ಬೆಂಗಳೂರು: ವಕ್ಫ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ವಕ್ಫ್ ಕಾಯ್ದೆ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1994ರಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಜಮೀನು, ಮಠಮಾನ್ಯ ಮತ್ತು ದೇವಸ್ಥಾನಗಳಿಗೆ ಸೇರಿದ ಜಮೀನುಗಳನ್ನು ಅಪಾಯಕ್ಕೆ ಸಿಲುಕಿಸಲಾಗಿದೆ ಎಂದು ಆರೋಪಿಸಿದರು.
ವಕ್ಫ್ ಬೋರ್ಡ್ ಯಾವುದೇ ಜಮೀನನ್ನು ತನಗೆ ಸೇರಿದ್ದು ಅಂತ ಹೇಳಿದರೆ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಬೇರೆ ಜನ ಸಿವಿಲ್ ಕೋರ್ಟ್ಗೆ ಹೋಗಲಾಗದು, ಎಲ್ಲ ಮುಸ್ಲಿಮರೇ ಇರುವ ವಕ್ಫ್ ಟ್ರಿಬ್ಯೂನಲ್ ಮುಂದೆ ಗೋಗರೆಯಬೇಕು, ಹಾಗಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಬಿಜೆಪಿಯ ಹೋರಾಟ ನಡೆಯಲಿದೆ ಎಂದು ಹೇಳಿದರು.
ಅಷ್ಟ ಮಠದ ಜಾಗವನ್ನೂ ವಕ್ಫ್ ಬೋರ್ಡಿಗೆ ಸೇರಿದ್ದು ಎನ್ನುತ್ತಾರೆ. ಆಳಂದ ತಾಲ್ಲೂಕಿನಲ್ಲಿ ಸಿದ್ದರಾಮಯ್ಯನವರ ಕುಲದೇವರಾದ ಬೀರಲಿಂಗೇಶ್ವರರ ಗುಡಿ, ಸಾವಿರಾರು ಎಕರೆ ರೈತರ ಜಮೀನು, ಹಿಂದೂಗಳ ಸ್ಮಶಾನವನ್ನೂ ವಕ್ಫ್ಗೆ ಸೇರಿದ್ದು ಎನ್ನುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296