nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 14, 2023

    ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ: ಸಿಎಂ ಸಿದ್ದರಾಮಯ್ಯ

    By adminJuly 14, 2023No Comments2 Mins Read
    siddaramaiah

    ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ.  1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. ಆ ಸಂದರ್ಭದಲ್ಲಿ ಮಂಜುನಾಥ್ ಎಂದು ಕಾಂಗ್ರೆಸ್ ಅವರ ಅಭ್ಯರ್ಥಿಯಾಗಿದ್ದಾಗ, ಇಂದಿರಾ ಗಾಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು. ಆ ಕಾಲದಲ್ಲಿಯೂ ಕಾಂಗ್ರೆಸ್ ನವರಿಗೆ ಅಲ್ಲ, ಇಂದಿರಾಗಾಂಧಿ ಹಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು. ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ , ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಎಂದರು.


    Provided by
    Provided by

    ಧರ್ಮಗಳ ನಡುವೆ ಬೆಂಕಿಯಿಡುವುದು ನಮ್ಮ ಪರಂಪರೆಯಲ್ಲ:

    ಕರ್ನಾಟಕದ ಒಂದು ಸಾವಿರ ವರ್ಷಗಳ ಪರಂಪರೆಯನ್ನು ಭಾಷಣದಲ್ಲಿ ಮಾಡಿಕೊಟ್ಟಿದ್ದಾರೆ.  ಕವಿರಾಜಮಾರ್ಗ ಶ್ರೀ ವಿಜಯ ದಲ್ಲಿ ಪರಧರ್ಮವನ್ನು , ಜೀವನ ಮಾರ್ಗಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದೇ ಆಸ್ತಿ ಮತ್ತುಒಡವೆ ಎಂದು ಅದರಲ್ಲಿ ತಿಳಿಸಿದ್ದಾರೆ.  ಅದೇ ಸಮಾಜದ ಆಸ್ತಿ ಎಂದು ಅಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಧರ್ಮಗಳು  ಬೇರೆ ಇರಬಹುದು . ಆದರೆ ಎಲ್ಲ ಧರ್ಮಗಳ ಸಾರ ಒಂದೇ . ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ.  ಎಲ್ಲರದರಲ್ಲೂ  ವೈರುಧ್ಯಗಳಿದ್ದರೂ , ಏಕತೆಯನ್ನು ಕಾಣಬೇಕು. ಅದರಲ್ಲಿ ನಂಬಿಕೆ ಇಟ್ಟವರು ನಾವು. ಯಾವುದು ಒಂದು ಧರ್ಮ, ಜಾತಿಗೆ ಅಂಟಿಕೊಂಡವರಲ್ಲ ಎಂದರು.

    ಜನರು ಆತಂಕದಿಂದ ಬದುಕಬೇಕಿಲ್ಲ :

    ವಿದ್ಯಾಸಿರಿ ಕಾರ್ಯಕ್ರಮವನ್ನು ಜಾರಿಗೆ ತರಲಾಯಿತು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ಈಗ ಮತ್ತೆ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಹೆಚ್ಚು ಒಣಭೂಮಿ ಇದ್ದಿದ್ದರಿಂದ ನಮ್ಮ ಸರ್ಕಾರ  ಕೃಷಿಭಾಗ್ಯ ಯೋಜನೆ ಈಗ ಮತ್ತೆ ಪ್ರಾರಂಭಿಸಲಾಗಿದೆ.  ಜಿಎಸ್ ಟಿ ತೆರಿಗೆ ಸಂಗ್ರಹ , ಅಬಕಾರಿ ಸುಂಕ ಹೆಚ್ಚಳ , ಮೋಟಾರ್ ವೆಹಿಕಲ್ ತೆರಿಗೆ , ಮುದ್ರಾಂಕ ಶುಲ್ಕ ಗಳನ್ನು ಹೆಚ್ಚಿಸಿ 13500 ಕೋಟಿ ಹೆಚ್ಚು ಸಂಗ್ರಹ ಮಾಡಲಾಗುತ್ತಿದೆ. 8000 ಕೋಟಿ ಸಾಲ ಪಡೆಯುತ್ತಿದ್ದೆವೆ. ನುಡಿದಂತೆ ನಡೆಯುತ್ತಿದ್ದೇವೆ. ನಾವು ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿಯವರು 600 ಭರವಸೆಗಳಲ್ಲಿ ಶೇ. 10 ರಷ್ಟೂ  ಈಡೇರಿಸಿಲ್ಲ. ರೈತ ಸಾಲ ಮನ್ನಾ ಎಂದರು. ಆದರೆ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುದಾನ ನಿಗದಿಪಡಿಸಲಾಗಿದೆ.  ಅನುಷ್ಠಾನ ಮಾಡುತ್ತಿದ್ದೇವೆ.  35,410 ಕೋಟಿ ಈ ವರ್ಷ ಉಳಿದ ಅವಧಿಗೆ ಬೇಕಾಗುತ್ತಿದ್ದು , ಅನುದಾನ ನಿಗದಿಪಡಿಸಲಾಗಿದೆ. ಎಲ್ಲ ಐದು ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು , ಜಾರಿ ಮಾಡಿಯೇ ಮಾಡುತ್ತೇವೆ. ಜನರು ಯಾರೂ ಆತಂಕದಿಂದ ಬದುಕುವ ಅವಶ್ಯಕತೆ ಇಲ್ಲ. ಎಲ್ಲರಿಗೂ ಊಟ , ಕಾನೂನು ರಕ್ಷಣೆ , ಕೈಗೆ ಹಣ  ನೀಡುವ ಕೆಲಸ ಮಾಡಲಾಗುತ್ತಿದೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ತುಮಕೂರು: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಸಿದ್ದರಬೆಟ್ಟದ ನೈಸರ್ಗಿಕ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ…

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.