ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯದ ಉದ್ಘಾಟನೆಗೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.
ಕರ್ನಾಟಕ ವಿಧಾನ ಪರಿಷತ್ತಿನ ಹಿರಿಯ ಜನತಾದಳ (ಜಾತ್ಯತೀತ) ನಾಯಕ ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾದರು. ಮುಂಬರುವ ಚುನಾವಣೆಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಎಲ್ಸಿ ಟಿಕೆಟ್ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಇದೀಗ ಪರಿಷತ್ ಟಿಕೆಟ್ ಆಕಾಂಕ್ಷಿ ಮೋಹನ್ ಲಿಂಬಿಕಾಯಿ ಅವರ ವಿರೋಧದ ನಡುವೆಯೂ ಹೊರಟ್ಟಿಗೆ ಬಿಜೆಪಿ ಟಿಕೆಟ್ ನೀಡುವುದನ್ನು ಖಚಿತಗೊಳಿಸಲಾಗಿದೆ.
ಈ ವರ್ಷ ಜೂನ್ ಅಥವಾ ಜುಲೈನಲ್ಲಿ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. 1980 ರಿಂದ ಸತತ ಏಳು ಬಾರಿ ಎಂಎಲ್ಸಿಯಾಗಿ ಆಯ್ಕೆಯಾದ 72 ವರ್ಷದ ಹೊರಟ್ಟಿ, ಜೆಡಿಎಸ್ನ ಪ್ರಮುಖ ಲಿಂಗಾಯತ ಅಭ್ಯರ್ಥಿಯಾಗಿದ್ದರು. ಈ ಹಿಂದೆ ರಾಜ್ಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy