nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ
    ಕೊರಟಗೆರೆ April 6, 2025

    ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ

    By adminApril 6, 2025No Comments2 Mins Read
    bjp

    Provided by
    Provided by

    ಕೊರಟಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಸಂವಿಧಾನ ವಿರೋಧಿ ನಿಲುವು ಮತ್ತು ಓಲೈಕೆ ರಾಜಕಾರ್ಯದ ವಿರುದ್ಧ ಕೊರಟಗೆರೆ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

    ಪಟ್ಟಣದ ಎಸ್‌ ಎಸ್‌ ಆರ್ ವೃತ್ತದಿಂದ ಆರಂಭವಾಗಿ ತಾಲೂಕು ಕಚೇರಿ ವರೆಗೆ ನಡೆದ ಜಾಥಾ, ಘೋಷಣೆಗಳ ನಡುವೆ ಸಾಗಿದ್ದು, ನಂತರ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.

    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡುತ್ತಾ, “ರಾಜ್ಯ ಸರ್ಕಾರ ದಲಿತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಡಿಮೆ ಮಾಡುವ ಮೂಲಕ, ಓಲೈಕೆ ರಾಜಕಾರಣ ನಡೆಸುತ್ತಿದೆ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಮೌನ ವಹಿಸಿರುವುದು ದುರಂತ, ಗೃಹ ಸಚಿವರು ಎಲ್ಲಿದ್ದಾರೆ ಎಂದು ಹುಡುಕುವ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರ ಹೆಸರುಗಳಿರುವ ಡೆತ್ ನೋಟ್ ಕೂಡ ಬೆಳಕಿಗೆ ಬಂದಿದೆ, ಆದರೆ ಯಾವುದೇ ಎಫ್‌ ಐಆರ್ ದಾಖಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿ ಮುಖಂಡ ಬಿ.ಹೆಚ್.ಅನಿಲ್ ಕುಮಾರ್ ಮಾತನಾಡಿ, “ಟಿ‌ಎಸ್‌ ಪಿ, ಎಸ್‌ ಪಿ‌ಪಿ ಅನುದಾನಗಳನ್ನು ಬಿಟ್ಟು,  ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಹಣ ಬಳಕೆ ಮಾಡುತ್ತಿದೆ. ಹಾಲು, ಹಾಲ್ಕೋಹಾಲ್, ಬಾಂಡ್ ಪೇಪರ್‌ಗಳಿಂದ ಬಡರಿಗೆ ಬೆಲೆ ಏರಿಕೆಯ ಭಾಗ್ಯ ನೀಡಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

    ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಕೆ.ಎಲ್.ದರ್ಶನ್, “ಈ ಬಜೆಟ್‌ ನಲ್ಲಿ ದಲಿತ ಅಭಿವೃದ್ಧಿ ನಿಗಮಗಳಿಗೆ ಯಾವುದೇ ಅನುದಾನ ನೀಡದೆ, ಅಲ್ಪಸಂಖ್ಯಾತರಿಗೆ ಹೆಚ್ಚು ಮೀಸಲಿಟ್ಟಿರುವುದು ನ್ಯಾಯವಲ್ಲ. ರಾಜ್ಯಪಾಲರು ಸರ್ಕಾರದ ದುರಾಡಳಿತಕ್ಕೆ ತಡೆ ಹಾಕಬೇಕು” ಎಂದು ಮನವಿ ಮಾಡಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅರುಣ್, ಕುಮಾರ್,  ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ರಂಗರಾಜು,ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ  ರಾಜೇಂದ್ರ,ದಯಾನಂದ್, ಶಿವಕುಮಾರ್,ಚೇತನ್, ಯತೀಶ್, ರೈತ ಮೋರ್ಚಾ ಅಧ್ಯಕ್ಷ ನಾಗರಾಜು, ಪ.ಪಂ ಸದಸ್ಯ ಪ್ರದೀಪ್ ಕುಮಾರ್,ಮುಖಂಡರಾದ ಮೋಹನ್,ಶಿವಕುಮಾರಸ್ವಾಮಿ, ಆನಂದ್, ಗೋಪಿನಾಥ್, ನಂಜುಂಡಪ್ಪ,ಸಿದ್ದಲಿಂಗಪ್ಪ,ದಾಡಿ ವೆಂಕಟೇಶ್, ಸಿದ್ದರಾಜು, ಮಹೇಶ್, ರಘು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    June 19, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.