nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
    • ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
    • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
    • ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
    • ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
    • ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
    • ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
    • ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂಸ್ಟರ್ ಡೋಸ್‌ಗೆ ಜನರ ನಿರಾಸಕ್ತಿ: ದುಡ್ಡು ಕೊಟ್ಟು ಲಸಿಕೆ ಹಾಕಿಸಿಕೊಳ್ಳಬೇಕೆ?
    ರಾಜ್ಯ ಸುದ್ದಿ April 11, 2022

    ಬೂಸ್ಟರ್ ಡೋಸ್‌ಗೆ ಜನರ ನಿರಾಸಕ್ತಿ: ದುಡ್ಡು ಕೊಟ್ಟು ಲಸಿಕೆ ಹಾಕಿಸಿಕೊಳ್ಳಬೇಕೆ?

    By adminApril 11, 2022No Comments2 Mins Read
    booster dose

    ದೇಶಾದ್ಯಂತ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡುವ ಕಾರ್ಯ ಆರಂಭವಾಗಿದ್ದರೂ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಕಡೆ ಬೂಸ್ಟರ್ ಡೋಸ್ ಲಸಿಕೆಗೆ ಹೆಚ್ಚಿನ ಆಸಕ್ತಿ ತೋರಿಲ್ಲ. ಕೊರೊನಾ ಸೋಂಕು ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚೆರಿಕೆ ಡೋಸ್ ಪಡೆಯಲು ಜನ ಹೆಚ್ಚಿನ ಉತ್ಸಾಹ ಕಂಡು ಬಂದಿಲ್ಲ. ಲಸಿಕಾ ಕೇಂದ್ರಗಳತ್ತ ಜನ ಬೂಸ್ಟರ್ ಡೋಸ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲ.

    ಕೋವಿಡ್‌ ನ 1 ಮತ್ತು 2ನೇ ಅಲೆ ಸಂದರ್ಭದಲ್ಲಿ ಲಸಿಕೆಗಾಗಿ ಲಸಿಕಾ ಕೇಂದ್ರಗಳಿಗೆ ಮುಗಿಬಿದ್ದು, ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಲಸಿಕೆ ಹಾಕಿಸಿಕೊಳ್ಳುತ್ತಿದ್ದ ಜನ, ಬೂಸ್ಟರ್ ಡೋಸ್ ಲಸಿಕೆ ಬಗ್ಗೆ ಮಾತ್ರ ಅಷ್ಟೇನೂ ಉತ್ಸಾಹ ತೋರುತ್ತಿಲ್ಲ. ನೋಡೋಣ ಸರ್ಕಾರವೇ ಉಚಿತವಾಗಿ ಲಸಿಕೆ ಕೊಡಬಹುದು ಎಂಬ ನಿರೀಕ್ಷೆಯಲ್ಲಿ ಕೆಲವರಿದ್ದರೆ, ಇನ್ನೂ ಕೆಲವರು ಈಗ ಕೊರೊನಾ ಇಲ್ಲ, ಮುಂದೆ ಕೊರೊನಾ ಸೋಂಕು ಜಾಸ್ತಿಯಾದರೆ ಆಗ ಲಸಿಕೆ ಹಾಕಿಸಿಕೊಳ್ಳೋಣ ಎಂಬ ಮನಃಸ್ಥಿತಿಯಲ್ಲಿರುವುದು ಬೂಸ್ಟರ್ ಡೋಸ್ ಲಸಿಕೆಗೆ ಹೆಚ್ಚಿನ ಪ್ರತಿಕ್ರಿಯೆ ಸಿಕ್ಕಿಲ್ಲ.


    Provided by
    Provided by

    ಬೂಸ್ಟರ್ ಡೋಸ್ ಲಸಿಕೆಯನ್ನು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದು, ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುತ್ತಿಲ್ಲ ಹಾಗಾಗಿಯೇ ಸಾಮಾನ್ಯ ಜನ ದುಡ್ಡು ಕೊಟ್ಟು ಲಸಿಕೆ ಹಾಕಿಸಿಕೊಳ್ಳಬೇಕೆ ಎಂಬ ಮನಃಸ್ಥಿತಿಯಲ್ಲಿದ್ದು, ಬೂಸ್ಟರ್ ಡೋಸ್ ಲಸಿಕೆ ನೀಡಿಕೆಗೆ ಮೊದಲ ದಿನ ಹೆಚ್ಚಿನ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

    ಕೊರೊನಾ ಮೊದಲನೇ ಮತ್ತು ೨ನೇ ಡೋಸ್ ಲಸಿಕೆಯನ್ನು ಸರ್ಕಾರ ಉಚಿತವಾಗಿ ನೀಡಿದಂತೆ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಬಹುದು, ಅಲ್ಲಿಯವರೆಗೂ ಕಾಯೋಣ ದುಡ್ಡುಕೊಟ್ಟು ಲಸಿಕೆ ಹಾಕಿಸಿಕೊಳ್ಳುವುದು ಬೇಡ ಎಂಬ ಭಾವನೆಯಲ್ಲಿ ಕೆಲವರಿದ್ದಾರೆ. ಬೂಸ್ಟರ್ ಡೋಸ್ ನೀಡುವ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್‌ ಗೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಇಂದು ಬಂದಿಲ್ಲ.ದೇಶದಲ್ಲಿ ಸದ್ಯ ಕೊರೊನಾ ಸೋಂಕು ಪ್ರಕರಣ ಇಳಿಕೆಯಾಗಿದೆ. ಕೊರೊನಾ ಮಾಯವಾಗಿದೆ ಎಂಬಂತಹ ಪರಿಸ್ಥಿತಿ ಇದೆ. ಜತೆಗೆ ಹಲವು ರಾಜ್ಯಗಳಲ್ಲಿ ಕಡ್ಡಾಯ ಮಾಸ್ಕ್‌ಗೂ ವಿನಾಯಿತಿ ನೀಡಲಾಗಿದೆ.

    ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡ್ಡಾಯ ಮಾಸ್ಕ್‌ಗೆ ವಿನಾಯಿತಿ ಇರದಿದ್ದರೂ ಬಹುತೇಕ ಜನ ಮಾಸ್ಕ್ ಧರಿಸುವುದನ್ನೇ ಬಿಟ್ಟಿದ್ದಾರೆ. ಹೀಗಾಗಿ ಬೂಸ್ಟರ್ ಡೋಸ್ ಲಸಿಕೆಗೂ ಜನ ಹೆಚ್ಚಿನ ಆಸಕ್ತಿ ತೋರಿಲ್ಲ. ಹಾಗಾಗಿ, ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಬಹಳ ವಿರಳವೆನಿಸಿದೆ,

    ಕೋವಿಡ್‌ನ ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆಯನ್ನು ಸರ್ಕಾರ ಉಚಿತವಾಗಿ ಎಲ್ಲರಿಗೂ ನೀಡಿತ್ತು. ಆದರೆ, ಬೂಸ್ಟರ್ ಡೋಸ್ ಲಸಿಕೆಗೆ 225 ರೂ. ದರ ನಿಗದಿ ಮಾಡಿ ಜತೆಗೆ ಸೇವಾ ಶುಲ್ಕವನ್ನು 150 ರೂ. ಪಡೆಯಲು ಸರ್ಕಾರ ಅವಕಾಶ ನೀಡಿದೆ. ಹಾಗಾಗಿ, ಬೂಸ್ಟರ್ ಡೋಸ್ ಲಸಿಕೆ ಪಡೆಯಲು  475 ರೂ. ತೆರಬೇಕಾಗುತ್ತದೆ.ಜನ ಸಾಮಾನ್ಯರು ಇಷ್ಟೊಂದು ದುಡ್ಡು ನೀಡಿ ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದು, ಕೆಲವೇ ಕೆಲವು ಮಂದಿ ಮಾತ್ರ ಖಾಸಗಿ ಕೇಂದ್ರಗಳಲ್ಲಿ ದುಡ್ಡು ನೀಡಿ ಬೂಸ್ಟರ್ ಡೋಸ್ ಲಸಿಕೆ ಪಡೆದಿದ್ದಾರೆ.

    2ನೇ ಡೋಸ್ ಲಸಿಕೆ ಪಡೆದು 9 ತಿಂಗಳು ಪೂರ್ಣಗೊಂಡವರು ಮಾತ್ರ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಬೂಸ್ಟರ್ ಡೋಸ್ ಪಡೆಯಲು ಆನ್‌ ಲೈನ್‌ ನಲ್ಲಿ ಸಮಯ ನಿಗದಿ ಮಾಡಿ ಅಥವಾ ನೇರವಾಗಿ ಖಾಸಗಿ ಲಸಿಕಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಬಹುದಾಗಿದೆ.

    ಕೋವಿಡ್ ಮುಂಚೂಣಿ ಕಾರ್ಯಕರ್ತರು ಮತ್ತು ೬೦ ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಉಚಿತವಾಗಿ ನೀಡುವುದು ಮುಂದುವರೆದಿದೆ. ೬೦ ವರ್ಷ ಕೆಳಗಿರುವವರು ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಹಣ ಪಾವತಿಸಿ ಬೂಸ್ಟರ್ ಡೋಸ್ ಲಸಿಕೆ ತೆಗೆದುಕೊಳ್ಳಬೇಕು.

    ಮಕ್ಕಳಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮೊದಲನೇ ಡೋಸ್ ಹಾಗೂ ೨ನೇ ಡೋಸ್ ಲಸಿಕೆಯನ್ನು ಹಾಕಲಾಗುತ್ತಿದೆ. ರಾಜ್ಯದಲ್ಲಿ ೧೮ ವರ್ಷ ಮೇಲ್ಪಟ್ಟ ೪.೯೭ ಮಂದಿ ಮೊದಲ ಡೋಸ್ ಹಾಗೂ ೪.೭೬ ಕೋಟಿ ಮಂದಿ ೨ನೇ ಡೋಸ್ ಪಡೆದುಕೊಂಡಿದ್ದಾರೆ.೨ನೇ ಡೋಸ್ ಪಡೆದುಕೊಂಡಿರುವ ೪.೭೬ ಕೋಟಿ ಮಂದಿ ೨ನೇ ಡೋಸ್ ಪಡೆದು ೯ ತಿಂಗಳಾಗಿದ್ದರೆ, ಈಗ ಅವರು ಬೂಸ್ಟರ್ ಡೋಸ್‌ನ್ನು ಪಡೆಯಬಹುದು ಎಂದು ಆರೋಗ್ಯ ಇಲಾಖೆ ಹೇಳಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ

    December 21, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.