. ಆದರೆ, ಬಿಜೆಪಿ ಸರಕಾರ ಅಭಿವೃದ್ಧಿಗೆ ಹೊತ್ತು ನೀಡುತ್ತಿಲ್ಲ ಎಂದರು.

    ಬದಲಿಗೆ ಕೋಮು ಗಲಭೆ ಸೃಷ್ಟಿಸುತ್ತಿದೆ. ಸಂಪ್ರದಾಯದ ಹೆಸರಿನಲ್ಲಿ ಜಾತಿ ಹೊಡೆಯ ಕೆಲಸವಾಗಬಾರದು. ಬಿಜೆಪಿ ಎಲ್ಲವನ್ನೂ ಮೀರಿದೆ. ಹೀಗಾಗಿ ಪೀಕ್ ಪ್ಯಾಕೇಟ್ ಮಾಡುವ ಬಿಜೆಪಿಗೆ ಮತದಾನ ಮಾಡಬಾರದು ಎಂದು ಸಲಹೆ ನೀಡಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಮಾತನಾಡಿ, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಜನರ ಕಲ್ಯಾಣಕ್ಕಾಗಿ 20 ಅಂಶಗಳನ್ನು ತಂದರು. ಅವರನ್ನು ಬಿಟ್ಟರೆ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರೈಸಿದ ಸಿದ್ದರಾಮ್ಮಯ್ಯ ಅವರು ಒಂದು ಕಪ್ಪು ಚುಕ್ಕಿಯೂ ಇಲ್ಲದೆ ಜನಪರವಾಗಿ ಬಿಗಿಯಾದ ಆಡಳಿತ ನಡೆಸಿ, ಹಲವು ಯೋಜನೆಗಳ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

    ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ತಿದ್ದಿದ ಸಮಾಜ ಸುಧಾರಕ ಕನಕದಾಸರ ಹೆಸರಿನಲ್ಲಿ ಭವನ ನಿರ್ಮಿಸಿರುವುದು ಸಂತಸದ ವಿಚಾರ. ಆದರೆ, ಬಿಜೆಪಿ ಸರಕಾರ ರಾಜ್ಯದಲ್ಲಿ ಜಾತಿ-ಜಾತಿಗಳ ನಡುವಿನ ಸಂಘರ್ಷ ಕೋಮು ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ. ಸರಗೂರು ತಾಲೂಕು ಕೇಂದ್ರವನ್ನಾಗಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು.

    ಇದೇ ಸಂದರ್ಭ ನಿವೇಶನ ದಾನಿಗಳಾದ ಎಂ.ಎನ್.ಅನಂತಕೃಷ್ಣಮೂರ್ತಿ, ಎಂ.ಎಸ್.ಕೃಷ್ಣಪ್ಪ, ತಿಮ್ಮೇಗೌಡ, ಪುಟ್ಟಸ್ವಾಮೇಗೌಡ ಅವರನ್ನು ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು.

    ಖ್ಯಾತ ಜಾನಪದ ಗಾಯಕ ಅಮ್ಮ ರಾಮಚಂದ್ರ ಮತ್ತು ಮರಿಸ್ವಾಮಿ ಹಂಸ ಅವರ ತಂಡದಿಂದ ಜಾನಪದ ಗಾಯನ, ಪನ್ನಗ ವಿಜಯಕುಮಾರ್ ಮತ್ತು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

    ಶಾಸಕ ಅನಿಲ್ ಚಿಕ್ಕಮಾದು, ಯತೀಂದ್ರ ಸಿದ್ದರಾಮಯ್ಯ, ಸಂಡೂರು ತುಕರಾಮ್,  ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿದರು. ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮೈಮುಲ್ ನಿರ್ದೇಶಕ ಕೆ.ಈರೇಗೌಡ, ಬಿ.ಮಟಕೆರೆ ಗ್ರಾಪಂ ಅಧ್ಯಕ್ಷೆ ರೂಪಬಾಯಿ, ಉಪಾಧ್ಯಕ್ಷ ದೇವದಾಸ್, ಜಿ.ಪಂ. ಮಾಜಿ ಅಧ್ಯಕ್ಷರಾದ ಎಂ.ಪಿ.ನಾಗರಾಜು, ಕೆ.ಮರೀಗೌಡ, ಪಿ.ರವಿ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪಕೋಟೆ, ತಾಲೂಕು ಅಧ್ಯಕ್ಷ ಎಂ.ಬಿ.ಆನಂದ್, ಎಂ.ಎನ್.ಅನಂತಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡರಾದ ಎಂ.ಎನ್.ಅಣ್ಣಯ್ಯಸ್ವಾಮಿ, ಜಿ.ಕೃಷ್ಣ, ಎಂ.ಕೆ.ಹರಿದಾಸ್, ಗುಣಪಾಲ್, ಕೆಎಸ್‍ ಆರ್‍ ಟಿಸಿ ಬಿ.ಜವರೇಗೌಡ, ಸತೀಶ್‍ಗೌಡ, ಶಂಭುಲಿಂಗನಾಯಕ, ಎಸ್.ಎಸ್.ಪ್ರಭುಸ್ವಾಮಿ, ಎಂ.ಸಿ.ದೊಡ್ಡನಾಯಕ, ಎಂ.ಎಸ್.ದೇವರಾಜು, ಸಂತೋಷ್, ಎಂ.ಕೆ.ಕೃಷ್ಣಪ್ಪ, ಗುಡಿಗೌಡ ಎಂ.ಎನ್.ಕುಮಾರ್, ದೇವರಾಜು, ಶೇಖರಪ್ಪ, ಎಂ.ಸಿ.ಬೀರೇಗೌಡ, ಶಿವಮೂರ್ತಿ, ಎಂ.ಆರ್.ಆನಂದ್, ಕರಿಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ

    May 31, 2025

    ಬೆಳಗಾವಿಯಲ್ಲಿ ಕೊವಿಡ್ ಗೆ ಮೊದಲ ಬಲಿ!

    May 29, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.