nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ

    January 21, 2026

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    January 21, 2026

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026
    Facebook Twitter Instagram
    ಟ್ರೆಂಡಿಂಗ್
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    • ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    • ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?
    • ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ
    • 8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!
    • ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋತಿದ್ದು ಈ 3 ಕಾರಣಗಳಿಂದ!
    ರಾಜ್ಯ ಸುದ್ದಿ June 6, 2024

    ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋತಿದ್ದು ಈ 3 ಕಾರಣಗಳಿಂದ!

    By adminJune 6, 2024No Comments2 Mins Read
    u p

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಹಂತಕ್ಕೆ ಮಕಾಡೆ ಮಲಗಿದೆ. ಬಿಜೆಪಿ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಉತ್ತರ ಪ್ರದೇಶ ಎಂದೇ ಹೇಳಬಹುದು. ಸುಮಾರು 80 ರಷ್ಟು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಈ ಹಿಂದೆ ಎರಡು ಬಾರಿ ಬಿಜೆಪಿ 70ಕ್ಕೂ ಅಧಿಕ ಸ್ಥಾನ ಗೆದ್ದು ಜಯಭೇರಿ ಬಾರಿಸಿತ್ತು. ಆದರೆ ಈ ಸಲ ಕೇವಲ 30ರ ಆಸುಪಾಸಿನಲ್ಲಿ ತೃಪ್ತಿಪಟ್ಟುಕೊಂಡಿದೆ.

    ಉತ್ತರ ಪ್ರದೇಶ ದೇಶದಲ್ಲಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯ. ಈ ರಾಜ್ಯದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಅದು ದೇಶದ ಅಧಿಕಾರ ಹಿಡಿಯುತ್ತದೆ ಎಂಬ ಮಾತಿದೆ. ಅಖಿಲೇಶ್ ಯಾದವ್ ಅವರ ಸಾಮ್ರಾಜ್ಯವಾಗಿದ್ದು ಯುಪಿ ಇತ್ತೀಚೆಗೆ 10 ವರ್ಷಗಳ ಬಳಿಕ ಬಿಜೆಪಿ ಭದ್ರಕೋಟೆ ಆಗಿ ಮಾರ್ಪಟ್ಟತ್ತು.


    Provided by
    Provided by

    2014ರಲ್ಲಿ ಯಾರೂ ಊಹಿಸದ ರೀತಿಯಲ್ಲಿ 80ರಲ್ಲಿ 71 ಸ್ಥಾನಗಳನ್ನು ಗೆದ್ದು ಬೀಗಿತು. 2019ರಲ್ಲಿ ಅಷ್ಟು ದೊಡ್ಡ ಯಶಸ್ಸು ಸಿಗದಿದ್ದರೂ 62 ಸ್ಥಾನಗಳನ್ನು ಗೆದ್ದಿತ್ತು. ಕಳಕೊಂಡದ್ದು ಕೇವಲ 9 ಸ್ಥಾನಗಳನ್ನಾಗಿದ್ದರಿಂದ ಯಾರೂ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈ ಬಾರಿ ಮಾತ್ರ 33ಕ್ಕೆ ಇಳಿದಿದೆ. ಇಂಡಿಯಾ ಒಕ್ಕೂಟ ದೊಡ್ಡ ಮಟ್ಟದಲ್ಲಿ ಖೆಡ್ಡಾ ತೋಡಿದೆ. ಅದೂ ಕೂಡ ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಂತಹ ಸಾಧನೆ ಇಲ್ಲೆ ಆಗಿದ್ದರು ಬಿಜೆಪಿ ಮುಗ್ಗರಿಸಿದೆ. ಹಾಗಿದ್ರೆ ಬಿಜೆಪಿ ಮುಗ್ಗರಿಸಲು ಏನು ಕಾರಣ? ತಿಳಿಯೋಣ ಬನ್ನಿ

    ಸಂಸದರ ಬಗ್ಗೆ ಅಸಮಾಧಾನ:

    ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೆ ಈ ಬಾರಿ ಮುಖ್ಯವಾಗಿ ಜನರ ಅಸಮಾಧಾನ ಇದ್ದುದು ತಾವು ಆಯ್ಕೆ ಮಾಡಿದ್ದ ಸಂಸದರ ಕಾರ್ಯವೈಖರಿ ಬಗ್ಗೆ. ಈ ಕಾರಣವನ್ನು ಅರಿತಿದ್ದ ಬಿಜೆಪಿ ಶೇ 30ರಷ್ಟು ಹಾಲಿ ಸಂಸದರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿತ್ತು. ಆದರೆ ಕೊನೇ ಕ್ಷಣಕ್ಕೆ ಕೇವಲ 14 ಹಾಲಿ ಸಂಸದರಿಗಷ್ಟೆ ಟಿಕೆಟ್ ತಪ್ಪಿಸಲಾಗಿತ್ತು. ಈ ಕಾರಣಕ್ಕೆ ಅಸಮಾಧಾನಗೊಂಡ ರೈತರು ಬಿಜೆಪಿ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದರು. ಈ ವಿರೋಧದ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಬಿಜೆಪಿ ಎಡವಿತು. ರಾಮ ಮಂದಿರ ನಿರ್ಮಾಣ ನಮ್ಮ ಕೈ ಹಿಡಿಯುತ್ತೆ ಎಂಬ ಭ್ರಭೆಯಲ್ಲಿ ಅದು ತೇಲಾಡಿತು.

    ಅಲ್ಪಸಂಖ್ಯಾತರ ಮತ:

    ಅಲ್ಪಸಂಖ್ಯಾತರ ಮತ ಬಿಜೆಪಿಗೆ ಬೀಳುವುದು ಕಡಿಮೆಯೇ. ಆದರೆ ಈವರೆಗೆ ವಿಪಕ್ಷಗಳಲ್ಲಿ ಹಂಚಿ ಹೋಗುತ್ತಿದ್ದುದರಿಂದ ಬಿಜೆಪಿಗೆ ಲಾಭವಾಗುತಿತ್ತು. ಆದರೆ ಈ ಬಾರಿ ಮಾತ್ರ ಅಲ್ಪಸಂಖ್ಯಾತರ ಮತಗಳೆಲ್ಲಾ ಸಂಘಟಿತವಾಗಿ ಇಂಡಿ ಒಕ್ಕೂಟಕ್ಕೆ ಬಿದ್ದಿದ್ದರಿಂದ ಬಿಜೆಪಿಗೆ ಭಾರೀ ನಷ್ಟವಾಯಿತು. ಜೊತೆಗೆ ವಿಪಕ್ಷಗಳು ಇಲ್ಲಿ ಒಬಿಸಿ ಮಂತ್ರವನ್ನು ಪಠಿಸಿತು. ಇದು ಗೊತ್ತಿದ್ದುದರಿಂದಲೇ ಬಿಜೆಪಿ ನಿರಂತರವಾಗಿ ಹಿಂದೂ ಜಪ ಮಾಡಿತ್ತು. ರಾಮಮಂದಿರ, ಕಾಶಿ ವಿಶ್ವನಾಥ ಮಂದಿರ, ಮಧುರಾ ಶ್ರೀಕೃಷ್ಣ ಜನ್ಮಭೂಮಿ ವಿಚಾರಗಳನ್ನು ಪದೇ ಪದೇ ಉಲ್ಲೇಖಿಸುತ್ತಿತ್ತು ಆದರೆ ಅದರಿಂದ ದೊಡ್ಡ ಮಟ್ಟಿನ ಪ್ರಯೋಜನವಾಗಲಿಲ್ಲ.

    ಸಂವಿಧಾನ ಬದಲಾವಣೆ, ಮೀಸಲಾತಿ ವಿಚಾರ:

    ಒಂದು ವೇಳೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಸಂವಿಧಾನ ಬದಲಾಯಿಸುತ್ತದೆ ಮತ್ತು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರೆ ಹಿಂದುಳಿದ ವರ್ಗ (OBC) ಗಳಿಗೆ ಇರುವ ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ವಿಪಕ್ಷಗಳು ಪ್ರಚಾರದ ವೇಳೆ ಒತ್ತಿ ಹೇಳಿದ್ದು ಬಿಜೆಪಿಗೆ ದೊಡ್ಡ ಮಟ್ಟಿಗೆ ಮುಳುವಾಯಿತು. ಬಿಜೆಪಿ ಯಾರ ಮೀಸಲಾತಿಯನ್ನೂ ಕಿತ್ತು ಹಾಕುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಪದೇ ಪದೇ ಹೇಳಿದರೂ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಜನಸಾಮಾನ್ಯರ ಮುಂದೆ ಪಕ್ಷವನ್ನು ಸಮರ್ಥಿಸಿಕೊಳ್ಳಲು ವಿಫಲರಾದರು. ಕೊನೇ ಹಂತದವರೆಗೂ ಈ ಆರೋಪವನ್ನು ಬಿಜೆಪಿ ಸಮರ್ಥವಾಗಿ ಎದುರಿಸಲು ಸಾಧ್ಯವಾಗಲೇ ಇಲ್ಲ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ

    January 21, 2026

    ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮತ್ತು ತರಬೇತುದಾರರಾಗಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of…

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    January 21, 2026

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.