nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಗೆ ಹೋಗುವವರಿಗೆ ಶಾಕ್ ಕೊಡಲು ಮಹತ್ವದ ತೀರ್ಮಾನ ಕೈಗೊಂಡ ಬಿಜೆಪಿ ನಾಯಕರು
    ರಾಜ್ಯ ಸುದ್ದಿ August 23, 2023

    ಕಾಂಗ್ರೆಸ್ ಗೆ ಹೋಗುವವರಿಗೆ ಶಾಕ್ ಕೊಡಲು ಮಹತ್ವದ ತೀರ್ಮಾನ ಕೈಗೊಂಡ ಬಿಜೆಪಿ ನಾಯಕರು

    By adminAugust 23, 2023No Comments2 Mins Read
    bengaluru

    ಬೆಂಗಳೂರು: ಒಂದು ಕಡೆ ಕಾಂಗ್ರೆಸ್ ಆಪರೇಷನ್ ಆಟ ಶುರು ಮಾಡಿದ್ರೆ, ಇತ್ತ ಬಿಜೆಪಿ ಅದನ್ನು ದೊಡ್ಡ ಮಟ್ಟದಲ್ಲಿ ತಡೆಯುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದ್ರೆ ನಿನ್ನೆ(ಆಗಸ್ಟ್ 21) ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಆದ ಚರ್ಚೆ, ನಾಯಕರ ಮನಸ್ಥಿತಿ ಬೇರೆಯದ್ದನ್ನೇ ಹೇಳುತ್ತಿದೆ.

    ಕಾಂಗ್ರೆಸ್‌ನತ್ತ ಮುಖ ಮಾಡಿರುವ ಬಾಂಬೆ ಫ್ರೆಂಡ್ಸ್‌ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ ಎಂಬ ಮನಸ್ಥಿತಿಗೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅಸಮಾಧಾನದ ಬಗ್ಗೆ ಚರ್ಚೆ ನಡೆಸಿದ್ದು, ಬಿಜೆಪಿಗೆ ವಲಸೆ ಬಂದವರು ತಿರಗಾ ಕಾಂಗ್ರೆಸ್ ಬಾಗಿಲು ತಟ್ಟಿದರೆ ಸಿಕ್ಕಾಪಟ್ಟೆ ತಲೆಕೆಡಿಸಿಕೊಳ್ಳುವುದು ಬೇಡ ಎಂಬ ಮನಸ್ಥಿತಿಗೆ ಬಿಜೆಪಿ ರಾಜ್ಯ ನಾಯಕರು ಬಂದಿದ್ದಾರೆ.


    Provided by
    Provided by

    ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದು ಬೇಡ. ‘ಪಕ್ಷ ಬಿಡುವವರ ಮನವೊಲಿಸೋಣ ಆದ್ರೆ ಅಂಗಲಾಚುವುದು ಬೇಡ. 2024ರ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿ. ಪಕ್ಷ ಸಂಘಟನೆ ಬಲಗೊಳಿಸುವ ಬಗ್ಗೆ ಮಾತ್ರ ಗಮನ ಹರಿಸಬೇಕು. ಕಾಲಕ್ಕೆ ತಕ್ಕಂತೆ ಎಲ್ಲವೂ ಆಗುತ್ತದೆ, ಈಗ ನಾವು ಎಡವಿದ್ದೇವೆ. ಶಾಸಕರ ಜೊತೆಗೆ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಬೇಕು. ನಮ್ಮದು ಕೇಡರ್ ಬೇಸ್ ಪಾರ್ಟಿ, ಕಾರ್ಯಕರ್ತರಿಗೆ ಧೈರ್ಯ ತುಂಬಬೇಕು. ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಗೊಂದಲದಿಂದ ಸಮಸ್ಯೆಯಾಗಿದೆ. ಬಿಎಲ್ಪಿ ನಾಯಕ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಶೀಘ್ರ ನಿರ್ಧರಿಸಿ. ಈ ಬಗ್ಗೆ ಬೇಕಿದ್ದರೆ ಮತ್ತೊಮ್ಮೆ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಾಯಿಸೋಣ ಅಂತಾ ಸಭೆಯಲ್ಲಿ ನಿರ್ಧರಿಸಲಾಗಿದೆ.

    ಈ ಮಧ್ಯೆ ಯಶವಂತಪುರ ಶಾಸಕ ಎಸ್.‌ಟಿ. ಸೋಮಶೇಖರ್ ಅಸಮಾಧಾನದಿಂದಾಗಿ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರಾದ ಸಿ.ಎಂ. ಮಾರೇಗೌಡ ಮತ್ತು ಧನಂಜಯ ಪಕ್ಷದಿಂದ ಉಚ್ಛಾಟನೆ ವಿಚಾರವೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಉಚ್ಛಾಟನೆ ಬಳಿಕ ನಾನು ಅವರನ್ನು ಉಚ್ಛಾಟನೆ ಮಾಡಿ ಎಂದು ಹೇಳಿಲ್ಲ ಎಂದು ಬಹಿರಂಗವಾಗಿ ಹೇಳುತ್ತಿರುವ ಸೋಮಶೇಖರ್ ನಡೆ ಬಗ್ಗೆಯೂ ಸಭೆಯಲ್ಲಿ ಪರೋಕ್ಷ ಆಕ್ಷೇಪ ವ್ಯಕ್ತವಾಗಿದೆ. ಮಾರೇಗೌಡ ಮತ್ತು ತಂಡದ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೋಮಶೇಖರ್ ಪಕ್ಷಕ್ಕೆ ಲಿಖಿತ ಪತ್ರ ನೀಡಿದ್ರು. ಉಚ್ಛಾಟನೆ ಬಳಿಕ ನಾನು ಕ್ರಮಕ್ಕೆ ಒತ್ತಾಯಿಸಿಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ ಎಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ.

    ಎಸ್‌ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಗೆ ಅಣಿಯಾಗಿರುವ ಮುನ್ನವೇ ನಿನ್ನೆ ದೊಡ್ಡ ಪ್ರಮಾಣದಲ್ಲಿ ಅವರ ಬೆಂಬಲಿಗರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಎಸ್.ಟಿ.ಸೋಮಶೇಖರ್ ಬೆಂಬಲಿಗರಾದ, ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

    ಉಚ್ಛಾಟನೆ ಬಳಿಕ ನಾನು ಉಚ್ಛಾಟನೆಗೆ ಒತ್ತಾಯಿಸಿಲ್ಲ ಎಂಬ ಸೋಮಶೇಖರ್ ಹೇಳಿಕೆ ಬಗ್ಗೆ ರಾಜ್ಯ ನಾಯಕರು ಆಕ್ಷೇಪಿಸಿದ್ದಾರೆ. ಒಂದೆಡೆ ಸೋಮಶೇಖರ್ ಆಪ್ತ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಗಳು ಕಾಂಗ್ರೆಸ್ ಸೇರಿದ್ದಾರೆ. ಇನ್ನೊಂದೆಡೆ ಪಕ್ಷ ತ್ಯಜಿಸುವುದಿಲ್ಲ ಎಂದು ಸೋಮಶೇಖರ್ ಹೇಳುತ್ತಿದ್ದರೂ ಪೂರ್ಣ ಪ್ರಮಾಣದಲ್ಲಿ ನಂಬಲು ಬಿಜೆಪಿ ಹಿಂದೇಟು ಹಾಕುತ್ತಿದೆ.

    ಅತಿಯಾದ ಮನವೊಲಿಕೆ ಬೇಡ, ಪ್ರಯತ್ನ ಅಷ್ಟೇ ಮಾಡೋಣ ಎನ್ನುವ ನಿಲುವಿಗೆ ರಾಜ್ಯ ಬಿಜೆಪಿ ನಾಯಕರು ಬಂದಿದ್ದು, ಈಗ ಸೋಮಶೇಖರ್ ಏನು ಹೇಳುತ್ತಾರೋ ಅದನ್ನು ಎಲ್ಲಾ ಕೇಳಿಸಿಕೊಳ್ಳೋಣ. ಒಂದು ವೇಳೆ ಪಕ್ಷ ತೊರೆದು ಹೋದರೆ ಪರ್ಯಾಯ ನಾಯಕತ್ವದ ರೆಡಿ ಮಾಡುವುದಕ್ಕೆ ರಾಜ್ಯ ನಾಯಕರು ಅಂತಿಮ ತೀರ್ಮಾನಕ್ಕೆ ಬಂದಿದ್ದಾರೆ. ಹೀಗಾಗಿ ಸೋಮಶೇಖರ್ ನಡೆ ಕಾದು ನೋಡುವ ಬಗ್ಗೆ ಚಿಂತಿಸಿರುವ ಬಿಜೆಪಿ ನಾಯಕರು, ಪರ್ಯಾಯ ನಾಯಕನನ್ನು ಹುಟ್ಟುಹಾಕಲು ಚಿಂತನೆ ನಡೆಸಿದ್ದಾರೆ.

    ಸದ್ಯಕ್ಕೆ ಅವರ ಮಾತನ್ನ ಕೇಳೋಣ. ಪಕ್ಷ ತೊರೆದರೆ ಮುಂದೇನು ಮಾಡಬೇಕೋ ಮಾಡೋಣ. ಯಶವಂತಪುರದಲ್ಲಿ ಪಕ್ಷದ ಕಾರ್ಯಕರ್ತರಿದ್ದಾರೆ. ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ನಾಯಕತ್ವ ನೀಡಿದರೆ ಗೆಲುವು ಕಷ್ಟವೇನಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.

    admin
    • Website

    Related Posts

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.