ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಈ ಘಟನೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ನಡೆದಿದೆ. ಬಸ್ ನಲ್ಲಿ 30 ಜನ ಪ್ರಯಾಣಿಸುತ್ತಿದ್ದರೂ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್ ರೋಸ್ ಗಾರ್ಡನ್ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್ ನಲ್ಲಿ ಚಾಲಕ ಬಸ್ ಬಂದ್ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್ ಆಗಲಿಲ್ಲ. ಈ ವೇಳೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಬಸ್ ಸುಟ್ಟು ಭಸ್ಮವಾಗಿದೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA