nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯವರಿಗೆ ಮನುಷ್ಯರನ್ನು ಗೌರವಿಸುವ ಒಳ್ಳೆಯ ಸಂಸ್ಕಾರ ಸಂಸ್ಕೃತಿ ಇಲ್ಲ: ಸಿದ್ಧರಾಮಯ್ಯ
    Uncategorized April 6, 2022

    ಬಿಜೆಪಿಯವರಿಗೆ ಮನುಷ್ಯರನ್ನು ಗೌರವಿಸುವ ಒಳ್ಳೆಯ ಸಂಸ್ಕಾರ ಸಂಸ್ಕೃತಿ ಇಲ್ಲ: ಸಿದ್ಧರಾಮಯ್ಯ

    By adminApril 6, 2022No Comments3 Mins Read
    siddaramaiha

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮವಾದ ಜಗನ್ ಜೀವನ್ ರಾಮ್ ರವರ 115ನೇ ಜಯಂತಿ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದ ಸಿದ್ದರಾಮಯ್ಯ,  ಈ ದೇಶ ಶೈಕ್ಷಣಿಕವಾಗಿ ಸಾಕಷ್ಟು ಮುಂದುವರೆದಿದ್ದರೂ ಸಹ ಜಾತಿ ವ್ಯವಸ್ಥೆಯಿಂದ ಹೊರಬಂದಿಲ್ಲ, ನಮ್ಮ ಸಮಾಜ ಅಭಿವೃದ್ಧಿ ಹೊಂದಬೇಕಾದರೆ ಮೊದಲು ಮನುಷ್ಯ ಮನುಷ್ಯನನ್ನು ಪ್ರೀತಿಸುವುದನ್ನು ಕಲಿಯಬೇಕು, ಆದರೆ ಮನುಷ್ಯ ಮನುಷ್ಯರನ್ನು ಗೌರವಿಸುವಂತಹ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಬಿಜೆಪಿಯವರಲ್ಲಿಲ್ಲ ಎಂದರು.

    ಸಮಾಜದ ಎಲ್ಲಾ ಜನಾಂಗದವರನ್ನು ಸಮಾನವಾಗಿ ಕಾಣುವಂತಹ ಮನಸ್ಥಿತಿ ಬಿಜೆಪಿ ಪಕ್ಷದವರಿಗಾಗಲಿ, ಆರ್.ಎಸ್.ಎಸ್,ನಂತಹ ಸಂಘಟನೆಗಳಿಗಾಗಲಿ ಇಲ್ಲ, ಏಕೆಂದರೆ ಅವರೇ ಈ ಸಮಾಜದಲ್ಲಿ ಮೇಲು-ಕೀಳು ಎಂಬ ಭಾವನೆಯನ್ನು ಹುಟ್ಟುಹಾಕಿದ್ದು. ಈ ದೇಶದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಬಾಬೂ ಜಗಜೀವನರಾಂ ರಂತಹ ನಾಯಕರು ಹುಟ್ಟದಿದ್ದರೆ ಅಸ್ಪೃಶ್ಯತೆ ನಿವಾರಣೆ ಆಗುತ್ತಲೇ ಇರಲಿಲ್ಲ ಎಂದರು.

    ಕೆಪಿಸಿಸಿ ರಾಜ್ಯಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮಾತನಾಡಿ, ಪರಿಶಿಷ್ಟ ಜಾತಿಗೆ ಸೇರಿದ ಜಗಜೀವನರಾಂರವರು ಈ ದೇಶದ ಶೋಷಿತ ವರ್ಗದ ಜನರ ರಕ್ಷಣೆಗಾಗಿ ಕಂಕಣಬದ್ಧರಾಗಿ ನಿಂತಿದ್ದರು. ಇವರು ಕಾರ್ಮಿಕ ಇಲಾಖೆ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕೈಗಾರಿಕೆಗಳ ಕಾರ್ಮಿಕರ ಜೊತೆಗೆ ಕೃಷಿ ಕಾರ್ಮಿಕರ ಪರವಾಗಿ ಹೋರಾಟ ಮಾಡಿ, ಹಸಿರುಕ್ರಾಂತಿಯನ್ನು ಮಾಡುವ ಮೂಲಕ ಈ ದೇಶಕ್ಕೆ ಮಾದರಿಯಾಗಿದ್ದಾರೆ. ಅವರು,  ಸಾರಿಗೆ ಇಲಾಖೆಯಲ್ಲಿ, ರಕ್ಷಣಾ ಇಲಾಖೆಯಲ್ಲಿ ಮಂತ್ರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಗಳು, ಅವರು ಮಾಡಿದ ಶಾಸನಗಳು ಇಂದು ದೇಶದ ದೊಡ್ಡ ಅಡಿಪಾಯವಾಗಿ ನಿಂತಿದೆ ಎಂದರು.

    ಇಂತಹ ಮಹಾನ್ ನಾಯಕರ ಜೀವನದ ಸಾಧನೆಗಳನ್ನು ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ರಾಜ್ಯಮಟ್ಟದ ಈ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂಬುದಾಗಿ ಅವರು ಹೇಳಿದರು.

    ಚಿತ್ರದುರ್ಗ ಅಸಂಘಟಿತ ಕಾರ್ಮಿಕ ವಲಯದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಮಾತನಾಡಿ, ಈ ರಾಜ್ಯದಲ್ಲಿನ ಆಡಳಿತರೂಢ ಬಿಜೆಪಿ ಸರ್ಕಾರ ಹಿಜಾಬ್, ಹಲಾಲ್ ನಂತಹ ಸಣ್ಣ ಸಣ್ಣ ವಿಚಾರಗಳನ್ನು ಕುರಿತು ಜನರ ಮನಸ್ಸಿನಲ್ಲಿ ವಿಷಬೀಜವನ್ನು ಬಿತ್ತಿ, ನಮ್ಮನ್ನು ಭಾಗ ಮಾಡಲು ಹೊರಟಿದ್ದಾರೆ. ಇವರೊಂದಿಗೆ ಮಾಧ್ಯಮಮಿತ್ರರು ಸಹ ಸೇರಿಕೊಂಡು ಸಣ್ಣ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ಜನರಲ್ಲಿ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿದ್ದು, ಇದೆಲ್ಲವನ್ನೂ ಅರಿತಿರುವ ನಮ್ಮ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತಹಾಕುವ ಮೂಲಕ ಜಿಲ್ಲೆಯ ಆರಕ್ಕೆ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂಬುದಾಗಿ ಹೇಳಿದರು.

    ಪ್ರಾಸ್ತಾವಿಕನುಡಿಗಳನ್ನಾಡಿದ ಮಾಜಿ ಸಚಿವ ಎಚ್.ಆಂಜನೇಯ, ಈ ದೇಶದ ಉಪಪ್ರಧಾನಿಯಾಗಿ ದಕ್ಷತೆಯನ್ನು ಮೆರೆದ ಏಕೈಕ ಸೋಲರಿಯದ ಜನನಾಯಕನೆಂದರೆ, ಬಾಬುಜಗಜೀವನ್ ರಾಂರವರು. ಈ ದೇಶದ ಶೋಷಿತರ ಹಕ್ಕಿಗಾಗಿ ಹೋರಾಡಿದ ಮಹಾಪುರುಷ, ಇವರು ಕೇಂದ್ರ ಸರ್ಕಾರದ ಕೃಷಿ ಸಚಿವರಾಗಿ, ರಕ್ಷಣಾ ಸಚಿವರಾಗಿ ಈ ದೇಶಕ್ಕಾಗಿ ಸಲ್ಲಿಸಿರುವ ಸೇವೆ ಅತ್ಯಂತ ಸ್ಮರಣೀಯವಾಗಿದೆ ಎಂದರು.

    ಶೋಷಿತವರ್ಗದಿಂದ ಬಂದ ಬಾಬುಜಗಜೀವನ್ ರಾಂರವರು ಪಂಡಿತ್ ಜವಾಹರ್ ಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ರ್ತಿ, ಶ್ರೀಮತಿ ಇಂದಿರಾಗಾಂಧಿಯವರಂತಹ ಮಹಾನ್ ನಾಯಕರ ಸಚಿವಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿರುವ ಇವರು ಈ ದೇಶ ಕಂಡ ಅತ್ಯಂತ ದಕ್ಷ, ಧೀಮಂತ ನಾಯಕ ಇಂತಹ ಶ್ರೇಷ್ಠ ನಾಯಕರ ಜಯಂತಿಯನ್ನು ಕಾಂಗ್ರೆಸ್ ಪಕ್ಷವು ಆಚರಿಸುವ ಮೂಲಕ ದೇಶದ ಜನತೆಗೆ ಅವರ ಸಾಧನೆಗಳನ್ನು ಪರಿಚಯಿಸುತ್ತಿದೆ ಎಂಬುದಾಗಿ ಹೇಳಿದರು.

    ಇದೇ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿ ಮುಖಂಡರಾದ ಪಿ.ಎಸ್.ಆರಾಧ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಮಾಜಿ ಸಚಿವರಾದ ಡಿ.ಸುಧಾಕರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧೃವನಾರಾಯಣ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಅಮರನಾಥ್, ಎಐಸಿಸಿ ಸೂರಜ್ ಹೆಗ್ಡೆ ಮಾಜಿಶಾಸಕರಾದ ಬಿ.ಜಿ.ಗೋವಿಂದಪ್ಪ, ಮೇಲ್ಮನೆ ಸದಸ್ಯರಾದ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್, ಚಳ್ಳಕೆರೆ ಶಾಸಕ ರಘುಮೂರ್ತಿ, ಮಾಜಿ ಶಾಸಕಿ ಶ್ರೀಮತಿ ಜಯಮ್ಮ ಬಾಲರಾಜ್, ಜಿ.ಪಂ.ಮಾಜಿ.ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸುರೇಶ್ ಬಾಬು, ಮಾಜಿ ಜಿ.ಪಂ.ಸದಸ್ಯರಾದ ನಾಗೇಂದ್ರನಾಯ್ಕ, ಪಾಪಣ್ಣ, ಗೀತಾನಾಗಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಎಸ್.ಸಿ ವಿಭಾಗದ ಅಧ್ಯಕ್ಷ ಜಿ.ಎಲ್.ಮೂರ್ತಿ, ಅಸಂಘಟಿತ ಕಾರ್ಮಿಕರ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಂಷುನ್ನೀಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸಾದತ್ ಉಲ್ಲಾ, ದಾದಾಪೀರ್, ಸೇರಿದಂತೆ ನಗರಸಭೆ ಸದಸ್ಯರುಗಳು, ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಅಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವರದಿ: ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ)


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ

    August 13, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    August 12, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ಕಡಜ ಹುಳ ಕಡಿದು 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ…

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.