ವಿಜಯಪುರ: ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಾಗಿದೆ. ಇದೇ ಸಂದರ್ಭದಲ್ಲಿ ಪಟ್ಟಣದ ಬಿಜೆಪಿ ಮುಖಂಡ ವೀರಭದ್ರಪ್ಪ ಬಾಗಿ ಫಲಿತಾಂಶ ವೀಕ್ಷಿಸುತ್ತಿದ್ದ ಟಿವಿಯನ್ನೇ ಆಕ್ರೋಶದಿಂದ ಒಡೆದು ಹಾಕಿದ ಘಟನೆ ನಡೆದಿದೆ.
ಬಿಜೆಪಿಯ ಕಟ್ಟಾ ಅಭಿಮಾನಿಯಾಗಿರುವ ವೀರಭದ್ರಪ್ಪ ಬಾಗಿ ಪಟ್ಟಣದ 4ನೇ ವಾರ್ಡಿನ ತಮ್ಮಮನೆಯಲ್ಲಿ ಉಪಚುನಾವಣೆಯ ಫಲಿತಾಂಶ ವೀಕ್ಷಣೆ ಮಾಡುತ್ತಿದ್ದರು. ಮೂರೂ ಕ್ಷೇತ್ರಗಳಲ್ಲಿ ಸೋಲು ಕಂಡಿರುವುದು ತಿಳಿದು, ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಹಾಗೂ ರಾಜ್ಯ ನಾಯಕರ ನಡೆಗೆ ಆಕ್ರೋಶಗೊಂಡು ಟಿವಿಯ ಎತ್ತಿ ತಂದು ಹೊರ ಬಿಸಾಡಿ ಒಡೆದು ಹಾಕಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಬಿಜೆಪಿ ನಾಯಕರಲ್ಲಿ ಹೊಂದಾಣಿಕೆ ಇಲ್ಲದ ಕಾರಣ ನಮಗೆ ಸೋಲಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರ ನಾಯಕರಲ್ಲಿ ಹೊಂದಾಣಿಕೆಯ ಕೊರತೆಯಿಂದ ಇಂತಹ ದುಃಸ್ಥಿತಿ ಬಂದಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q