nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026
    Facebook Twitter Instagram
    ಟ್ರೆಂಡಿಂಗ್
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    • ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 14, 2023

    ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ: ಸಿಎಂ ಸಿದ್ದರಾಮಯ್ಯ

    By adminJuly 14, 2023No Comments2 Mins Read
    siddaramaiah

    ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ.  1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. ಆ ಸಂದರ್ಭದಲ್ಲಿ ಮಂಜುನಾಥ್ ಎಂದು ಕಾಂಗ್ರೆಸ್ ಅವರ ಅಭ್ಯರ್ಥಿಯಾಗಿದ್ದಾಗ, ಇಂದಿರಾ ಗಾಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು. ಆ ಕಾಲದಲ್ಲಿಯೂ ಕಾಂಗ್ರೆಸ್ ನವರಿಗೆ ಅಲ್ಲ, ಇಂದಿರಾಗಾಂಧಿ ಹಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು. ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ , ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಎಂದರು.


    Provided by
    Provided by

    ಧರ್ಮಗಳ ನಡುವೆ ಬೆಂಕಿಯಿಡುವುದು ನಮ್ಮ ಪರಂಪರೆಯಲ್ಲ:

    ಕರ್ನಾಟಕದ ಒಂದು ಸಾವಿರ ವರ್ಷಗಳ ಪರಂಪರೆಯನ್ನು ಭಾಷಣದಲ್ಲಿ ಮಾಡಿಕೊಟ್ಟಿದ್ದಾರೆ.  ಕವಿರಾಜಮಾರ್ಗ ಶ್ರೀ ವಿಜಯ ದಲ್ಲಿ ಪರಧರ್ಮವನ್ನು , ಜೀವನ ಮಾರ್ಗಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದೇ ಆಸ್ತಿ ಮತ್ತುಒಡವೆ ಎಂದು ಅದರಲ್ಲಿ ತಿಳಿಸಿದ್ದಾರೆ.  ಅದೇ ಸಮಾಜದ ಆಸ್ತಿ ಎಂದು ಅಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಧರ್ಮಗಳು  ಬೇರೆ ಇರಬಹುದು . ಆದರೆ ಎಲ್ಲ ಧರ್ಮಗಳ ಸಾರ ಒಂದೇ . ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ.  ಎಲ್ಲರದರಲ್ಲೂ  ವೈರುಧ್ಯಗಳಿದ್ದರೂ , ಏಕತೆಯನ್ನು ಕಾಣಬೇಕು. ಅದರಲ್ಲಿ ನಂಬಿಕೆ ಇಟ್ಟವರು ನಾವು. ಯಾವುದು ಒಂದು ಧರ್ಮ, ಜಾತಿಗೆ ಅಂಟಿಕೊಂಡವರಲ್ಲ ಎಂದರು.

    ಜನರು ಆತಂಕದಿಂದ ಬದುಕಬೇಕಿಲ್ಲ :

    ವಿದ್ಯಾಸಿರಿ ಕಾರ್ಯಕ್ರಮವನ್ನು ಜಾರಿಗೆ ತರಲಾಯಿತು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ಈಗ ಮತ್ತೆ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಹೆಚ್ಚು ಒಣಭೂಮಿ ಇದ್ದಿದ್ದರಿಂದ ನಮ್ಮ ಸರ್ಕಾರ  ಕೃಷಿಭಾಗ್ಯ ಯೋಜನೆ ಈಗ ಮತ್ತೆ ಪ್ರಾರಂಭಿಸಲಾಗಿದೆ.  ಜಿಎಸ್ ಟಿ ತೆರಿಗೆ ಸಂಗ್ರಹ , ಅಬಕಾರಿ ಸುಂಕ ಹೆಚ್ಚಳ , ಮೋಟಾರ್ ವೆಹಿಕಲ್ ತೆರಿಗೆ , ಮುದ್ರಾಂಕ ಶುಲ್ಕ ಗಳನ್ನು ಹೆಚ್ಚಿಸಿ 13500 ಕೋಟಿ ಹೆಚ್ಚು ಸಂಗ್ರಹ ಮಾಡಲಾಗುತ್ತಿದೆ. 8000 ಕೋಟಿ ಸಾಲ ಪಡೆಯುತ್ತಿದ್ದೆವೆ. ನುಡಿದಂತೆ ನಡೆಯುತ್ತಿದ್ದೇವೆ. ನಾವು ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿಯವರು 600 ಭರವಸೆಗಳಲ್ಲಿ ಶೇ. 10 ರಷ್ಟೂ  ಈಡೇರಿಸಿಲ್ಲ. ರೈತ ಸಾಲ ಮನ್ನಾ ಎಂದರು. ಆದರೆ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುದಾನ ನಿಗದಿಪಡಿಸಲಾಗಿದೆ.  ಅನುಷ್ಠಾನ ಮಾಡುತ್ತಿದ್ದೇವೆ.  35,410 ಕೋಟಿ ಈ ವರ್ಷ ಉಳಿದ ಅವಧಿಗೆ ಬೇಕಾಗುತ್ತಿದ್ದು , ಅನುದಾನ ನಿಗದಿಪಡಿಸಲಾಗಿದೆ. ಎಲ್ಲ ಐದು ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು , ಜಾರಿ ಮಾಡಿಯೇ ಮಾಡುತ್ತೇವೆ. ಜನರು ಯಾರೂ ಆತಂಕದಿಂದ ಬದುಕುವ ಅವಶ್ಯಕತೆ ಇಲ್ಲ. ಎಲ್ಲರಿಗೂ ಊಟ , ಕಾನೂನು ರಕ್ಷಣೆ , ಕೈಗೆ ಹಣ  ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ತುಮಕೂರು : ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ. ಹರಿವೇಸಂದ್ರ ಗ್ರಾಮದಲ್ಲಿ ಬ್ರೈನ್ ಕ್ಯಾನ್ಸರ್ ಗೆ ತುತ್ತಾದ ಯೋಗಿತಾ ಎಂಬ ಬಾಲಕಿಯ…

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.