nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಾಮಯ್ಯ ಭಾಷಣದ ವೇಳೆ ಧಿಕ್ಕಾರ ಕೂಗಲು 1 ಲಕ್ಷ ರೂ. ರೇಟ್ ಫಿಕ್ಸ್  ಮಾಡಿದ ಬಿಜೆಪಿ ಶಾಸಕ! | ಆಡಿಯೋ ವೈರಲ್
    ತುಮಕೂರು December 1, 2024

    ಸಿದ್ದರಾಮಯ್ಯ ಭಾಷಣದ ವೇಳೆ ಧಿಕ್ಕಾರ ಕೂಗಲು 1 ಲಕ್ಷ ರೂ. ರೇಟ್ ಫಿಕ್ಸ್  ಮಾಡಿದ ಬಿಜೆಪಿ ಶಾಸಕ! | ಆಡಿಯೋ ವೈರಲ್

    By adminDecember 1, 2024No Comments2 Mins Read
    suresh gowda

    ತುಮಕೂರು: ತುಮಕೂರಿನಲ್ಲಿ ಡಿಸೆಂಬರ್ 2ರಂದು ನಡೆಯಲಿರುವ  ಮುಖ್ಯಮಂತ್ರಿ ಕಾರ್ಯಕ್ರಮದ ಸಮಾವೇಶದಲ್ಲಿ ‘ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ರೆ 1ಲಕ್ಷ ಬಹುಮಾನ ಕೊಡ್ತೀನಿ.’ ಅಲ್ಲದೆ ಒಟ್ಟು 10 ಲಕ್ಷ ರೂ.ಗಳನ್ನು ಇದಕ್ಕಾಗಿ ತೆಗೆದಿರಿಸಿದ್ದೇನೆ ಎಂದು ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಆಡಿಯೋ ಬಾರಿ ವೈರಲ್ ಆಗಿದ್ದು ಇದಕ್ಕೆ ಮಾಜಿ ಶಾಸಕ ಗೌರಿಶಂಕರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸುರೇಶ ಗೌಡ ಬಹುಮಾನ ಘೋಷಣೆ ಮಾಡಿದ್ದಾರೆ ಎಂದು ಸುರೇಶ್ ಗೌಡ ಮಾತನಾಡಿದ ಆಡಿಯೋವನ್ನು  ಮಾಜಿ ಶಾಸಕ ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ.


    Provided by

    ಅನುದಾನ ತಾರತಮ್ಯ ವಿರೋಧಿಸಿ ಸಿಎಂ ವಿರುದ್ಧ ಬಿಜೆಪಿ ಜೆಡಿಎಸ್ ಶಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು.

    ಸಿಎಂ ಸಿದ್ದರಾಮಯ್ಯ ಸಮಾರಂಭಕ್ಕೆ ಬಿಜೆಪಿ ಧಿಕ್ಕಾರ ಕೂಗಿ ತಡೆಯೊಡ್ಡಲು ಪ್ಲಾನ್ ಮಾಡಿದೆ. ಈ ನಡುವೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಮಾತಾನಾಡಿರುವ ಆಡಿಯೋವನ್ನು ಮಾಜಿ ಶಾಸಕ ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ.

    ಪ್ರತಿಭಟನೆ ಮಾಡಿ ಅದು ಎಲ್ಲರ ಹಕ್ಕು. ಆದ್ರೆ ಪ್ರತಿಭಟನೆ ಮಾಡಲು ಹಣ ನೀಡೋದು ತಪ್ಪು. ಎಷ್ಟು ಲಕ್ಷ ಬೇಕಾದರೂ ಕೊಡ್ತಿವಿ ಅಂದಿದ್ದಾರೆ ಎಂದು ಆಡಿಯೋ ಪ್ಲೆ ಮಾಡಿ ಸುರೇಶ್ ಗೌಡರ ವಿರುದ್ಧ ಆರೋಪ ಮಾಡಿದರು.

    ಸಿಎಂ ಬಂದಾಗ ಪ್ರೋವೋಕ್ ಮಾಡಿ ಎತ್ತಿಕಟ್ಟುವ ಯತ್ನ ಮಾಡ್ತಿದಿರಾ? ಹೋರಾಟದ ಮೂಲಕ ಹಕ್ಕುಗಳನ್ನ ಪಡೆಯಬೇಕು ಎಂದರು.

    ಆಡಿಯೋ ದಲ್ಲಿ ಸುರೇಶ್ ಗೌಡ ಮಾತನಾಡಿರೋ,

    2 ನೇ ತಾರಿಕು ಪಂಚಾಯತಿಗೆ ಬಸ್  ಕಳಿಸುತ್ತೇನೆ ಎಲ್ಲರೂ ಹೋರಾಟ ಮಾಡಬೇಕು

    ಗ್ರಾಪಂ ಅಧ್ಯಕ್ಷರು ಕಪ್ಪು ಬಾವುಟ ಹಾರಿಸಬೇಕು

    ಭಾಷಣ ಮಾಡುವಾಗ ಸಿದ್ದರಾಮಯ್ಯ ಗೆ ಧಿಕ್ಕಾರ ಕೂಗಿ

    ಧಿಕ್ಕಾರ ಕೂಗಿದವರಿಗೆ ಒಂದು ಲಕ್ಷ ಬಹುಮಾನ‌ ಘೋಷಣೆ

    ಎಲ್ಲಾ‌ ಮೀಡಿಯಾ ಆಗ ಡೈವರ್ಷನ್ ಆಗುತ್ತೆ.

    ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿ

    ನಮ್ಮ ಕಾರ್ಯಕರ್ತರು ಘೋಷಣೆ ಕೂಗಬೇಕು

    ನಮ್ಮ ಕಾರ್ಯಕರ್ತರು ಅದನ್ನ ಗಮನಿಸಿ ಎಷ್ಟು ಜನರು ಕೂಗ್ತಾರೋ ಅವರಿಗೆ ಒಂದು ಲಕ್ಷ, ಐವತ್ತು ಸಾವಿರ ಬಹುಮಾನ ಘೋಷಣೆ ಎಂದಿದ್ದಾರೆ.

    ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ವಿರೋಧ ವ್ಯಕ್ತಪಡಿಸಿ.

    ಯಾರು ಕೂಗ್ತಾರೋ ಅವರಿಗೆ ಒಂದು ಲಕ್ಷ, 50 ಸಾವಿರ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

    ಸುರೇಶ್ ಗೌಡ ಆಡಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗೌರಿ ಶಂಕರ್, ಆರ್ ಎಸ್ ಎಸ್ ಇದೇನಾ ಹೇಳಿಕೊಟ್ಟಿರೋದು.ಇದು ಎಫ್ ಐ ಆರ್ ಆಗಿ ತನಿಖೆ ಆಗಬೇಕು. ತುಮಕೂರು ಜಿಲ್ಲಾ ಎಸ್ ಪಿ ಗೆ ದೂರು ನೀಡಲು   ಜಿಲ್ಲಾ ಕಾಂಗ್ರೆಸ್ ಘಟಕ ಮುಂದಾಗಿದೆ ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.