nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆಯಾಗಿದೆ | ಶಾಸಕ ಅನಿಲ್ ಚಿಕ್ಕಮಾದು ಆರೋಪ
    ಸ್ಪೆಷಲ್ ನ್ಯೂಸ್ December 29, 2021

    ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆಯಾಗಿದೆ | ಶಾಸಕ ಅನಿಲ್ ಚಿಕ್ಕಮಾದು ಆರೋಪ

    By adminDecember 29, 2021No Comments2 Mins Read
    anil chikkamadu

    ಸರಗೂರು: ನಾನು ಶಾಸಕನಾಗಿ ಆಯ್ಕೆಯಾದಗಿನಿಂದಲೂ ಕಾಡಂಚಿನ ಭಾಗದ ಗ್ರಾಮಗಳಿಗೆ ಹೆಚ್ಚಿನ ಅನುದಾನಗಳನ್ನು ತಂದು ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಎಂ.ಸಿ.ತೊಳಲು ಗ್ರಾಮದ ಸಮೀಪ ನುಗು ಏತನೀರಾವರಿ ಯೋಜನೆ ಮೂಲಕ ಗುಡಕಟ್ಟೆ, ಬಾಲನಕಟ್ಟೆ, ಹತ್ತಿಕೆರೆಗಳಿಗೆ ನೀರು ತುಂಬಿಸುವ ಮತ್ತು ಗಿರಿಜನ ಹಾಗೂ ಸ್ಥಳೀಯರ ಜಮೀನುಗಳಿಗೆ ನೀರು ಒದಗಿಸುವ ಸುಮಾರು 9 ಕೋಟಿ ರೂ ಅನುಧಾನದ ಏತನೀರಾವರಿ ಯೋಜನೆ ಮತ್ತು ಮೊಳೆಯೂರು ಗ್ರಾಮದ ಸುಮಾರು 65 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.


    Provided by
    Provided by

    ನನ್ನ ಅವಧಿಯಲ್ಲಿ ಮೂರು ವರ್ಷ ಮುಗಿದ ಬಳಿಕ ಮೊದಲ ಬಾರಿ ಶಾಶ್ವತವಾಗಿ ಉಳಿಯುವ ಒಂದು ಏತ ನೀರಾವರಿ ಯೋಜನೆಗೆ ಚಾಲನೆ ನೀಡಿರುವುದು ಸಂತಸದ ವಿಚಾರವಾಗಿದೆ.  ಸಮಿಶ್ರ ಸರ್ಕಾರವಿದ್ದಾಗ ಸತತ ಪ್ರಯತ್ನ ಮಾಡಿ ಅನುದಾನಗಳನ್ನು ಹೆಚ್ಚಾಗಿ ತರುತ್ತಿದ್ದೆ ಆದರೆ ಈಗ ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆ ಹೆಚ್ಚಾಗಿದೆ. 200 ಕೋಟಿ ಅನುದಾನವನ್ನು ತಂದು ಹೆಚ್ಚಿನ ಅಭಿವೃದ್ಧಿ ಮಾಡಬೇಕಾಗಿತ್ತು ಆದರೆ ಈಗಿನ ಸರ್ಕಾರದಲ್ಲಿ 1 ಕೋಟಿ ತರುವುದು ಸಹ ಕಷ್ಟವಾಗಿದೆ ಎಂದು ಅವರು ಹೇಳಿದರು.

    ಕ್ಷೇತ್ರಕ್ಕೆ ಸಾಕಷ್ಟು ಮನೆಗಳು ಬೇಕು ಎಂದು ಸಹ ಮನವಿ ಮಾಡಿದರು ಮನೆಗಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿವೆ ಇದರಿಂದ ಮನೆಗಳ ಹಂಚಿಕೆ ಕಡಿಮೆಯಾಗುತ್ತಿದೆ. ಅಲ್ಲದೇ,  ನಮ್ಮ ಭಾಗದಲ್ಲಿ ಪ್ರಮುಖ 3 ಜಲಾಶಯಗಳಿದ್ದು,  24-25ಟಿಎಂಸಿ ನೀರು ನಮ್ಮಲ್ಲಿದೇ ಆದರೆ ನಮ್ಮ ಕ್ಷೇತ್ರ ಬಳಕೆಗೆ ಕೇವಲ 2-3 ಟಿಎಂಸಿ ಬಳಕೆಯಾಗುತಿದೆ ಉಳಿಕೆ ನೀರು ಮೈಸೂರು ಬೆಂಗಳೂರು ಸೇರಿದಂತೆ ಬೇರೆ ಭಾಗಕ್ಕೆ ಹೋಗುತಿದೆ. ಆದ್ದರಿಂದ ಹೆಚ್ಚಿನ ಏತನೀರಾವರಿ ಯೋಜನೆಗಳು ಜಾರಿಯಾದರೆ ಹೆಚ್ಚಿನ ನೀರನ್ನು ನಮ್ಮ ಭಾಗಕ್ಕೆ ಬಳಕೆ ಮಾಡಿಕೊಳ್ಳಬಹುದು ಎಂದರು.

    ಇದೇ ಸಂದರ್ಭದಲ್ಲಿ ತಾಲ್ಲೂಕಿನ ಯಶವಂತಪುರ ಗ್ರಾಮದ ವರೆಗೆ ಆಗಿರುವ ಏತನೀರಾವರಿ ಯೋಜನೆಯನ್ನು ಮುಂದುವರೆಸಿ ಹಾದನೂರು ಗ್ರಾಮಕ್ಕೂ ನೀಡಿ ಆ ಭಾಗದ ರೈತರಿಗೆ ಅನುಕೂಲ ಮಾಡಬೇಕು ಎಂದು ಹಾದನೂರು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

    ಸ್ಥಳದಲ್ಲಿ ಎಂ.ಸಿ.ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಕಾರ್ಯದರ್ಶಿ ಚಲುವರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನರಸೀಪುರ ರವಿ, ಟಿಪಿಎಂಸಿ ಅಧ್ಯಕ್ಷ ಅಣ್ಣಯ್ಯ ಸ್ವಾಮಿ, ತಾಲ್ಲೂಕು ಕಾರ್ಮಿಕ ಸಂಘದ ಅಧ್ಯಕ್ಷ ಕುಮಾರ್, ಕುರುಬ ಸಮಾಜದ ಅಧ್ಯಕ್ಷ ಆನಂದ್, ಮುಖಂಡರಾದ ದೇವದಾಸ್, ರೂಪಾಬಾಯಿ ಮಲ್ಲೇಶ್ ನಾಯಕ, ಗುಣಪಾಲ್, ಶಿವಪ್ಪ, ದೇವರಾಜು, ಪುಟ್ಟಸ್ವಾಮಿ, ಹೇಮಾಜಿನಾಯಕ, ಗ್ರಾಮ ಪಂಚಾಯಿತಿ ಸದಸ್ಯರಾದ ಚಿಕ್ಕಕ್ಯಾತ, ಪ್ರಕಾಶ್, ಕುಮಾರ್, ಬೆಟ್ಟಸ್ವಾಮಿ, ಅಜಿತ್ ಕುಮಾರ್, ರತ್ನಮ್ಮ ರಾಜೇಶ್, ಶಿವರಾಜ್ ಅರಸ್, ಭಾಗ್ಯ ಕೆಂಪಸಿದ್ದ, ಪಿಡಿಒಗಳಾದ  ಶಿಲ್ಪ, ಅಂಜದ್ ಪಾಷ, ಇಂಜಿನಿಯರ್ ಗಳಾದ ಸಿ.ಎಸ್.ಯೋಗೇಶ್,ಸೋಮಣ್ಣ, ಪ್ರಥಮ ದರ್ಜೆ ಗುತ್ತಿಗೆದಾರ ಬಸವರಾಜು ಮುಂತಾದವರು ಹಾಜರಿದ್ದರು.

    ವರದಿ: ಚಂದ್ರಹಾದನೂರು

    admin
    • Website

    Related Posts

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.