ಕೊರಟಗೆರೆ: ತಾಲ್ಲೂಕು ಕಚೇರಿ ಹತ್ತಿರದ ಎಸ್ ಬಿಐ ಬ್ಯಾಂಕ್ ಪಕ್ಕದಲ್ಲಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅನಿಲ್ ಕುಮಾರ್ ನಿರ್ಮಿಸಿರುವ ನೂತನ ಕಟ್ಟಡವನ್ನು ಸಂಸದ ಜಿ.ಎಸ್ ಬಸವರಾಜು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಕ್ಷೇತ್ರ ಅಭಿವೃದ್ಧಿಗೆ ಸಂಬಂಧಪಟ್ಟಂತಹ ವಿಷಯವನ್ನು ಚರ್ಚಿಸಲು ಸೂಕ್ತ ಕಟ್ಟಡವಿರಲಿಲ್ಲ, ನಿಜಕ್ಕೂ ಇಂದು ಸುದಿನ ಎಂದೇ ಹೇಳಬಹುದ. ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿ ಅನಿಲ್ ಕುಮಾರ್ ಮತ್ತು ಕಾರ್ಯಕರ್ತರು ಸೇರಿ ನೂತನ ಕಟ್ಟದ ನಿರ್ಮಿಸಿರುವುದು ನಿಜಕ್ಕೂ ಸಂತಸದ ವಿಷಯ ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಅನಿಲ್ಕುಮಾರ್ ಮಾತನಾಡಿ, ಕೊರಟಗೆರೆ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಸರ್ಕಾರದ ಪ್ರತಿಯೊಂದು ಸೌಲಭ್ಯವು ಜನರಿಗೆ ನೇರವಾಗಿ ಸಿಗುವಂತೆ ಮಾಡುವ ದೃಷ್ಟಿಯಿಂದ ಪಕ್ಷದ ಕಾರ್ಯಕರ್ತರೊಂದಿಗೆ ನೂತನ ಕಟ್ಟಡವನ್ನ ನಿರ್ಮಿಸಿದೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ಪಕ್ಷದ ತಾಲ್ಲೂಕು ಅಧ್ಯಕ್ಷ ಪವನ್ ಕುಮಾರ್, ವೆಂಕಟಾಚಲಯ್ಯ ಸಿ.ಎಸ್.ಹನುಮಂತರಾಜು ದಾಡಿ, ವೆಂಕಟೇಶ್ ಬಿ.ಕೆ.ಗುರುದತ್ ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ. ಎಂ. ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz