ಬೆಂಗಳೂರು: ಯುಗಾದಿ ಸಿಹಿ-ಕಹಿಗಳ ಹಬ್ಬ, ಆದರೆ ಬಿಜೆಪಿ ಸರ್ಕಾರ ಜನರಿಗೆ ಬರೀ ಕಹಿಯನ್ನೇ ನೀಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ಕೇಂದ್ರ ರಸಗೊಬ್ಬರ ಬೆಲೆಯನ್ನು ಎದ್ವಾತದ್ವಾ ಏರಿಕೆ ಮಾಡಿದೆ. ಬಿಜೆಪಿಯವರು ವೈಫಲ್ಯಗಳನ್ನು ಮುಚ್ಚಿ ಹಾಕಲು ಹಿಜಾಬ್, ಕಾಶ್ಮೀರಿ ಫೈಲ್ಸ್, ಹಲಾಲ್, ಮುಸ್ಲಿಂ ವರ್ತಕರಿಗೆ ವ್ಯಾಪಾರ ನಿರ್ಬಂಧದಂತಹ ವಿಷಯಗಳನ್ನು ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದರು.
ನಮ್ಮಲ್ಲೂ ಹಬ್ಬಗಳಲ್ಲಿ ಕುರಿ ಕಡಿದಾಗ ರಕ್ತ ಹೊರ ಹೋಗಲು ಬಿಡಲ್ವ? ಹಲಾಲ್ ಸಾವಿರಾರು ವರ್ಷಗಳಿಂದ ನಡೆದು ಬಂದ ಪದ್ಧತಿ, ಅವರ ಪದ್ಧತಿ ಅವರು ಅನುಸರಿಸಲಿ, ನಮ್ಮ ಪದ್ಧತಿ ನಾವು ಅನುಸರಿಸೋಣ. ಮನುಷ್ಯನ ಬದುಕಿಗೆ, ಜೀವನ ನಿರ್ವಹಣೆಗೆ ಸಂಬಂಧವಿಲ್ಲದ ವಿಷಯಗಳನ್ನು ಎತ್ತಿ ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಇದರಿಂದ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತದೆ. ಇದನ್ನು ಸದನದಲ್ಲೂ ಪ್ರಸ್ತಾಪ ಮಾಡಿದ್ದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy