nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆಬ್ರವರಿ 2ರಂದು ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ: ಡಾ.ಸೋಮಶೇಖರ್
    ತಿಪಟೂರು January 24, 2025

    ಫೆಬ್ರವರಿ 2ರಂದು ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ: ಡಾ.ಸೋಮಶೇಖರ್

    By adminJanuary 24, 2025No Comments2 Mins Read
    tipaturu

    Provided by
    Provided by

    ತಿಪಟೂರು:  ನಗರದ ನಗರಸಭೆ ಪಕ್ಕದಲ್ಲಿ  ಅತ್ಯಾಧುನಿಕ ಉಪಕರಣಗಳನ್ನ ಒಳಗೊಂಡ ಶೇಖರ್ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ ನಡೆಯಲಿದೆ ಎಂದು ಬ್ಲಡ್ ಬ್ಯಾಂಕ್  ಮುಖ್ಯಸ್ಥರಾದ ಡಾ.ಸೋಮಶೇಖರ್ ತಿಳಿಸಿದ್ದಾರೆ.

    ನಗರದ ಶೇಖರ್ ಬ್ಲಡ್ ಬ್ಯಾಂಕ್ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಪತರು ನಾಡಿನ ಜನರ ಬಹುದಿನಗಳ ಬೇಡಿಕೆಯಾಗಿದೆ.  ಬ್ಲಡ್ ಬ್ಯಾಂಕ್ ಫೆಬ್ರವರಿ 2ರಂದು ಪ್ರಾರಂಭೋತ್ಸವ ನಡೆಯಲಿದೆ. ಅತಿಥಿಗಳಾಗಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ.   ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಷಡಕ್ಷರಿ,  ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ  ಎಂದು ಅವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕೆರಗೋಡಿ ರಂಗಾಪುರ ಭೂಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿಗಳು, ನೊಣವಿನಕೆರೆ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಋಷಭ ದೇಶೀಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಜಿಗಳು, ತಿಪಟೂರು ಗುರುಕುಲಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಬಸವ ದೇಶಿ ಕೇಂದ್ರ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.  ನಾಡಿನ  ರಾಜಕೀಯ ಮುಖಂಡರ ಸೇರಿದಂತೆ ಅನೇಕ ಮುಖಂಡರು ಭಾಗವಹಿಸುವರು ಎಂದರು.

    ತಿಪಟೂರು ಸೇರಿದಂತೆ ಸುತ್ತಮುತ್ತಲ ತಾಲೂಕು ಜನರಿಗೆ ತುರ್ತು ಅಗತ್ಯವಾಗಿದ್ದ ಬ್ಲಡ್ ಬ್ಯಾಂಕ್ ಸೌಲಭ್ಯ ತರಲು ಸತತ ನಾಲ್ಕು ವರ್ಷಗಳಿಂದ ಪ್ರಯತ್ನಿಸಿದ್ದು, ಪ್ರಯತ್ನದ ಫಲವಾಗಿ ತಿಪಟೂರಿಗೆ ಅತ್ಯಾಧುನಿಕ ತಂತ್ರಜ್ಞಾನ ಉಳ್ಳಯಂತ್ರೋಪಕರಣಗಳು, ನುರಿತ ತಂತ್ರಜ್ಞರು ಹಾಗೂ ವೈದ್ಯರು ಲಭ್ಯವಿರುತ್ತಾರೆ.  ತಿಪಟೂರು ಸೇರಿದಂತೆ ಸುತ್ತಮುತ್ತಲ ಅನೇಕ ಕಡೆ ಅಪಘಾತಗಳು ಸೇರಿದಂತೆ, ತುರ್ತು ಸಂದರ್ಭಗಳಲ್ಲಿ ಬ್ಲಡ್ ಕೊರತೆಯಿಂದ ಜೀವನ್ಮರಣ ಅನುಭವಿಸಿದ ಸಂದರ್ಭಗಳಿವೆ. ಜನರ ಸಮಸ್ಯೆಗಳನ್ನ ಅರಿತು. ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭ ಮಾಡಬೇಕು ಎಂದು ಸತತ ನಾಲ್ಕು ವರ್ಷದ ಪ್ರಯತ್ನದ ಫಲವಾಗಿ ತಿಪಟೂರಿಗೆ ಬ್ಲಡ್ ಬ್ಯಾಂಕ್ ಅನುಮತಿ ದೊರೆತಿದ್ದು, ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು.

    ತಿಪಟೂರಿನಲ್ಲಿ ಶೇಖರ್ ರಕ್ತನಿಧಿ ಸೆಂಟರ್ ಪ್ರಾರಂಭವಾಗುವುದರಿಂದ, ತಿಪಟೂರು ತುರುವೇಕೆರೆ ಚಿಕ್ಕನಾಯಕನಹಳ್ಳಿ, ಅರಸೀಕೆರೆ ಶ್ರೀರಾಂಪುರ ಸೇರಿದಂತೆ ಸುಮಾರು 70 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಆಗಲಿದೆ. ತುರ್ತು ಅಪಘಾತಗಳು ಸೇರಿದಂತೆ ಚಿಕಿತ್ಸೆಯ ಸಂದರ್ಭದಲ್ಲಿ ರಕ್ತದ ಅಗತ್ಯಕ್ಕಾಗಿ ಸುಮಾರು 70 ಕಿಲೋಮೀಟರ್ ದೂರದಿಂದ ರಕ್ತ ತರಬೇಕಿತ್ತು. ತಿಪಟೂರಿನಲ್ಲಿ ಬ್ಲಡ್ ಬ್ಯಾಂಕ್ ಪ್ರಾರಂಭಗೊಳ್ಳುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಅದೇ ರೀತಿ ಉತ್ತಮವಾದ ಸೇವೆಯನ್ನು ನಮ್ಮ ಬ್ಲಡ್ ಬ್ಯಾಂಕ್ ನಿಂದ ನೀಡಲಾಗುವುದು ಎಂದು ತಿಳಿಸಿದರು.

    ಬ್ಲಡ್ ಬ್ಯಾಕ್ ನಲ್ಲಿ ರಕ್ತದಾನಿಗಳು ನೀಡುವ ರಕ್ತವನ್ನು ಪರೀಕ್ಷೆ ಮಾಡಿ ಹಲವಾರು ವಿಭಾಗಗಳಲ್ಲಿ ವಿಂಗಡಿಸಿ ಅಗತ್ಯವಿರುವಂತಹ ರೋಗಿಗಳಿಗೆ ನೀಡಲಾಗುವುದು ಪರೀಕ್ಷಾ ಶುಲ್ಕ ಹಾಗೂ ಕೇಂದ್ರದ ನಿರ್ವಹಣೆ ಶುಲ್ಕಗಳನ್ನ ಮಾತ್ರ ವಿಧಿಸಲಾಗುವುದು ಕೇಂದ್ರ ಸರ್ಕಾರದ ನಿಯಮಗಳಂತೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರಕ್ಕೆ ರಕ್ತವನ್ನು ನೀಡಲಾಗುವುದು ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಬ್ಲಡ್ ಬ್ಯಾಂಕ್ ತಂತ್ರಜ್ಞರಾದ ನಾಗೇಶ್ ಅದಂ ಉಪಸ್ಥಿತರಿದರು

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ

    June 15, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್,…

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.